Artificial Intelligence: ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನದಲ್ಲೂ ಎಐ ಸದ್ದು..
Artificial Intelligence: ಇದೀಗ ಎಲ್ಲಾ ಕ್ಷೇತ್ರಗಳಲ್ಲೂ ಎಐ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ನಡುವೆಯೇ ಇದೀಗ ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕಮಾಂಡ್ ಕಂಟ್ರೋಲ್ ಸೆಂಟರ್ ಅನ್ನು ಉದ್ಘಾಟನೆ ಮಾಡಿದರು. ಹಾಗಾದ್ರೆ ಉದ್ದೇಶ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ 2024ರಲ್ಲಿ ಸಂಭವಿಸಿದ ದುರಂತದಲ್ಲಿ ಆರು ಜನ ಸಾವನ್ನಪ್ಪಿ, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಘಟನೆ ನಡೆದ 9 ತಿಂಗಳ ನಂತರ ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ದೇಶದ ಮೊದಲ ಕೃತಕ ಬುದ್ಧಿಮತ್ತೆ ಆಧಾರಿತ ಕಮಾಂಡ್ ಕಂಟ್ರೋಲ್ ಸೆಂಟರ್ ಉದ್ಘಾಟಿಸಿದರು. ಈ ಯೋಜನೆಯು ಭಕ್ತರ ಗುಂಪನ್ನು ನಿರ್ವಹಿಸಲು ಟಿಟಿಡಿ ರೂಪಿಸಿದೆ.

ಈ ಕೇಂದ್ರವನ್ನು ತಿರುಮಲದ ವೈಕುಂಠಂ 1 ಕಾಂಪ್ಲೆಕ್ಸ್ನಲ್ಲಿ ಸ್ಥಾಪನೆ ಮಾಡಲಾಗಿದೆ. ದೇವಸ್ಥಾನದಾದ್ಯಂತ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ದೊಡ್ಡ ಪರದೆಯ ಮೂಲಕ ಭಕ್ತರ ಚಲನೆ ಮತ್ತು ಸಾಲುಗಳನ್ನು ನೈಜ ಸಮಯದಲ್ಲಿ ಗಮನಿಸಲಾಗುತ್ತದೆ. 25ಕ್ಕೂ ಹೆಚ್ಚು ತಾಂತ್ರಿಕ ಸಿಬ್ಬಂದಿ ಈ ಕ್ಯಾಮೆರಾಗಳನ್ನು ನಿರ್ವಹಿಸುತ್ತಾರೆ. ತಿರುಮಲದ ಪ್ರಮುಖ ಪ್ರವೇಶ ದ್ವಾರವಾದ ಅಲಿಪಿರಿಯಿಂದಲೇ ಭಕ್ತರ ಒತ್ತಡವನ್ನು ಗಮನಿಸಲು ಕ್ಯಾಮೆರಾಗಳನ್ನು ಸ್ಥಾಪನೆ ಮಾಡಲಾಗಿದೆ.
ಇಲ್ಲಿನ ಎಐ ಕ್ಯಾಮೆರಾಗಳಲ್ಲಿ ಕೇವಲ ವಿಡಿಯೋ ರೆಕಾರ್ಡ್ ಅಷ್ಟೇ ಅಲ್ಲದೆ, ಸಾಲಿನಲ್ಲಿ ಜನರ ಸಂಖ್ಯೆಯನ್ನು ಎಣಿಕೆ ಮಾಡುವುದು, ಗುಂಪಿನ ಚಲನೆಯನ್ನು ಗಮನಿಸುವುದು ಮತ್ತು ದರ್ಶನದ ಕಾಯುವ ಸಮಯವನ್ನು ಅಂದಾಜಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಮಾಡುತ್ತವೆ. 3ಡಿ ನಕ್ಷೆಗಳ ಮೂಲಕ ನೈಜ ಸಮಯದ ದೃಶ್ಯವನ್ನು ಒದಗಿಸುವ ಈ ವ್ಯವಸ್ಥೆಯು ಜನರ ಗುಂಪು ತುಂಬಿದ ಕಾರಿಡಾರ್ಗಳನ್ನು ಗುರುತಿಸಿ, ಪರಿಹಾರ ಒದಗಿಸಲಿದೆ. ಕಳವು ಅನುಮಾನಾಸ್ಪದ ಚಟುವಟಿಕೆಗಳನ್ನು ಪತ್ತೆಹಚ್ಚುವುದರ ಜೊತೆಗೆ, ಕಳೆದುಹೋದ ಮಕ್ಕಳು ಅಥವಾ ವೃದ್ಧರನ್ನು ಮುಖ ಗುರುತಿಸುವ ಮೂಲಕ ಹುಡುಕಲು ಸಹಾಯ ಮಾಡುತ್ತದೆ.
ಎಐ ವ್ಯವಸ್ಥೆ ಭಕ್ತರ ಮುಖದ ಭಾವನೆ ಮತ್ತು ದೇಹದ ಚಲನೆಯನ್ನು ಗಮನಿಸಿ ಒಬ್ಬ ವ್ಯಕ್ತಿಯು ಒತ್ತಡದಲ್ಲಿ, ಅನಾರೋಗ್ಯದಲ್ಲಿ ಇದ್ದರೆ ಅಥವಾ ಅಸ್ವಸ್ಥರಾಗಿದ್ದರೆ ತಕ್ಷಣ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತದೆ. ಕ್ಯಾಮೆರಾಗಳು ಮತ್ತು ಟಿಕೆಟ್ ದಾಖಲೆಗಳಿಂದ ದತ್ತಾಂಶವನ್ನು ಸಂಗ್ರಹಿಸಿ, ಗರಿಷ್ಠ ಭಕ್ತರ ಒತ್ತಡದ ಸಮಯವನ್ನು ಗಮನಿಸಲಿದೆ. ಇದರಿಂದ ಟಿಟಿಡಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವುದು ಅಥವಾ ಹೆಚ್ಚುವರಿ ಸಾಲು ತೆರೆಯುವುದನ್ನು ಯೋಜಿಸಬಹುದು. ಬೆಂಕಿ ಅಥವಾ ವೈದ್ಯಕೀಯ ತುರ್ತು ಸಂದರ್ಭದಲ್ಲಿ, ಸುರಕ್ಷಿತ ಮತ್ತು ತ್ವರಿತ ನಿರ್ಗಮನ ಮಾರ್ಗಗಳಿಗೆ ಅನುವು ಮಾಡಿಕೊಡಲಿದೆ.
ಈ ಎಐ ಕೇಂದ್ರವನ್ನು ಜನರು ದೇವಾಲಯದ ಭದ್ರತೆಗೆ ಆಧುನಿಕ ಕೊಡುಗೆ ಎಂದು ಶ್ಲಾಘಿಸಿದ್ದಾರೆ. ಇನ್ನು ಈ ಮಹತ್ವದ ಯೋಜನೆ ಇತರ ದೇವಾಲಯಗಳಿಗೂ ಮಾದರಿ ಆಗಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಆಧುನಿಕ ಜಗತ್ತಿನಲ್ಲಿ ಎಐ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದರಿಂ ಎಷ್ಟು ಅನುಕೂಲಗಳಿವೆಯೋ, ಅಷ್ಟೇ ದುರುಪಯೋಗವನ್ನು ಕೆಲವರು ಮಾಡಿಕೊಳ್ಳುತ್ತಿದ್ದಾರೆ. ದುರುಪಯೋಗ ಮಾಡಿಕೊಳ್ಳುವವರಿಗೆ ಪೊಲೀಸರು ಬಿಸಿ ಮುಟ್ಟಿಸುವ ಕೆಲಸವನ್ನು ಸಹ ಮಾಡುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications