ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಅಂಜೂರ ಹಣ್ಣಿನಿಂದ ವೈನ್ ತಯಾರಿಕೆ, ರೈತರಿಗೋಸ್ಕರ ಹೊಸ ತಂತ್ರಜ್ಞಾನ
ರಾಯಚೂರು, ಡಿಸೆಂಬರ್, 22: ಜಿಲ್ಲೆಯಲ್ಲಿ ಅಂಜೂರ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ನಿವಾರಿಸುವ ನಿಟ್ಟಿನಲ್ಲಿ ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಸಂಸ್ಕರಣಾ ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ಅಧಿಕಾರಿಗಳು ವೈನ್ ತಂತ್ರಜ್ಞಾನವನ್ನು ಆವಿಷ್ಕರಿಸಿದ್ದಾರೆ. ಹಾಗೆಯೇ ಪಿಒಪಿ ಬಿಡುಗಡೆ ಮಾಡಲಾಗಿದೆ. ಈ ತಂತ್ರಜ್ಞಾನ ಆವಿಷ್ಕಾರಕ್ಕೆ ವೈನ್ ಬೋರ್ಡ್ನಿಂದ ಮಾನ್ಯತೆಯನ್ನೂ ಪಡೆದಿದ್ದಾರೆ.
ಸಾಮಾನ್ಯವಾಗಿ ತೋಟಗಾರಿಕೆ ಬೆಳೆಗಾರರಿಗೆ ತಮ್ಮ ಬೆಳೆ ಸಂರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲಾಗಿರುತ್ತದೆ. ಹಣ್ಣುಗಳನ್ನು ಹೆಚ್ಚು ದಿನ ಉಳಿಸಲಾಗದು. ಅದರಲ್ಲೂ ಅಂಜೂರ ಬೆಳೆಯ ಜೀವಿತಾವಧಿಯೇ ಮೂರರಿಂದ ನಾಲ್ಕು ದಿನಗಳು ಮಾತ್ರ ಇರುತ್ತದೆ. ಒಮ್ಮೆ ಹಣ್ಣುಗಳು ಕೊಳೆತು ಹೋದರೆ, ಹಣ್ಣುಗಳನ್ನು ಬೆಳೆದ ರೈತರು ಭಾರಿ ಪ್ರಮಾಣದ ನಷ್ಟ ಅನುಭವಿಸಬೇಕಾಗುತ್ತದೆ. ಆಗ ಕಷ್ಟಪಟ್ಟು ಬೆಳೆದ ಹಣ್ಣುಗಳನ್ನೆಲ್ಲ ರಸ್ತೆಗೆ ಎಸೆಯದೇ ಬೇರೆ ವಿಧಿಯಿಲ್ಲ ಎನ್ನುವ ಪರಿಸ್ಥಿತಿಯೂ ನಿರ್ಮಾಣ ಆಗುತ್ತದೆ. ರೈತರ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿ ವಿಶ್ವ ವಿದ್ಯಾಲಯ ವಿಜ್ಞಾನಿಗಳು ಕಳೆದ ಒಂದೂವರೆ ವರ್ಷಗಳಿಂದ ಪ್ರಯೋಗ ನಡೆಸಿದ್ದರು. ಇದರ ಫಲವಾಗಿ ಇತ್ತೀಚೆಗಷ್ಟೇ ಅಂಜೂರ ಹಣ್ಣಿನಿಂದ ವೈನ್ ತಯಾರಿಸುವ ಮಾದರಿಯನ್ನು ಕಂಡು ಹಿಡಿದಿದ್ದಾರೆ. ಅಂಜೂರ ವೈನ್ ಕೂಡ ಉತ್ತಮ ಸ್ವಾದ ಹೊಂದಿದ್ದು, ಆಸಕ್ತರು ಅಬಕಾರಿ ಇಲಾಖೆಯಿಂದ ಅನುಮತಿ ಪಡೆದು ಕೃಷಿ ವಿವಿಯ ಆವಿಷ್ಕಾರದ ನೆರವಿನೊಂದಿಗೆ ವೈನ್ ತಯಾರಿಕೆ ಮಾಡಬಹುದಾಗಿದೆ.

ಅಂಜೂರ ಹಣ್ಣಿನಿಂದ ವೈನ್ ತಯಾರಿಕೆ
ಅಂಜೂರ್ ವೈನ್ ತಯಾರಿಕೆ ಕ್ರಮ ಹಾಗೂ ವೆಚ್ಚ ಕೂಡ ಕಡಿಮೆಯಾಗಿದೆ. ಈ ವೈನ್ ತಯಾರಿಸಲು ವರ್ಷಗಟ್ಟಲೇ ಕಾಯಬೇಕಿಲ್ಲ. 25 ದಿನಗಳಲ್ಲೇ ವೈನ್ ತಯಾರಿಸಬಹುದಾಗಿದೆ. ಒಂದು ಕೆ.ಜಿ. ಅಂಜೂರ ಹಣ್ಣಿನಿಂದ ಸುಮಾರು ಒಂದೂವರೆ ಲೀಟರ್ ವೈನ್ ಉತ್ಪಾದನೆ ಆಗುತ್ತದೆ. ಒಂದು ಲೀಟರ್ ಉತ್ಪಾದನೆಗೆ ಅಂದಾಜು ನೂರು ರೂಪಾಯಿ ಖರ್ಚಾಗಬಹುದು. ಇದನ್ನು ಮಾರುಕಟ್ಟೆಯಲ್ಲಿ 300 -400 ರೂಪಾಯಿವರೆಗೆ ಮಾರಾಟ ಮಾಡಬಹುದು. ಶೇಕಡಾ 5ಕ್ಕಿಂತ ಹೆಚ್ಚು ಆಲ್ಕೋಹಾಲ್ ಅಂಶವಿರುವ ಮದ್ಯ ಉತ್ಪಾದನೆ ಮಾಡಬೇಕಾದರೆ ಅಬಕಾರಿ ಇಲಾಖೆ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕಿದೆ.

ಕೃಷಿ ವಿವಿಯಲ್ಲಿ ಅಂಜೂರ ವೈನ್ ತಯಾರಿಕೆ
ಇಲ್ಲಿ ಉತ್ಪಾದನೆಯಾಗಿರುವ ಅಂಜೂರ ವೈನ್ನಲ್ಲಿ ಶೇಕಡಾ 12ರಷ್ಟು ಆಲ್ಕೋಹಾಲ್ ಅಂಶ ಕಂಡುಬಂದಿದೆ. ಹೀಗಾಗಿ ಉತ್ಪಾದಕರು ಅಬಕಾರಿ ಇಲಾಖೆಯಿಂದ ಅನುಮತಿ ಪಡೆದುಕೊಂಡಲ್ಲಿ ಕೃಷಿ ವಿಶ್ವ ವಿದ್ಯಾಲಯ ಇಂತಿಷ್ಟು ಶುಲ್ಕ ಪಡೆದು ವೈನ್ ಉತ್ಪಾದನಾ ಮಾದರಿ ನೀಡಲು ಸಿದ್ಧತೆಯಲ್ಲಿದೆ.
ಕೃಷಿ ವಿವಿಯಲ್ಲಿ ವೈನ್ ತಯಾರಿಕೆ ಮಾಡಿರುವುದು ಇದೇ ಮೊದಲೇನಲ್ಲ. ಹಿಂದೆ ಕೂಡ ಈ ಭಾಗದಲ್ಲಿ ಹೆಚ್ಚಾಗಿ ಸಿಗುವ ಬಾರೆಹಣ್ಣಿನ ವೈನ್ ತಯಾರಿಕೆ ತಂತ್ರಜ್ಞಾನವನ್ನು ಅವಿಷ್ಕರಿಸಿದ್ದರು. 2018ರಲ್ಲಿ ಇದನ್ನು ಕಂಡು ಹಿಡಿಯಲಾಗಿತ್ತು. ಬಾರೆಹಣ್ಣು ಕೂಡ ಬೇಗ ಕೊಳತು ಹೋಗುತ್ತದೆ. ವಿನೂತನ ತಂತ್ರಜ್ಞಾನದ ಮೂಲಕ ಬಾರೆ ಹಣ್ಣಿನ ವೈನ್ ತಯಾರಿಸಲಾಗಿತ್ತು.

ರೈತರಿಗೆ ಅನುಕೂಲವಾಗುವ ತಂತ್ರಜ್ಞಾನ
ಉಮ್ರಾನ್ ಮಾದರಿಯ ಹಣ್ಣುಗಳನ್ನು ಬಳಸಿ ವೈನ್ ತಯಾರಿಸಲಾಗಿತ್ತು. ಆಗ ಶೇಕಡಾ 12.1ರಷ್ಟು ಆಲ್ಕೋಹಾಲ್ ಅಂಶ ಒಳಗೊಂಡಿತ್ತು. ಇದು ಕೂಡ ಪಿಒಪಿ ಬಿಡುಗಡೆ ಮಾಡಲಾಗಿದೆ. ಬಾರೆಹಣ್ಣಿಗೂ ವಾಣಿಜ್ಯ ಕ್ಷೇತ್ರದಲ್ಲಿ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಈ ಪ್ರಯೋಗವನ್ನು ಮಾಡಲಾಗಿತ್ತು ಎಂದು ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಮಪ್ಪ ವಿವರಿಸಿದರು.

ಕೃಷಿ ವಿವಿಯಿಂದ ವೈನ್ ಉತ್ಪಾದನೆ ತಂತ್ರಜ್ಞಾನ
ಅಂಜೂರ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಳೆದ ಒಂದೂವರೆ ವರ್ಷದಿಂದ ಪ್ರಯೋಗ ನಡೆಸಿ ವೈನ್ ಉತ್ಪಾದನೆ ತಂತ್ರಜ್ಞಾನವನ್ನು ಕಂಡು ಹಿಡಿಯಲಾಗಿದೆ. ಶೇಕಡಾ 12 ರಷ್ಟು ಅಲ್ಕೋಹಾಲ್ ಅಂಶದ ಸ್ವಾದಿಷ್ಟ ವೈನ್ ತಯಾರಿಸಬಹುದು. ರಾಜ್ಯದಲ್ಲಿ ಇದೇ ಮೊದಲ ಪ್ರಯೋಗವಾಗಿದೆ ಎಂದು ಕೃಷಿ ವಿವಿಯ ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಪಕಿ ಸ್ವಪ್ನ ವಿದ್ಯಾಸಾಗರ್ ಹೇಳಿದರು.
ಅಂಜೂರ ಹಣ್ಣಿನಿಂದ ವೈನ್ ಉತ್ಪಾದನೆ ಮಾಡುವ ತಂತ್ರಜ್ಞಾನವನ್ನು ಕಂಡು ಹಿಡಿಯಲಾಗಿದೆ. ಇದು ವೈನ್ ಬೋರ್ಡ್ನಿಂದಲೂ ಅಂಗೀಕೃತಗೊಂಡಿದ್ದು, ಕೃಷಿ ವಿವಿಯಿಂದ ಪಿಒಪಿ ಕೂಡ ಬಿಡುಗಡೆ ಮಾಡಿದ್ದೇವೆ. ಆದರೆ ಉತ್ಪಾದನೆ ಮಾರಾಟಕ್ಕೆ ನಮಗೆ ಅವಕಾಶ ಇರುವುದಿಲ್ಲ. ಹೀಗಾಗಿ ಆಸಕ್ತರು ಅಬಕಾರಿ ಇಲಾಖೆ ಅನುಮತಿ ಪಡೆದಲ್ಲಿ ಅವರಿಗೆ ವೈನ್ ಉತ್ಪಾದನಾ ಮಾದರಿ ನೀಡಲಾಗುವುದು ಎಂದು ಕೃಷಿ ವಿವಿಯ ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಉದಯಕುಮಾರ್ ನಿಡೋಣಿ ತಿಳಿಸಿದರು
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications