ಹಣಕಾಸು ವಲಯದಲ್ಲೂ AI ಅಳವಡಿಕೆಗೆ ಆರ್ಬಿಐ ಸಮಿತಿ ಶಿಫಾರಸು
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಕಾಲಿಟ್ಟಿದೆ. ಈಗ ಭಾರತದಲ್ಲಿ ಹಣಕಾಸು ವಲಯವನ್ನೂ ಪ್ರವೇಶಿಸಿದ್ದು, ಈ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸಮಿತಿ ಶಿಫಾರಸು ಮಾಡಿದೆ. ಹಣಕಾಸು ವಲಯದಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಕೆಯನ್ನು ಉತ್ತೇಜಿಸಲು ಆರ್ಬಿಐ ರಚಿಸಿದ ಸಮಿತಿಯು ಹಣಕಾಸು ವಲಯದ ದತ್ತಾಂಶ ಮೂಲಸೌಕರ್ಯ , ದತ್ತಾಂಶ ಆಡಳಿತ, ಗ್ರಾಹಕರ ರಕ್ಷಣೆ ಮತ್ತು ಸೈಬರ್ ಭದ್ರತಾ ಕ್ರಮಗಳು ಸೇರಿದಂತೆ ಹಲವಾರು ಕ್ರಮಗಳನ್ನು ಶಿಫಾರಸು ಮಾಡಿದೆ.
ಹಣಕಾಸು ವಲಯದಲ್ಲಿ ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಚೌಕಟ್ಟನ್ನು ಅಭಿವೃದ್ಧಿಪಡಿಸಲು ಕಳೆದ ವರ್ಷ ಡಿಸೆಂಬರ್ನಲ್ಲಿ ಆರ್ಬಿಐ ಸಮಿತಿ ರಚಿಸಿತ್ತು. ಆಗ ಈ ಪ್ರಸ್ತಾಪಗಳನ್ನು ಅದು ಮುಂದಿಟ್ಟಿತು. ಈ ಸಮಿತಿಯು ಆರು ಸ್ತಂಭಗಳನ್ನು ಆಧರಿಸಿದ 26 ಸಲಹೆಗಳನ್ನು ನೀಡಿದೆ. ಇದರಲ್ಲಿ ಮೂಲಸೌಕರ್ಯ, ನೀತಿ, ಸಾಮರ್ಥ್ಯ, ಆಡಳಿತ, ರಕ್ಷಣೆ ಕೂಡ ಸೇರಿದೆ.

ಈ ಸಮಿತಿಯು ಎಐ ನಾವೀನ್ಯತೆ ಸ್ಯಾಂಡ್ಬಾಕ್ಸ್ ಸ್ಥಾಪನೆ, ಸ್ಥಳೀಯ ಹಣಕಾಸು ವಲಯ-ನಿರ್ದಿಷ್ಟ ಎಐ ಮಾದರಿಗಳ ಅಭಿವೃದ್ಧಿ, ಹೊಂದಾಣಿಕೆ ಮತ್ತು ಸಕ್ರಿಯಗೊಳಿಸುವ ನೀತಿಗಳು, ಎಐ ಹೊಣೆಗಾರಿಕೆ ಚೌಕಟ್ಟನ್ನು ಅಳವಡಿಸಿಕೊಳ್ಳಲು ಸಹ ಶಿಫಾರಸು ಮಾಡಿದೆ. ಕಂಟ್ರೋಲ್ ಯುನಿಟ್ಗಳು ಹಾಗೂ ಸಿ ಸೂಟ್ಗಾಗಿ ಎಐ ಸಂಬಂಧಿತ ಆಡಳಿತ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಅದು ಸೂಚಿಸಿದೆ.
ಹಣಕಾಸು ವಲಯದ ನಿಯಂತ್ರಕರು ಮತ್ತು ಮೇಲ್ವಿಚಾರಕರು ಎಐ ತಂತ್ರಜ್ಞಾನಗಳ ಬಗ್ಗೆ ಸಾಕಷ್ಟು ತಿಳುವಳಿಕೆಯನ್ನು ಹೊಂದಿದ್ದಾರೆ. ಈಗ ಎಐಗೆ ಹೊಂದಿಕೆಯಾಗುತ್ತವೆ ಎಂದು ಖಚಿತಪಡಿಸಿಕೊಳ್ಳಲು ತರಬೇತಿ ಮತ್ತು ಸಾಂಸ್ಥಿಕ ಸಾಮರ್ಥ್ಯ ನಿರ್ಮಾಣ ಉಪಕ್ರಮಗಳಲ್ಲಿ ಹೂಡಿಕೆ ಮಾಡಬೇಕು ಎಂದು ಹೇಳಿದೆ. ಆಡಳಿತ ರಚನೆ, ಹೊಣೆಗಾರಿಕೆ, ಕಾರ್ಯಾಚರಣೆಯ ಸುರಕ್ಷತೆಗಳು ಮತ್ತು ಗ್ರಾಹಕ ರಕ್ಷಣೆಯಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿರುವ ಮಂಡಳಿಯಿಂದ ಅನುಮೋದಿತ ಎಐ ನೀತಿಯನ್ನು ಸ್ಥಾಪಿಸಬೇಕು ಎಂದು ಸಮಿತಿಯು ಪ್ರಸ್ತಾಪಿಸಿದೆ.

ಎಐ ಅಳವಡಿಕೆಯನ್ನ ಖಚಿತಪಡಿಸಿಕೊಳ್ಳಲು ಡೇಟಾ ಇನ್ಪುಟ್ಗಳು, ಮಾದರಿ ಮತ್ತು ಅಲ್ಗಾರಿದಮ್ ಮತ್ತು ಔಟ್ಪುಟ್ಗಳನ್ನು ಒಳಗೊಂಡಂತೆ ಮಂಡಳಿಯಿಂದ ಅನುಮೋದಿತ ಎಐ ಆಡಿಟ್ ಚೌಕಟ್ಟನ್ನು ಕಾರ್ಯಗತಗೊಳಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಒಟ್ಟಾರೆ ಭಾರತದಲ್ಲಿ ಬ್ಯಾಂಕಿಂಗ್ ಕಾರ್ಯಾಚರಣೆಯನ್ನು ಶೇ 46 ರಷ್ಟು ಸುಧಾರಿಸಲು ಕೃತಕ ಬುದ್ಧಿಮತ್ತೆ (ಎಐ) ಸಿದ್ಧವಾಗಿದೆ ಎಂದು ಹೇಳಿದೆ.
ಹಣಕಾಸು ಸೇವಾ ವಲಯದಲ್ಲಿ ಎಐ ಅನ್ನು ಹೆಚ್ಚಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಗ್ರಾಹಕರ ಅನುಭವವನ್ನು ಹೆಚ್ಚಿಸುವುದು, ಉದ್ಯೋಗಿ ಉತ್ಪಾದಕತೆಯನ್ನು ಸುಧಾರಿಸುವುದು, ಆದಾಯವನ್ನು ಹೆಚ್ಚಿಸುವುದು, ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡುವುದು ಇದರಿಂದ ಅನುಕೂಲವಾಗಲಿದೆ. ಸಾಂಪ್ರದಾಯಿಕ ಬ್ಯಾಂಕಿಂಗ್ ವ್ಯವಸ್ಥೆಯಿಂದ ಕಡಿಮೆ ಸೇವೆ ಪಡೆಯುವ ಜನರಿಗೆ ಕ್ರೆಡಿಟ್ ಪ್ರವೇಶವನ್ನು ವಿಸ್ತರಿಸಲು ಎಐ ಚಾಲಿತ ಪರ್ಯಾಯ ಕ್ರೆಡಿಟ್ ಸ್ಕೋರಿಂಗ್ ಮಾದರಿಗಳು ಕೂಡ ಸಹಾಯ ಮಾಡುತ್ತಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications