ಕುಲಾಂತರಿ ಬದನೆಗೆ ಕರ್ನಾಟಕ ಕೊಕ್

ಬಿಟಿ ಬದನೆ ವಿರೋಧಿಸಿ ತಮ್ಮನ್ನು ಭೇಟಿ ಮಾಡಿದ ನಿಯೋಗದೊಂದಿಗೆ ಮಾತನಾಡಿದ ಅವರು, ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುವ ಇಂಥ ಬಿಟಿ ಬದನೆಗಳನ್ನು ಬೆಳೆಯುವ ಅವಶ್ಯಕತೆ ರೈತರಿಗಿಲ್ಲ. ಕುಲಾಂತರಿ ಬೀಜಗಳಿಂದ ಹಾನಿಯಾಗಲಿದೆ ಎನ್ನುವುದಾದರೆ ಅದರ ಪ್ರವೇಶಕ್ಕೆ ರಾಜ್ಯ ಸರಕಾರ ಬೆಂಬಲ ನೀಡುವುದಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಮುಂದುವರೆದ ದೇಶಗಳಲ್ಲಿ ಈ ಬಿಟಿ ಬದನೆಯನ್ನು ನಿಷೇಧಿಸಲಾಗಿದೆ. ಆದರೆ ರಾಜ್ಯದಲ್ಲಿ ಪ್ರವೇಶ ನೀಡುತ್ತಿರುವುದು ಏಕೆ ? ಸ್ಥಳೀಯವಾಗಿ ಬೆಳೆಯುವ ಬದನೆ ತಳಿಗಳಿಲ್ಲ ಹೆಚ್ಚು ಪೌಷ್ಠಿಕಾಂಶದಿಂದ ಕೂಡಿರುವ ಹಾಗೂ ಪ್ರಸ್ತುತ ರೈತರಿಂದ ಬರುವ ಬೇಡಿಕೆಗೆ ಅನುಗುಣವಾಗಿ ಉತ್ತಮ ತಳಿಯ ಬೀಜಗಳು ಮಾರುಕಟ್ಟೆಯಲ್ಲಿ ಲಭ್ಯವಿರುವಾಗ ಇನ್ನು ಬಿಟಿ ಬದನೆಯ ಅವಶ್ಯಕತೆ ರೈತನಿಗೆ ಇದೆಯೇ ಎಂಬ ಪ್ರಶ್ನೆಯೊಂದಿಗೆ ತೆರೆಳಿದ ನಿಯೋಗಕ್ಕೆ ಮುಖ್ಯಮಂತ್ರಿ ಈ ಭರವಸೆ ನೀಡಿದರು.
ಕೃಷಿ ವಿಜ್ಞಾನಿಗಳಾದ ಡಾ ಪುಷ್ಪಾ ಬಾರ್ಗವ, ಕವಿತಾ ಕುರುಗಂಟಿ, ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಹಜ ಸಮೃದ್ಧಿ ಸಂಸ್ಥೆಯ ಜಿ ಕೃಷ್ಣಪ್ರಸಾದ್, ಬೆಂಗಳೂರು ಕೃಷಿ ವಿವಿ ನಿವೃತ್ತ ಕುಲಪತಿ ಡಾ ಜಿ ಕೆ ವೀರೇಶ್, ಹಿರಿಯ ಪತ್ರಕರ್ತ ನಾಗೇಶ ಹೆಗಡೆ, ಬರಹಗಾರ ಬೇಳೂರು ಸುದರ್ಶನ್ ಮತ್ತು ವರ್ತೂರು ನಾರಾಯಣರೆಡ್ಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು. ಕುಲಾಂತರಿ ಬದನೆ ಬೆಳೆಯಲು ಕೇರಳ ಮತ್ತು ಒರಿಸ್ಸಾ ಸರಕಾರಗಳು ನಿಷೇಧಿಸಿವೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications