ಲಕ್ನೋ, ಡಿಸೆಂಬರ್ 7: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ, ಅಭಿವೃದ್ಧಿಗೆ ಸುಧಾರಣೆಗಳು ಅಗತ್ಯವಾಗಿವೆ ಮತ್ತು ಕಳೆದ ಶತಮಾನದಿಂದ ಇರುವ ಕೆಲವು ಕಾನೂನುಗಳು ಈಗ ಹೊರೆಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಗ್ರಾ ಮೆಟ್ರೋ ರೈಲು ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ, ತಮ್ಮ ಸರ್ಕಾರ ನಡೆಸುತ್ತಿರುವ ಅಭಿವೃದ್ಧಿಗಳು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತಿವೆ ಎಂದಿದ್ದಾರೆ.
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ಮಂಗಳವಾರ ಭಾರತ್ ಬಂದ್ಗೆ ಕರೆ ನೀಡಿವೆ. ಈ ಸಂದರ್ಭದಲ್ಲಿ ಸುಧಾರಣೆಗಾಗಿ ಕಾನೂನಿನ ಬದಲಾವಣೆಗಳ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
'ಅಭಿವೃದ್ಧಿಗೆ ಸುಧಾರಣೆಗಳು ಅಗತ್ಯ. ಹೊಸ ವ್ಯವಸ್ಥೆಗೆ ಮತ್ತು ಹೊಸ ಸೌಲಭ್ಯಗಳನ್ನು ನೀಡಲು ಸುಧಾರಣೆಗಳು ಬಹಳ ಅವಶ್ಯಕವಾಗಿವೆ. ಹಿಂದಿನ ಶತಮಾನದ ಕಾನೂನುಗಳನ್ನು ಇರಿಸಿಕೊಂಡು ಮುಂದಿನ ಶತಮಾನವನ್ನು ನಾವು ಕಟ್ಟಲು ಸಾಧ್ಯವಿಲ್ಲ' ಎಂದು ಮೋದಿ ಹೇಳಿದ್ದಾರೆ.