AI ಬಂದ ಮೇಲೆ ನಮ್ಮ ಮೌಲ್ಯಗಳು ಬದಲಾಗದಂತೆ ನೋಡಿಕೊಳ್ಳಬೇಕು: ಮಾಜಿ ಸಿಎಂ
ಕೃತಕ ಬುದ್ಧಿಮತ್ತೆ (ಎಐ) ಬಂದ ಮೇಲೆ ನಮ್ಮ ಬದುಕು ಇನ್ನಷ್ಟು ಬದಲಾವಣೆಯಾಗಿದೆ. ಈ ಸಂದರ್ಭದಲ್ಲಿ ನಮ್ಮ (ಮಾನವನ) ಮೌಲ್ಯಗಳು ಬದಲಾವಣೆಯಾಗದಂತೆ ನೋಡಿಕೊಳ್ಳುವುದು ಮುಖ್ಯ. ಧಾರ್ಮಿಕ, ಸಾಮಾಜಿಕ ಮೌಲ್ಯಗಳು ಅಷ್ಟೇ ಅಲ್ಲ. ನ್ಯಾಯಾಂಗದ ಮೌಲ್ಯ ಕೂಡ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯ ಜಿಲ್ಲಾ ನ್ಯಾಯವಾದಿಗಳ ಸಂಘದ ಕಟ್ಟಡದಲ್ಲಿ ಜಿಲ್ಲಾ ನ್ಯಾಯಾಂಗ ಹಾವೇರಿ, ಲೋಕೋಪಯೋಗಿ ಇಲಾಖೆ, ಹಾವೇರಿ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಅಂಚೆ ಕಛೇರಿ ಹಾವೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ *ನೂತನ ಅಂಚೆ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅತ್ಯಂತ ಅವಶ್ಯಕತೆ ಇರುವ ಅಂಚೆ ಕಚೇರಿ ಉದ್ಘಾಟನೆಯಾಗುತ್ತಿರುವುದು ನಾವೆಲ್ಲರೂ ಸಂತೋಷ ಪಡುವ ವಿಚಾರ. ಆಧುನಿಕರಣ, ತಂತ್ರಜ್ಞಾನ ಹೊಸದಾಗಿ ಬಂದಿದ್ದರೂ ಕೂಡ ಅಂಚೆಗೆ ತನ್ನದೆ ಆದ ಮಹತ್ವ ಇದೆ. ನೀವು ಯಾರಿಗಾದರೂ ನೊಟೀಸ್ ಕಳುಹಿಸಿದರೆ ಅದರ ಕಾನೂನು ಮಾನ್ಯತೆ ಅಂಚೆ ಪತ್ರದ ಮೇಲೆ ಇರುತ್ತದೆ. ಇದು ಎಲ್ಲರಿಗೂ ಬಹಳ ಉಪಯುಕ್ತವಾಗಿದೆ. ಇದನ್ನು ಎಲ್ಲರೂ ಸದುಪಯೋಗ ಪಡೆಸಿಕೊಳ್ಳುವ ವಿಶ್ವಾಸ ಇದೆ ಎಂದರು.
ಎಐ ಬಂದ ಮೇಲೆ ನಮ್ಮ ಬದುಕು ಇನ್ನಷ್ಟು ಬದಲಾವಣೆಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಮೌಲ್ಯಗಳು ಬದಲಾವಣೆಯಾಗದಂತೆ ನೋಡಿಕೊಳ್ಳುವುದು ಮುಖ್ಯ ಮೌಲ್ಯಗಳು ಅಂದರೆ, ಧಾರ್ಮಿಕ, ಸಾಮಾಜಿಕ ಮೌಲ್ಯಗಳು ಅಷ್ಟೇ ಅಲ್ಲ. ನ್ಯಾಯಾಂಗದ ಮೌಲ್ಯ ಕೂಡ ಸಾತ್ವಿಕವಾಗಿರಬೇಕು. ನ್ಯಾಯಾಂಗ ತನ್ನದೇ ಆದ ಇತಿಹಾಸ ಹೊಂದಿದೆ. ಮಾನವನ ಬೆಳವಣಿಗೆಗೆ ನ್ಯಾಯ, ನೀತಿ, ಧರ್ಮ ಎನ್ನುವಂಥದ್ದು ಜೊತೆ ಜೊತೆಗೆ ಬೆಳೆಯುತ್ತದೆ.
ಒಂದು ವ್ಯವಸ್ಥಿತವಾಗಿರುವ ಸಮಾಜ, ಶಾಂತಿಯುತವಾಗಿರುವ ಪರಿಸರ, ಅಭಿವೃದ್ಧಿಶೀಲವಾಗಿರುವ ರಾಷ್ಟ್ರ ಇರಬೇಕಾದರೆ ನ್ಯಾಯಾಂಗ ಮುಖ್ಯ. ಸತ್ಯದ ಪರೀಕ್ಷೆ ಮತ್ತು ಅದರ ಪರಿಣಾಮ ನ್ಯಾಯದ ಮೇಲೆ ನಿಂತಿದೆ. ನ್ಯಾಯ ನೀತಿ ಧರ್ಮದಲ್ಲಿ ನ್ಯಾಯ ಬಹಳ ಶ್ರೇಷ್ಠ ಯಾಕೆಂದರೆ ಯಾವಾಗ, ಎಲ್ಲಿ ಅನ್ಯಾಯ ಆಗುತ್ತದೆಯೋ ಅಲ್ಲಿ ನ್ಯಾಯ ಸಿಗಬೇಕು ಎಂದು ತಿಳಿಸಿದರು.
ಆದರ್ಶಪಾಯ ಸಮಾಜದಲ್ಲಿ ನಮ್ಮ ಆಧುನಿಕ ಸಮಾಜದಲ್ಲಿ ನೈಸರ್ಗಿಕ ಕಾನೂನು ಮತ್ತು ಮಾನವ ಲಾದಲ್ಲಿ ವ್ಯತ್ಯಾಸ ಇಷ್ಟೆ ನೈಸರ್ಗಿಕ ಕಾನೂನಿನಲ್ಲಿ ನೀವು ಸತ್ಯ ಹೇಳಿದರೆ ನಿಮಗೆ ಪುಣ್ಯ ಬರುತ್ತದೆ. ಮಾನವ ನಿರ್ಮಿತ ಕಾನೂನಿನಲ್ಲಿ ಸುಳ್ಳು ಹೇಳಿದರೆ ಈ ಶಿಕ್ಷೆ ಅಂತ ಇರುತ್ತದೆ. ಈ ಎರಡರ ಮಧ್ಯ ನಮ್ಮೆಲ್ಲರ ಕರ್ತವ್ಯ ಎರಡನ್ನೂ ನಮ್ಮ ನಡೆ ನುಡಿಯಿಂದ ಹತ್ತಿರ ತರುವ ಪಯತ್ನ ಮಾಡಬೇಕು. ನಮ್ಮ ನ್ಯಾಯಾಲಯಗಳು ಯಾವಾಗ ನ್ಯಾಯಸಮ್ಮತವಾಗಿ ನಡೆದುಕೊಳ್ಳುತ್ತವೆಯೋ ಆಗ ನ್ಯಾಯಾಂಗದ ಕೀರ್ತಿ ಎತ್ತರಕ್ಕೆ ಏರುತ್ತದೆ ಎಂದರು.
ತಂತಜ್ಞಾನ ಬದಲಾವಣೆಯಾದಂತೆ ಅಪರಾಧ ಹೆಚ್ಚಾಗುತ್ತದೆ. ಒಂದು ಮಾತಿದೆ. ಆಲ್ವೇಸ್ ಕ್ರೈಮ್ ಲೀಡ್ಸ್ ದ ಲಾ, ಆದರೆ, ಅಪರಾಧ ಕಾನೂನು ಮೀರಿ ಹೋಗದಂತೆ ನೋಡಿಕೊಳ್ಳಬೇಕು. ನ್ಯಾಯಾಂಗ ವ್ಯವಸ್ಥೆ ಅದನ್ನು ನಿಯಂತ್ರಣ ಮಾಡುವ ಶಕ್ತಿಹೊಂದಿದೆ. ಈ ದೃಷ್ಟಿಯಿಂದ ನೀವು ಮಾಡುವ ಕಾಯಕ ಬಹಳ ಮಹತ್ವ ಪಡೆದಿದೆ.
ಪ್ರಜಾಪಭುತ್ತದ ಯಶಸ್ಸು ನ್ಯಾಯಾಂಗ ವ್ಯವಸ್ಥೆಯ ಮೇಲೆ ಇದೆ. ನಾವೆಲ್ಲರೂ ಸೇರಿ ಇದನ್ನು ಗೌರವಿಸಬೇಕು. ಅಂದಾಗ ಮಾತ್ರ ಪಜಾಪಭುತ್ವ ಯಶಸ್ವಿಯಾಗುತ್ತದೆ. ಒಂದು ಕಾಲದಲ್ಲಿ ಮೊದಲು ಯಾರ ಬಳಿ ಭೂಮಿ ಇತ್ತೊ ಅವರು ಜಗತ್ತು ಆಳುತ್ತಿದ್ದರು. ನಂತರ ಯಾರ ಬಳಿ ಬಿಜಿನೆಸ್ಸು, ತಾಕತ್ತು ಇತ್ತೊ ಅವರು ಜಗತ್ತು ಆಳಿದರು. ಈಗ ಇಪತ್ತೊಂದನೆ ಶತಮಾನದಲ್ಲಿ ಯಾರ ಬಳಿ ಜ್ಞಾನ ಇದೆಯೋ ಅವರು ಜಗತ್ತನ್ನು ಆಳುತ್ತಾರೆ. ಒಂದು ಸಮೀಕ್ಷೆಯಲ್ಲಿ ಬಿಲ್ಗೇಟ್ ಮತ್ತು ಬಿಲ್ ಕ್ಲಿಂಟನ್ ನಡುವೆ ಯಾರು ಪ್ರಸಿದ್ದರು ಅಂತ ಸ್ಪರ್ಧೆ ನಡೆದಾಗ ಬಿಲ್ ಗೇಟ್ಗೆ ಜಯ ಸಿಕ್ಕಿತು. ಈಗ ತಂತ್ರಜ್ಞಾನ ಬಂದ ಮೇಲೆ ಪೇಪರ್ ಬಳಕೆ ಕಡಿಮೆಯಾಗಿದೆ ಎಂದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications