ಮುಖ್ಯಮಂತ್ರಿಗಳ ತವರಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಮೈಸೂರು, ಡಿಸೆಂಬರ್ 26: ಬರದ ಕಾರಣ ಸಾಲ ಮಾಡಿ ಬೆಳೆ ಬೆಳೆದರೂ ಪಸಲು ಕೈಗೆ ಬಾರದ ಪರಿಣಾಮ ರೈತರು ಸಾಲಬಾಧೆಯಿಂದ ದುಸ್ಥಿತಿಯನ್ನು ತಲುಪಿದ್ದು, ಅನ್ನಭಾಗ್ಯವನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿಯೇ ರೈತರು ಹೆಚ್ಚು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕೆ.ಆರ್. ನಗರದ ಮತ್ತೊಬ್ಬ ರೈತ ಇದಕ್ಕೆ ಸಾಕ್ಷಿಯಾಗಿದ್ದಾನೆ.
ಕೆ.ಆರ್.ನಗರ ತಾಲೂಕಿನಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಘಟನೆ ಹಸಿರಾಗಿರುವಾಗಲೇ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಮಾದಳ್ಳಿ ಗ್ರಾಮದ ಯುವ ರೈತ ಬಿರೇಶ (22) ಆತ್ಮಹತ್ಯೆ ಮಾಡಿಕೊಂಡವನು. ಕೃಷಿಗಾಗಿ ಮಾವತ್ತೂರು ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 2ಲಕ್ಷ ಮತ್ತು ಸುಮಾರು 1ಲಕ್ಷ ರೂ.ನಷ್ಟು ಕೈಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.[ನಂಜನಗೂಡು: ಕೆರೆ ತುಂಬಿಸುವ ಯೋಜನೆಗೆ ಸಿಎಂ ಶಿಲಾನ್ಯಾಸ]

ಬೆಳೆ ಬಾರದ ಕಾರಣ ಬೇರೆ ದಾರಿ ಕಾಣದೆ ದ್ವಿದಳಧಾನ್ಯಗಳು ಕೆಡದಂತೆ ಹಾಕುವ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದನು. ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೆ.ಆರ್. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭತ್ತದ ಕಣಜ ಎಂದು ಕರೆಯಲ್ಪಡುವ ಕೆ.ಆರ್.ನಗರ ತಾಲೂಕಿನಲ್ಲಿ ಮೇಲಿಂದ ಮೇಲೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಕಂಡು ಬರುತ್ತಿದೆ. ಕಳೆದ ವರ್ಷವೂ ಮಳೆ ಸಮರ್ಪಕವಾಗಿಲ್ಲ. ಈ ಬಾರಿಯೂ ಮುಂಗಾರು ಕೈಕೊಟ್ಟಿದೆ. ಹೀಗಿರುವಾಗ ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತನ ಬದುಕು ಮೂರಾಬಟ್ಟೆಯಾಗಿದ್ದು, ಕೃಷಿಗೆ ಮಾಡಿದ ಸಾಲದ ಬಡ್ಡಿಯೂ ಏರುತ್ತಿದೆ.
ಇನ್ನು ಹೊಟ್ಟೆಪಾಡಿಗಾಗಿ ಸಾಲ ಮಾಡಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಬೇಸಿಗೆ ಕಳೆದು ಮುಂಗಾರು ಬಂದ ಬಳಿಕ ಕೃಷಿ ಮಾಡಬೇಕಾಗಿದೆ ಅಲ್ಲಿ ತನಕ ಬದುಕು ಹೇಗೆ ಎಂಬ ಚಿಂತೆಯೂ ಬಹಳಷ್ಟು ರೈತರನ್ನು ಕಾಡುತ್ತಿದೆ. ಇದೆಲ್ಲದರಿಂದ ಧೈರ್ಯ ಕಳೆದುಕೊಂಡಿರುವ ರೈತರು ಸಾಲಗಾರರ ಕಿರಿಕಿರಿ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ತೀರ್ಮಾನಕ್ಕೆ ಬರುತ್ತಿರುವುದು ಆಘಾತಕಾರಿಯಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications