10 ಲಕ್ಷ ಜನರಿಗೆ ಉಚಿತ AI ತರಬೇತಿ: ಕೇಂದ್ರ ಸರ್ಕಾರದ ಹೊಸ ಪ್ಲ್ಯಾನ್
ಕೃತಕ ಬುದ್ಧಿಮತ್ತೆ (AI) ಈಗಾಗಲೇ ತನ್ನ ಗುರುತನ್ನು ಅಲ್ಲಿ ಇಲ್ಲಿ ಬಿಡುತ್ತಿದೆ. AI ತಂತ್ರಜ್ಞಾನವನ್ನು ಕಲಿಯಲು ಈಗಿನ ಯುವ ಪೀಳಿಗೆ ಸಹ ಮನಸ್ಸು ಮಾಡುತ್ತಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಗ್ರಾಮೀಣ ಉದ್ಯಮಿಗಳಿಗೆ ಎಐ (AI) ಉಚಿತ ತರಬೇತಿ ನೀಡಲು ನಿರ್ಧರಿಸಿದೆ. ಸಾಮಾನ್ಯ ಸೇವಾ ಕೇಂದ್ರದ 16 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಶ್ಣವ್ ಈ ಘೋಷಣೆ ಮಾಡಿದ್ದಾರೆ.
ಸಾಮಾನ್ಯ ಸೇವಾ ಕೇಂದ್ರದ 16 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸರ್ಕಾರ ಎಐ ಮಿಷನ್ ಅಡಿಯಲ್ಲಿ ಕನಿಷ್ಠ 10 ಲಕ್ಷ ಜನರಿಗೆ ತರಬೇತಿ ನಿಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಮಟ್ಟದ ಉದ್ಯಮಿ (ವಿಎಲ್ಇ)ಗಳಿಗೆ ಇದರ ಲಾಭ ಪಡೆಯಬಹುದು. ಸುಮಾರು 5.5 ಲಕ್ಷ ವಿಎಲ್ಇ ಈ ಯೋಜನೆ ಮೂಲಕ ಎಐ ತರಬೇತಿ ಪಡೆಯಬಹುದಾಗಿದೆ. ಇನ್ನು ವಿಎಲ್ಇಗಳು ಎದುರಿಸುತ್ತಿರುವ ಸಮಸ್ಯೆ ನಿವಾರಿಸಲು ಏಕೀಕೃತ ಸಮಗ್ರ ಸೇವಾ ವೇದಿಕೆ ಸಿದ್ಧ ಪಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರ ತನ್ನ ದೊಡ್ಡ ದೊಡ್ಡ ನಿಲುವುಗಳಿಂದ ದೇಶದಲ್ಲಿ ಕ್ರಾಂತಿ ಮಾಡುವ ಪ್ಲ್ಯಾನ್ ಮಾಡಿಕೊಂಡಿದೆ. ಎಐ ತರಬೇತಿಯನ್ನು ಗ್ರಾಮೀಣ ಮಟ್ಟದ ಉದ್ಯಮಿಗಳಿಗೆ ನೀಡುವ ಸರ್ಕಾರದ ಯೋಚನೆ ಡಿಜಿಟಲ್ ಸಬಲೀಕರಣವನ್ನು ಉತ್ತೇಜಿಸುತ್ತದೆ. ಈ ಮೂಲಕ ಗ್ರಾಮೀಣ ಮಟ್ಟದ ಉದ್ಯಮದಲ್ಲೂ ಸುಧಾರಣ ಕಾಣಬಹುದಾಗಿದೆ. ಡಿಜಿಟಲ್ ಇಂಡಿಯಾ ಮಿಷನ್ ಬಲಪಡಿಸುವ ನಿಟ್ಟಿನಲ್ಲಿ ಈ ಯೋಜನೆ ದೊಡ್ಡ ಪ್ರಯತ್ನವಾಗುತ್ತಿದೆ. ಈ ಮೂಲಕ ಭಾರತದಂತಹ ದೇಶಗಳ ಹಳ್ಳಿಗಳಿಗೂ ಎಐ ತಲಪುತ್ತದೆ. ಮುಂದಿನ ದಿನಮಾನ ಎಐನಿಂದ ಕೂಡಿರಲಿದೆ. ಹೀಗಾಗಿ ಜನರು ಎಐ ಜೊತೆಗೆ ಹೆಚ್ಚಾಗಿ ಬೆರೆತಲ್ಲಿ, ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳಬಹುದು. ಈ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಉಪಯುಕ್ತವಾಗುತ್ತವೆ.
ಬಜೆಟ್ನಲ್ಲಿ ಹಣ
ದೇಶದಲ್ಲಿ ಎಐ ಅನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ವಿಶೇಷವಾಗಿ IndiaAI ಮಿಷನ್ ಆರಂಭಿಸಿದೆ. ಇದಕ್ಕಾಗಿ 10,371.92 ಕೋಟಿ ರೂ.ಗಳನ್ನು ಎತ್ತಿಡಲಾಗಿದೆ. ಈ ಮೂಲಕ ತಂತ್ರಜ್ಞಾನ ಬಲಪಡಿಸುವುದು, ತನ್ನದೇ ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸುವುದು, ಯುವಕರಿಗೆ ಎಐ ಶಿಕ್ಷಣವನ್ನು ನೀಡುವುದು ಇದರ ಉದ್ದೇಶವಾಗಿದೆ. ಈ ಯೋಜನೆಯ ಮೂಲಕ ಸ್ವಾವಲಂಬಿಯನ್ನಾಗಿ ಮಾಡಲು ದೊಡ್ಡ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಕೇಂದ್ರ ಇನ್ನು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸಿಕೊಂಡಿದ್ದು, ಈ ಯೋಜನೆಗಳು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿವೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications