ಜಿಕೆವಿಕೆ ಕ್ಯಾಂಪಸ್ಸಿನಲ್ಲಿ ಫೆ.5ರಿಂದಯುವಜನೋತ್ಸವ
ಬೆಂಗಳೂರು, ಜ. 29:ದೇಶದ ವಿವಿಧ ಕೃಷಿ ವಿಶ್ವ ವಿದ್ಯಾನಿಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ಯುವಜನರಲ್ಲಿ ಭ್ರಾತೃತ್ವ, ರಾಷ್ಟ್ರೀಯ ಐಕ್ಯತೆ ಮತ್ತು ಸೌಹಾರ್ದತೆಯ ಭಾವನೆಗಳಿಗೆ ಸಾಕಾರರೂಪ ನೀಡಲು, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಪ್ರಾಯೋಜನೆಯೊಂದಿಗೆ ಅಖಿಲ ಭಾರತ ಮಟ್ಟದಲ್ಲಿ ಅಂತರ ಕೃಷಿ ವಿಶ್ವವಿದ್ಯಾನಿಲಯಗಳ ಯುವಜನೋತ್ಸವವನ್ನು 2009 ರ ಫೆಬ್ರವರಿ 5 ರಿಂದ 9 ರವರೆಗೆ ಜಿಕೆವಿಕೆ ಕ್ಯಾಂಪಸ್ಸಿನಲ್ಲಿ ಏರ್ಪಡಿಸಿದೆ.
ಪ್ರಸ್ತುತ 5 ದಿನಗಳ ಕಾಲ ನಡೆಯುವ ಅಂತರ ಕೃಷಿ ವಿಶ್ವವಿದ್ಯಾನಿಲಯ ಯುವಜನೋತ್ಸವದ ಈ ಸಾಂಸ್ಕೃತಿಕ ವೈಭವದಲ್ಲಿ ದೇಶದ 47 ಕೃಷಿ ವಿಶ್ವವಿದ್ಯಾನಿಲಯಗಳ 2000 ಪ್ರತಿಭಾವಂತ ಯುವಕ/ಯುವತಿಯರು ಭಾಗವಹಿಸಲಿದ್ದಾರೆ ಹಾಗೂ ಪ್ರತಿದಿನ ಸುಮಾರು 5000 ವಿದ್ಯಾರ್ಥಿಗಳು ಹಾಗೂ ಕಲಾ ಆಸಕ್ತರು ಪ್ರೇಕ್ಷಕರಾಗಿ ಪಾಲುಗೊಳ್ಳಲಿದ್ದಾರೆ.
ಈ ಉತ್ಸವದಲ್ಲಿ ಸಂಗೀತ, ಸಾಹಿತ್ಯ, ಲಲಿತ ಕಲೆಗಳು, ನೃತ್ಯ ಇನ್ನು ಮುಂತಾದ ವಿಷಯಗಳಲ್ಲಿ ಹಲವಾರು ಸ್ಪರ್ಧೆಗಳು ನಡೆಯಲಿವೆ. ಈ ಎಲ್ಲಾ ಸ್ಪರ್ಧೆಗಳನ್ನು ಜಿಕೆವಿಕೆ ಆವರಣದ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತದೆ. ಇದಕ್ಕಾಗಿ ವಿಶ್ವವಿದ್ಯಾನಿಲಯವು ಉತ್ತಮ ರೀತಿಯ ಎಲ್ಲಾ ಸುಸಜ್ಜಿತ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಈ ಯುವಜನೋತ್ಸವದ ಉದ್ಫಾಟನಾ ಸಮಾರಂಭವು ಫೆಬ್ರವರಿ 5 ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಯಲದ ಜಿಕೆವಿಕೆ ಆವರಣದಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿದೆ. ದೆಹಲಿಯಲ್ಲಿರುವ ಐ.ಸಿ.ಎ.ಆರ್. ಸಂಸ್ಥೆಯ ಗೌರವಾನ್ವಿತರು ಮತ್ತು ರಾಜ್ಯದ ಸಾಂಸ್ಕೃತಿಕ ಹಾಗೂ ರಂಗ ಪ್ರತಿಭಾನ್ವಿತರು ಈ ಉದ್ಫಾಟನಾ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications