ತಡವಾಗಿ ಬಂದ ಯಶ್ ಕಾರಿನ ಗ್ಲಾಸ್ ಪೀಸ್ ಪೀಸ್
ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಕ್ಕೆ ಚಿತ್ರ ನಟ ಯಶ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ 27ರ ರಾತ್ರಿ ನಡೆದಿದೆ.
ಯಾದಗಿರಿ, ಫೆಬ್ರವರಿ 28: ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಕ್ಕೆ ಚಿತ್ರ ನಟ ಯಶ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ 27ರ ರಾತ್ರಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ರೈತರ ಜತೆ ಸಂವಾದಕ್ಕೆ ನಟ ಯಶ್ ಮಧ್ಯಾಹ್ನ ಎರಡು ಗಂಟೆಗೆ ಬರಬೇಕಾಗಿತ್ತು. ಆದರೆ ರಾತ್ರಿ 9 ಗಂಟೆಗೆ ಬಂದಿದ್ದರಿಂದ ಆಕ್ರೋಶಗೊಂಡ ಅಭಿಮಾನಿಗಳು ಯಶ್ ಕಾರಿನ ಮೇಲೆ ಮುಗಿಬಿದ್ದರು. ಇದರಿಂದ ದುಬಾರಿ ಕಾರಿನ ಗ್ಲಾಸ್ ಪುಡಿ ಪುಡಿಯಾಯಿತು.[ಹಸಿರು ವಿಜಯಪುರಕ್ಕಾಗಿ ಫೆಬ್ರವರಿ 26ರಂದು ಮ್ಯಾರಥಾನ್]

ಕೆಲವು ಅಭಿಮಾನಿಗಳು ಆಕ್ರೋಶದಿಂದ ಚೇರ್ ಗಳನ್ನು ಎತ್ತಿ ಬಿಸಾಡಿ ದಾಂಧಲೆಯನ್ನೂ ಎಬ್ಬಿಸಿದ ಘಟನೆಗಳು ನಡೆಯಿತು. ತಮ್ಮ 'ಯಶೋಮಾರ್ಗ' ಕಾರ್ಯಕ್ರಮದ ಸಲುವಾಗಿ ಯಶ್ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತಿದ್ದು ಬರ ಅಧ್ಯಯನದಲ್ಲಿ ತೊಡಗಿದ್ದಾರೆ. ಇದೇ ಸಂಬಂಧ ಯಾದಗಿರಿ ಜಿಲ್ಲೆಯಲ್ಲಿ ರೈತರ ಜತೆ ಸಂವಾದ ಆಯೋಜಿಸಿಲಾಗಿತ್ತು.[ಯಶ್ ಹುಟ್ಟುಹಬ್ಬಕ್ಕೆ ವೆಬ್ ಲೋಕಕ್ಕೆ ಯಶೋಮಾರ್ಗ ಎಂಟ್ರಿ!]












Click it and Unblock the Notifications