AI ಚಾಲಿತ ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅಪ್ಲಿಕೇಶನ್ ಬಿಡುಗಡೆ, ಏನಿದು?...Central Govt
ಬೆಂಗಳೂರು/ನವದೆಹಲಿ, ಸೆಪ್ಟೆಂಬರ್ 2: ದೇಶದ ಅತಿ ದೊಡ್ಡ ಡಿಜಿಟಲ್ ತಂತ್ರಜ್ಞಾನ ಮೇಳವಾದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 2025 ಗೆ ಹೆಚ್ಚಿನ ತಂತ್ರಜ್ಞಾನಿ ಅನುಭವ ಒದಗಿಸುವ ಉದ್ದೇಶದಿಂದ, ಕೇಂದ್ರ ಸಂವಹನ ಮತ್ತು ಈಶಾನ್ಯಾಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಇಂದು AI ಆಧಾರಿತ ಇಂಟರಾಕ್ಟಿವ್ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದರು.
9ನೇ ಆವೃತ್ತಿಯ IMC 2025 ಅಕ್ಟೋಬರ್ 8ರಿಂದ 11ರವರೆಗೆ ನವದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್, ದ್ವಾರಕದಲ್ಲಿ ನಡೆಯಲಿದೆ. ಈ ಅಪ್ಲಿಕೇಶನ್ ಲೈವ್ಸ್ಟ್ರೀಮಿಂಗ್, 'IMC Suggest' ಎಂಬ ವೈಯಕ್ತಿಕ ಸಲಹೆ ಸಾಧನ, ನೆಟ್ವರ್ಕಿಂಗ್, ಮೀಟಿಂಗ್ ಶೆಡ್ಯೂಲ್ ಮತ್ತು AI ಆಧಾರಿತ ಸ್ನಿಪೆಟ್ ವಿಡಿಯೋ ಹೈಲೈಟ್ಸ್ ಸೇರಿದಂತೆ ಅನೇಕ ನೂತನ ವೈಶಿಷ್ಟ್ಯಗಳನ್ನು ಈ ಅಪ್ಲಿಕೇಷನ್ ಹೊಂದಿದೆ.

ಅಪ್ಲಿಕೇಶನ್ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು, ಇಂಡಿಯಾ ಮೊಬೈಲ್ ಕಾಂಗ್ರೆಸ್ ಕೇವಲ ಒಂದು ಕಾರ್ಯಕ್ರಮವಲ್ಲ. ಅದು ಅಪಾರ ಅವಕಾಶಗಳ ವೇದಿಕೆ. ಈ ಅಪ್ಲಿಕೇಶನ್ ಆ ಅವಕಾಶಗಳನ್ನು ಸಂಪರ್ಕ, ಸಹಕಾರ ಮತ್ತು ಫಲಿತಾಂಶಗಳಾಗಿ ರೂಪಿಸುತ್ತದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ದೃಷ್ಟಿಗೆ ಅನುಗುಣವಾಗಿ, 2047ರೊಳಗೆ ಭಾರತದ ಜಯಶೀಲ ಭವಿಷ್ಯ ರೂಪಿಸುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆ ಇಡಲಿದೆ. IMC 5G, 6G, AI, IoT ಮುಂತಾದ ತಂತ್ರಜ್ಞಾನಗಳ ಬಗ್ಗೆ ಮಾತ್ರವಲ್ಲದೆ ರೈತರು, ವಿದ್ಯಾರ್ಥಿಗಳು, MSMEಗಳು ಮತ್ತು ಸಮಾಜದ ಪ್ರತಿಯೊಬ್ಬರಿಗೂ ಹೊಸ ಭರವಸೆ ನೀಡುವ ಬಗ್ಗೆ ಚರ್ಚಿಸುವ ವೇದಿಕೆಯಾಗುತ್ತದೆ ಎಂದು ತಿಳಿಸಿದರು.
IMC 2025 ಅಪ್ಲಿಕೇಶನ್ ಮೂಲಕ ಭಾಗವಹಿಸುವವರು ರಿಯಲ್-ಟೈಮ್ ಚಾಟ್, ಮೀಟಿಂಗ್ ಬುಕ್ಕಿಂಗ್, ಹೂಡಿಕೆದಾರರು-ಸ್ಟಾರ್ಟ್ಅಪ್ ಸಂಪರ್ಕ, ಫೋಟೋ ಬೂತ್, ಲೈವ್ ಪೋಲ್ ಮತ್ತು ಸ್ಪರ್ಧೆಗಳು ಸೇರಿದಂತೆ ಹಲವಾರು ಅನುಭವಗಳನ್ನು ಪಡೆಯಬಹುದು. ವಿದ್ಯಾರ್ಥಿ ಮತ್ತು ಯುವ ಸ್ನೇಹಿ ವಿನ್ಯಾಸದ ಈ ಅಪ್, ತಂತ್ರಜ್ಞಾನವನ್ನು ಸುಲಭವಾಗಿ ಪರಿಚಯಿಸುವುದರೊಂದಿಗೆ ಅವರ ಭವಿಷ್ಯ ಗುರಿಗಳಿಗೆ ಸ್ಪೂರ್ತಿ ನೀಡಲಿದೆ. IMC 2025ಗೆ ಪ್ರತಿನಿಧಿಗಳು, ಮಾಧ್ಯಮ ವೃತ್ತಿಪರರು, ವಿದ್ಯಾರ್ಥಿಗಳು ಹಾಗೂ ಅಕಾಡೆಮಿಕ್ ವಲಯದವರು ಈಗಲೇ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿ ಮಾಡಿಕೊಳ್ಳುವವರು ಈ ಅಧಿಕೃತ ವೆಬ್ಸೈಟ್ಗೆ www.indiamobilecongress.com. ಕೋರಲಾಗಿದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ












Click it and Unblock the Notifications