10 ಲಕ್ಷ ಜನರಿಗೆ ಉಚಿತ AI ತರಬೇತಿ: ಕೇಂದ್ರ ಸರ್ಕಾರದ ಹೊಸ ಪ್ಲ್ಯಾನ್
ಕೃತಕ ಬುದ್ಧಿಮತ್ತೆ (AI) ಈಗಾಗಲೇ ತನ್ನ ಗುರುತನ್ನು ಅಲ್ಲಿ ಇಲ್ಲಿ ಬಿಡುತ್ತಿದೆ. AI ತಂತ್ರಜ್ಞಾನವನ್ನು ಕಲಿಯಲು ಈಗಿನ ಯುವ ಪೀಳಿಗೆ ಸಹ ಮನಸ್ಸು ಮಾಡುತ್ತಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಗ್ರಾಮೀಣ ಉದ್ಯಮಿಗಳಿಗೆ ಎಐ (AI) ಉಚಿತ ತರಬೇತಿ ನೀಡಲು ನಿರ್ಧರಿಸಿದೆ. ಸಾಮಾನ್ಯ ಸೇವಾ ಕೇಂದ್ರದ 16 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಶ್ಣವ್ ಈ ಘೋಷಣೆ ಮಾಡಿದ್ದಾರೆ.
ಸಾಮಾನ್ಯ ಸೇವಾ ಕೇಂದ್ರದ 16 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸರ್ಕಾರ ಎಐ ಮಿಷನ್ ಅಡಿಯಲ್ಲಿ ಕನಿಷ್ಠ 10 ಲಕ್ಷ ಜನರಿಗೆ ತರಬೇತಿ ನಿಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಮಟ್ಟದ ಉದ್ಯಮಿ (ವಿಎಲ್ಇ)ಗಳಿಗೆ ಇದರ ಲಾಭ ಪಡೆಯಬಹುದು. ಸುಮಾರು 5.5 ಲಕ್ಷ ವಿಎಲ್ಇ ಈ ಯೋಜನೆ ಮೂಲಕ ಎಐ ತರಬೇತಿ ಪಡೆಯಬಹುದಾಗಿದೆ. ಇನ್ನು ವಿಎಲ್ಇಗಳು ಎದುರಿಸುತ್ತಿರುವ ಸಮಸ್ಯೆ ನಿವಾರಿಸಲು ಏಕೀಕೃತ ಸಮಗ್ರ ಸೇವಾ ವೇದಿಕೆ ಸಿದ್ಧ ಪಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರ ತನ್ನ ದೊಡ್ಡ ದೊಡ್ಡ ನಿಲುವುಗಳಿಂದ ದೇಶದಲ್ಲಿ ಕ್ರಾಂತಿ ಮಾಡುವ ಪ್ಲ್ಯಾನ್ ಮಾಡಿಕೊಂಡಿದೆ. ಎಐ ತರಬೇತಿಯನ್ನು ಗ್ರಾಮೀಣ ಮಟ್ಟದ ಉದ್ಯಮಿಗಳಿಗೆ ನೀಡುವ ಸರ್ಕಾರದ ಯೋಚನೆ ಡಿಜಿಟಲ್ ಸಬಲೀಕರಣವನ್ನು ಉತ್ತೇಜಿಸುತ್ತದೆ. ಈ ಮೂಲಕ ಗ್ರಾಮೀಣ ಮಟ್ಟದ ಉದ್ಯಮದಲ್ಲೂ ಸುಧಾರಣ ಕಾಣಬಹುದಾಗಿದೆ. ಡಿಜಿಟಲ್ ಇಂಡಿಯಾ ಮಿಷನ್ ಬಲಪಡಿಸುವ ನಿಟ್ಟಿನಲ್ಲಿ ಈ ಯೋಜನೆ ದೊಡ್ಡ ಪ್ರಯತ್ನವಾಗುತ್ತಿದೆ. ಈ ಮೂಲಕ ಭಾರತದಂತಹ ದೇಶಗಳ ಹಳ್ಳಿಗಳಿಗೂ ಎಐ ತಲಪುತ್ತದೆ. ಮುಂದಿನ ದಿನಮಾನ ಎಐನಿಂದ ಕೂಡಿರಲಿದೆ. ಹೀಗಾಗಿ ಜನರು ಎಐ ಜೊತೆಗೆ ಹೆಚ್ಚಾಗಿ ಬೆರೆತಲ್ಲಿ, ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳಬಹುದು. ಈ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಉಪಯುಕ್ತವಾಗುತ್ತವೆ.
ಬಜೆಟ್ನಲ್ಲಿ ಹಣ
ದೇಶದಲ್ಲಿ ಎಐ ಅನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ವಿಶೇಷವಾಗಿ IndiaAI ಮಿಷನ್ ಆರಂಭಿಸಿದೆ. ಇದಕ್ಕಾಗಿ 10,371.92 ಕೋಟಿ ರೂ.ಗಳನ್ನು ಎತ್ತಿಡಲಾಗಿದೆ. ಈ ಮೂಲಕ ತಂತ್ರಜ್ಞಾನ ಬಲಪಡಿಸುವುದು, ತನ್ನದೇ ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸುವುದು, ಯುವಕರಿಗೆ ಎಐ ಶಿಕ್ಷಣವನ್ನು ನೀಡುವುದು ಇದರ ಉದ್ದೇಶವಾಗಿದೆ. ಈ ಯೋಜನೆಯ ಮೂಲಕ ಸ್ವಾವಲಂಬಿಯನ್ನಾಗಿ ಮಾಡಲು ದೊಡ್ಡ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಕೇಂದ್ರ ಇನ್ನು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸಿಕೊಂಡಿದ್ದು, ಈ ಯೋಜನೆಗಳು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿವೆ.
-
ಉಡುಪಿ ಜಿಲ್ಲೆಯ ವಂಡ್ಸೆ ಸರ್ಕಾರಿ ಶಾಲೆಗೆ ರಾಜ್ಯದ ಮೊದಲ ಎಐ ಟೀಚರ್ 'ಐರಿಸ್' ಎಂಟ್ರಿ -
ಮುಂಬೈಗೆ ಪರಿಸರ ಸ್ನೇಹಿ ವಿದ್ಯುತ್ ಪೂರೈಕೆ: ಅದಾನಿ ಎನರ್ಜಿಯಿಂದ 1,000 ಮೆಗಾವ್ಯಾಟ್ ಸಾಮರ್ಥ್ಯದ ಪವರ್ ಲಿಂಕ್ ಚಾಲನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ











Click it and Unblock the Notifications