ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ.14ರಂದು ನಿರಂತರ ಜ್ಯೋತಿ ಜಾರಿಗೆ, ಆರದಿರಲಿ ದೀಪ

By Staff
|
Google Oneindia Kannada News

Yeddyurappa
ಶಿವಮೊಗ್ಗ, ಡಿ. 29 : ಬಿಜೆಪಿ ಸರಕಾರದ ಬಹುನಿರೀಕ್ಷಿತ ಯೋಜನೆಯಾದ ಗ್ರಾಮೀಣ ಪ್ರದೇಶಗಳಿಗೆ 24 ಗಂಟೆಗೆ ವಿದ್ಯುತ್ ಒದಗಿಸುವ ನಿರಂತರ ಜ್ಯೋತಿ ವಿದ್ಯುತ್ ಯೋಜನೆಗೆ ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜನವರಿ 14 ರಂದು ಚಾಲನೆ ನೀಡಲಿದ್ದಾರೆ.

ಯೋಜನೆಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿ ನಡೆಸಿದ ಇಂಧನ ಸಚಿವ ಕೆ ಎಸ್ ಈಶ್ವರಪ್ಪ, ಕೃಷಿಯೇತರ ಚಟುವಟಿಕೆಗಳಿಗೆ ದಿನದ 24 ಗಂಟೆಗಳೂ ವಿದ್ಯುತ್ ನೀಡುವ ಈ ಮಹತ್ತರ ಯೋಜನೆ ಎರಡು ಹಂತದಲ್ಲಿ ಜಾರಿಯಾಗುತ್ತಿದೆ. ಮೊದಲ ಹಂತದಲ್ಲಿ 1,202 ಕೋಟಿ ರುಪಾಯಿ ವೆಚ್ಚದಲ್ಲಿ 70 ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಈ ಯೋಜನೆಯಡಿ ವಿದ್ಯುತ್ ಪ್ರದೇಶಗಳಿಗೆ ಈ ಯೋಜನೆಯಡಿ ಪೂರೈಕೆಯಾಗಲಿದೆ. ಅದೇ ರೀತಿ, 2 ನೇ ಹಂತದಲ್ಲಿ 920 ಕೋಟಿ ರುಪಾಯಿ ವೆಚ್ಚದಲ್ಲಿ 56 ತಾಲ್ಲೂಕುಗಳಲ್ಲಿ ಈ ಯೋಜನೆಯನ್ನು ತರಲಾಗುವುದು ಎಂದು ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X