ಅಡಿಕೆ ಬೆಳೆಗೆ ಹಳದಿ ರೋಗ ಕಾಟ: ಬೇಸತ್ತು ಊರು ಬಿಡುತ್ತಿರುವ ಮಲೆನಾಡಿಗರು
ಚಿಕ್ಕಮಗಳೂರು, ಆಗಸ್ಟ್, 25: ನಿತ್ಯ ನೂರಾರು ಜನರಿಗೆ ಅನ್ನ ಹಾಕುತ್ತಿದ್ದ ಜಿಲ್ಲೆಯ ಮಲೆನಾಡ ಪುರಾತನ ಮನೆಗಳು ಪಾಳುಬಿದ್ದು ಲೂಟಿಹೊಡೆದ ಕೋಟೆಯಂತಾಗಿವೆ. ಹೀಗೆ ಜಿಲ್ಲೆಯಲ್ಲಿ ಅಡಿಕೆಗೆ ತಗುಲಿರುವ ಹಳದಿ ಎಲೆ ರೋಗವನ್ನು ನಿಯಂತ್ರಿಸಲಾಗದೆ ಮಲೆನಾಡಿನ ನೂರಾರು ಜನ ಬದುಕಿ-ಬಾಳಿದ್ದ ಮನೆಗಳನ್ನು ಬಿಟ್ಟು ಊರುಗಳನ್ನೇ ಬಿಡುತ್ತಿದ್ದಾರೆ.
ನೂರಾರು ಜನ ಊರು ಬಿಟ್ಟಿದ್ದರೆ, ಮತ್ತೆ ಕೆಲವರು ತೋಟಗಳತ್ತ ಮುಖ ಮಾಡುವುದನ್ನೇ ಮರೆತುಬಿಟ್ಟಿದ್ದಾರೆ. ಅನಾದಿ ಕಾಲದಿಂದಲೂ ಬದುಕಿ ಬಾಳಿದ್ದ ಮನೆಗಳು ಈಗ ಖಾಲಿ-ಖಾಲಿ. ತುತ್ತಿನ ಚೀಲಕ್ಕಾಗಿ ಸಾಲ ಮಾಡುವುದಲ್ಲದೆ, ಗುಳೇ ಹೋಗುತ್ತಿದ್ದಾರೆ. ಇದೀಗ ದೇವರ ಫೋಟೋಗಳು, ಮಕ್ಕಳು ಓದಿದ ಪುಸ್ತಕಗಳು, ಅಡಿಗೆ ಪಾತ್ರೆಗಳು, ಪಾಳು ಬಿದ್ದ ರೈತನ ಮನೆಯ ನೆನಪಾಗಿ ಉಳಿದಿವೆ.

ಐದು ದಶಕಗಳಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಳದಿ ಎಲೆ ರೋಗ ಬೆಳೆಗಾರರಿಗೆ ಕೃಷಿ ಬಗ್ಗೆಯೇ ಆಸಕ್ತಿ ಕಳೆದುಕೊಳ್ಳುವಂತೆ ಮಾಡಿದೆ. ಕಿವಿಗೆ ಬಿದ್ದ ಔಷಧಿಯನ್ನೆಲ್ಲಾ ಸಿಂಪಡಿಸಿದರೂ ರೈತರ ಜೇಬು ಬರಿದಾಗುತ್ತಿದೆಯೇ ವಿನಃ ರೋಗ ನಿಯಂತ್ರಣಕ್ಕೆ ಬಾರಲೇ ಇಲ್ಲ. ಶೃಂಗೇರಿ-ಕೊಪ್ಪ-ಎನ್.ಆರ್.ಪುರ ತಾಲೂಕಿನ ಹಲವು ಭಾಗದಲ್ಲಿ ಹಳದಿ ಎಲೆ ಹಾಗೂ ಎಲೆಚುಕ್ಕಿ ರೋಗ ಹೀಗೆ ಪಾರುಪತ್ಯ ಮರೆಯುತ್ತಿದೆ.
ಸಂಶೋಧನ ಕೇಂದ್ರಕ್ಕೆ ಔಷಧಿ ಸಂಶೋಧನೆಗೆಂದು ಬಂದ ಕೋಟಿಗಟ್ಟಲೇ ಹಣವನ್ನು ಹಳದಿ ಎಲೆ ರೋಗವೇ ತಿಂದಾಕಿದೆ. ಬ್ಯಾಂಕ್ ಸಾಲದ ಜೊತೆ ಅಡವಿಟ್ಟ ಹೆಂಡತಿ ಮಕ್ಕಳ ಓಡವೆಯನ್ನ ಬಿಡಿಸುವುದಕ್ಲೂ ಆಗದ ಸಂದಿಗ್ಧ ಪರಿಸ್ಥಿತಿಗೆ ಬೆಳೆಗಾರರು ಬಂದಿದ್ದಾರೆ. ಹಾಗಾಗಿ, ಸಾಲದ ಶೂಲಕ್ಕೆ ಸಿಕ್ಕ ಬೆಳೆಗಾರರು ಹೊರಬರಲಾಗದೆ ಬದುಕುವ ಅನಿವಾರ್ಯತೆಗೆ ಊರುಬಿಟ್ಟು ಸಿಕ್ಕ-ಸಿಕ್ಕ ಕೆಲಸವನ್ನು ಮಾಡುತ್ತಿದ್ದಾರೆ.
ಅಡುಗೆ ಭಟ್ಟ ವೃತ್ತಿ, ಅರ್ಚಕರ ವೃತ್ತಿ ಸೇರಿದಂತೆ ನಾನಾ ವೃತ್ತಿ ಮಾಡುತ್ತಿದ್ದಾರೆ. ಇನ್ನು ಅಳಿದುಳಿದಿರುವ ತೋಟಗಳನ್ನು ಉಳಿಸಿಕೊಳ್ಳುವುದಕ್ಕೆ ಬೆಳೆಗಾರರು ಇಂದಿಗೂ ಹೋರಾಡುತ್ತಿದ್ದಾರೆ.
ಒಟ್ಟಾರೆ, ಮಲೆನಾಡಲ್ಲಿ 3-5 ಹೆಕ್ಟೇರ್ ತೋಟಗಳ ಮೂಲಕ ಬದುಕು ಕಟ್ಟಿಕೊಂಡ ಸಣ್ಣ ಬೆಳೆಗಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬದುಕಿನ ಆಸರೆಯೂ ಅದೇ ಆಗಿದೆ. ವರ್ಷಕ್ಕೆ 12-15 ಕ್ವಿಂಟಲ್ ಒಣ ಅಡಿಕೆ ಕೊಡುತ್ತುದ್ದ ತೋಟಗಳು ಇಂದು ರೋಗದಿಂದ 2-3 ಕ್ವಿಂಟಾಲ್ಗೆ ಬಂದಿವೆ. ಇದೀಗ ಹಳದಿ ಎಲೆ ರೋಗ, ಕೊಳೆ ರೋಗ, ಎಲೆ ಚುಕ್ಕಿ ರೋಗಕ್ಕೆ ಮಲೆನಾಡಿಗರು ಬದುಕನ್ನೇ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ.
ಭಾರತೀಯ ತಂತ್ರಜ್ಞಾನ ಚಂದ್ರನ ಮೇಲೂ ಕಾಲಿಡುವ ಮಟ್ಟಕ್ಕೆ ಬೆಳೆದಿದೆ. ಆದರೆ ಸರ್ಕಾರ ಇದೊಂದು ರೋಗಕ್ಕೆ ಔಷಧಿ ಕಂಡು ಹಿಡಿಯದೆ ಅಡಿಕೆ ಬೆಳೆಗಾರರ ಬದುಕನ್ನು ಬಲಿ ಕೊಡುತ್ತಿರುವುದು ನಿಜಕ್ಕೂ ದುರಂತವಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications