ಜನ್ಮರಾಶಿ, ನಕ್ಷತ್ರ : ತಿಳಿಯಲೇಬೇಕಾದ ಅಂಶಗಳು

ರಾಶಿಯನ್ನು, ಅರ್ಥಾತ್ ತಾರಾರಾಶಿಯನ್ನು ಎರಡು ರೀತಿಯಲ್ಲಿ ವ್ಯಾಖ್ಯಾನಿಸಬಹುದು. ಅಧ್ಯಯಿಸಲು ಅನುಕೂಲ ಆಗಲಿ ಎಂದು ಖಗೋಲದ ಒಟ್ಟು ಕ್ಷೇತ್ರವನ್ನು 88 ಭಾಗಗಳಾಗಿ ಇಂಟರ್ ನ್ಯಾಷನಲ್ ಅಸ್ಟ್ರನಾಮಿಕಲ್ ಯೂನಿಯನ್ ವಿಭಜಿಸಿದೆ. ಆಧುನಿಕ ಖಗೋಲ ವಿಜ್ಞಾನದ ಪ್ರಕಾರ ಈ ವಿಭಾಗಗಳಿಗೆ ತಾರಾರಾಶಿಗಳು (ಕಾನ್ಸ್ಟಲೇಷನ್ಸ್) ಎಂದು ಹೆಸರು. ಎಂದೇ, ಖಗೋಲದ ಒಂದು ಸೀಮಿತ ಕ್ಷೇತ್ರದಲ್ಲಿ ಇರುವ ತಾರೆಗಳ ಸಮೂಹವೇ ರಾಶಿ, ಪ್ರತೀ ಭಾಗದಲ್ಲಿಯೂ ಅನೇಕ ತಾರೆಗಳು ಇರುವುದರಿಂದ. ತಾರಾನಿಬಿಡ ಆಕಾಶವನ್ನು ತದೇಕಚಿತ್ತದಿಂದ ಅವಲೋಕಿಸುತ್ತಿದ್ದರೆ ಕೆಲವು ಒಂಟಿ ತಾರೆಗಳು ತಮ್ಮ ಉಜ್ವಲತೆಯಿಂದಾಗಿ ನಮ್ಮ ಗಮನ ಮೊದಲು ಸೆಳೆಯುತ್ತವೆ. ತದನಂತರ ಸಾಪೇಕ್ಷವಾಗಿ ಆಸುಪಾಸಿನಲ್ಲಿ ಇರುವ ಕೆಲವು ತಾರೆಗಳು ನಮ್ಮ ಮನಃಪಟಲದಲ್ಲಿ ವಿಶಷ್ಟ ಆಕೃತಿಗಳನ್ನು ಮೂಡಿಸುವುದರ ಮುಖೇನ ನಮ್ಮ ಗಮನ ಸೆಳೆಯುತ್ತವೆ.
ವೀಕ್ಷಕನ ಮನಃಪಟಲದಲ್ಲಿ ನಿರ್ದಿಷ್ಟ ಚಿತ್ರ ಬಿಂಬಿಸುವ ತಾರೆಗಳ ಇಂಥ ಸಮೂಹವನ್ನು, ಅರ್ಥಾತ್ ಪುಂಜವನ್ನು ಅಥವ ತಾರಾರಾಶಿಗಳು ಅನ್ನುವುದು ವಾಡಿಕೆ. ಇದೇ ಬಹುಜನಪ್ರಿಯ ವ್ಯಾಖ್ಯಾನ. ಎಲ್ಲ ಸಂಸ್ಕೃತಿಗಳಲ್ಲಿ ಪುರಾತನರು ಇಂಥ ಅನೇಕ ಪುಂಜಗಳನ್ನು ಗುರುತಿಸಿ ಅವು ಅವರ ಮನಸ್ಸಿನಲ್ಲಿ ಮೂಡಿಸಿದ ಬಿಂಬಗಳ ಹೆಸರನ್ನೇ ಇಟ್ಟರು. ಆಧುನಿಕ ಖಗೋಲ ವಿಜ್ಞಾನಿಗಳು ಕೂಡ ತಾವು ಗುರುತಿಸಿದ ಪ್ರತೀ ರಾಶಿಯಲ್ಲಿ ಒಂದು ತಾರಾಪುಂಜವನ್ನು ಗುರುತಿಸಿ ಅದಕ್ಕೊಂದು ಹೆಸರು ಕೊಟ್ಟು ಆ ಹೆಸರಿನಿಂದಲೇ ರಾಶಿಯನ್ನು ಗುರುತಿಸುತ್ತಾರೆ.
ಈಗಾಗಲೇ ಜನಪ್ರಿಯವಾಗಿದ್ದ ಪುರಾತನ ರಾಶಿ ನಾಮಗಳನ್ನು ಅಂತೆಯೇ ಉಳಿಸಿಕೊಂಡಿದ್ದಾರೆ. ಪುರಾತನರು ಒಂದೇ ರಾಶಿಗೆ ವಿಭಿನ್ನ ಸಂಸ್ಕೃತಿಗಳಲ್ಲಿ ವಿಭಿನ್ನ ಹೆಸರುಗಳು ಇರುವ ಉದಾಹರಣೆಗಳೂ ಇವೆ. ಚಿತ್ರ 1 ರಲ್ಲಿ ಇರುವ ತಾರಾ ಸಮೂಹದ ವಿನ್ಯಾಸ ಗಮನಿಸಿ. ಭಾರತೀಯರಿಗೆ ಇದು ಸಪ್ತರ್ಷಿ ಮಂಡಲ, ಬ್ರಿಟನ್ ದ್ವೀಪವಾಸಿಗಳಿಗೆ 'ನೇಗಿಲು (ದಿ ಪ್ಲೌ)", ಯುರೋಪಿನವರಿಗೆ 'ಉದ್ದ ಹಿಡಿಯ ಸೌಟು (ಬಿಗ್ ಡಿಪ್ಪರ್)", ಉತ್ತರ ಇಂಗ್ಲೆಂಡಿನವರಿಗೆ 'ಕಸಾಯಿ ಕತ್ತಿ (ಬುಚರ್ಸ್ ಕ್ಲೀವರ್), ಅಮೇರಿಕದ ಮೂಲನಿವಾಸಿಗಳಿಗೆ 'ದೊಡ್ಡ ಕರಡಿ (ಬಿಗ್ ಬೇರ್)".
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications