Artificial Intelligence: ವಿಪತ್ತು ನಿರ್ವಹಣೆಗಾಗಿ ಎಐ ತಂತ್ರಜ್ಞಾನ ಬಳಕೆ, ಎಲ್ಲಿ?
ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಇಂದು ಉದ್ಯೋಗಿಗಳಿಗೆ ಶಾಪ ಎಂದು ಹೇಳಲಾಗುತ್ತಿದೆ. ಆದರೆ ಸದ್ದಿಲ್ಲದೆ ಅನೇಕ ಒಳ್ಳೆಯ ಕೆಲಸಗಳಿಗೂ ಬಳಕೆಯಾಗುತ್ತಿದೆ. ಈಗಾಗಲೇ ವಿವಿಧ ಕ್ಷೇತ್ರಗಳಿಗೆ ಕಾಲಿಟ್ಟಿರುವ ಎಐ ತಂತ್ರಜ್ಞಾನವು ಇದೀಗ ವಿಪತ್ತು ನಿರ್ವಹಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಹೌದು ಹಿಮಾಚಲ ಪ್ರದೇಶದಲ್ಲಿ ವಿಪತ್ತು ನಿರ್ವಹಣೆಗಾಗಿ ಕೃತಕ ಬುದ್ಧಿಮತ್ತೆಯೊಂದಿಗೆ ಎಸ್ಡಿಆರ್ಎಫ್ ಅನ್ನು ಬಲಪಡಿಸಲು ಮುಂದಾಗಿದೆ.
ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವ ಕಾರಣ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯನ್ನು (SDRF) ಬಲಪಡಿಸುವ ಅಗತ್ಯವಿದೆ ಎಂದು ಮುಖ್ಯ ಕಾರ್ಯದರ್ಶಿ ಪ್ರಬೋಧ್ ಸಕ್ಸೇನಾ ಹೇಳಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ), ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ ಮತ್ತು ಎನ್ಎಚ್ಎಐ, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ.

ಈ ವಿಭಾಗಗಳಲ್ಲಿ ಕಾರ್ಯಾಚರಣೆಯ ಕೌಶಲ್ಯಗಳನ್ನು ಹೆಚ್ಚಿಸುವುದು, ಸುಧಾರಿತ ತಂತ್ರಜ್ಞಾನವನ್ನು ಸಂಯೋಜಿಸುವುದು ಮತ್ತು ಸುಸ್ಥಿರ ವಿಧಾನಗಳನ್ನು ಅಳವಡಿಸಿಕೊಳ್ಳುವುದರ ಬಗ್ಗೆ ಒತ್ತು ನೀಡಬೇಕು ಎಂದಿದ್ದಾರೆ. ಹಿಮಾಚಲ ಪ್ರದೇಶದಲ್ಲಿನ ಪರ್ವತ ಮತ್ತು ಎತ್ತರದ ಪ್ರದೇಶಗಳಲ್ಲಿನ ವಿಪತ್ತುಗಳಿಂದ ಉಂಟಾಗುವ ಸವಾಲುಗಳ ನಿವಾರಣೆ ತಂತ್ರಜ್ಞಾನದ ಮೊರೆ ಹೋಗಬೇಕು ಎಂದಿದ್ದಾರೆ. ಇದಕ್ಕಾಗಿ ಎಸ್ಡಿಆರ್ಎಫ್ ತಂಡಗಳಿಗೆ ಮೀಸಲಾದ ತರಬೇತಿ ಮಾಡಲ್ ಹಾಗೂ ವೇಳಾಪಟ್ಟಿಯನ್ನು ಅಭಿವೃದ್ಧಿಪಡಿಸಬೇಕು ಎಂದಿದ್ದಾರೆ.
ಕಠಿಣ ಭೂಪ್ರದೇಶಗಳು ಮತ್ತು ತೀವ್ರ ಹವಾಮಾನ ಪರಿಸ್ಥಿತಿಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಅಗತ್ಯವಾದ ವಿಶೇಷ ಕೌಶಲ್ಯಗಳೊಂದಿಗೆ ತಂಡಗಳನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಉದಾಹರಣೆಗೆ ಈ ತರಬೇತಿಯು ವೈಮಾನಿಕ ತಪಾಸಣೆಗಾಗಿ ಡ್ರೋನ್ಗಳನ್ನು ನಿರ್ವಹಿಸುವುದು, ದುರ್ಗಮ ಪ್ರದೇಶಗಳಲ್ಲಿ ಬದುಕುಳಿದವರನ್ನು ಪತ್ತೆ ಮಾಡುವುದು ಹಾಗೂ ಹಾನಿ ಬಗ್ಗೆ ಮಾಹಿತಿ ಕಲೆ ಹಾಕುವುದು, ಔಷಧಿಗಳು ಮತ್ತು ಆಹಾರ ಪ್ಯಾಕೆಟ್ಗಳಂತಹ ಅಗತ್ಯ ಸಾಮಗ್ರಿಗಳನ್ನು ನಿಖರವಾದ ಸ್ಥಳಗಳಿಗೆ ರವಾನಿಸುವುದು ಸೇರಿ ಪ್ರಾಯೋಗಿಕ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಎಐ ಬಳಕೆಯಿಂದ ಏನೆಲ್ಲ ಅನುಕೂಲ?
ಪ್ರಮುವಾಗಿ ಎಐ ಬಳಕೆಯು ಮುನ್ಸೂಚನೆಯ ವಿಶ್ಲೇಷಣೆ, ತ್ವರಿತ ಹಾನಿ ಮೌಲ್ಯಮಾಪನ, ಸಂಪನ್ಮೂಲ ಹಂಚಿಕೆಯನ್ನು ಅತ್ಯುತ್ತಮವಾಗಿಸುವುದು ಹಾಗೂ ಎಚ್ಚರಿಕೆ ವ್ಯವಸ್ಥೆಗಳ ಮೂಲಕ ವಿಪತ್ತು ನಿರ್ವಹಣೆಯಲ್ಲಿ ಕ್ರಾಂತಿಯನ್ನುಂಟು ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಐತಿಹಾಸಿಕ ಹವಾಮಾನ ಮಾದರಿಗಳ ದತ್ತಾಂಶ ವಿಶ್ಲೇಷಣೆ ಮೂಲಕ ಹೆಚ್ಚಿನ ನಿಖರತೆಯೊಂದಿಗೆ ಮುನ್ಸೂಚನೆ ನೀಡುವುದು, ಸಂಪನ್ಮೂಲ ನಿಯೋಜನೆಗೆ ಅನುಕೂಲವಾಗಲಿದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲು, ವಿಪತ್ತಿನ ನಂತರ ಸ್ವಯಂಚಾಲಿತವಾಗಿ ಡೇಟಾ ವಿಶ್ಲೇಷಿಸಲು, ನೈಜ-ಸಮಯದ ಆಧಾರದ ಮೇಲೆ ಮಾನವಶಕ್ತಿ, ಪರಿಹಾರ ಸಾಮಗ್ರಿಗಳು ಮತ್ತು ಸಲಕರಣೆಗಳ ರವಾನೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ವ್ಯವಸ್ಥೆಗಳ ನಿಖರತೆಯನ್ನು ಹೆಚ್ಚಿಸುವಲ್ಲಿ ಇದು ಸಹಾಯಕವಾಗುತ್ತದೆ ಎಂದು ಹೇಳಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications