ಸಂಖ್ಯಾಶಾಸ್ತ್ರದ ಪ್ರಕಾರ ಯಡಿಯೂರಪ್ಪಗೆ ಕಷ್ಟ ಕಷ್ಟ ಕಷ್ಟ!
ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿರುವ ಯಡಿಯೂರಪ್ಪನವರು ಮೇ 19ರಂದು ಶನಿವಾರ ವಿಶ್ವಾಸಮತ ಯಾಚಿಸಲಿದ್ದು, ಗೆದ್ದು ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಅವರಿಗೆ ಕೆಲ ಲಿಂಗಾಯತ ಶಾಸಕರ ಬೆಂಬಲ ಸಿಗುತ್ತೋ ಇಲ್ಲವೋ ಗೊತ್ತಿಲ್ಲ.
ಯಡಿಯೂರಪ್ಪನವರ ಜಾತಕ ಮತ್ತು ಗ್ರಹಗತಿಗಳ ಪ್ರಕಾರ ಮುಂದೆ ಏನಾಗಲಿದೆ ಎಂಬ ವಿಶ್ಲೇಷಣೆಯನ್ನೂ ಖ್ಯಾತ ಜ್ಯೋತಿಷಿ ಪಂಡಿತ್ ವಿಠ್ಠಲ ಭಟ್ ಅವರು ಮಾಡಿದ್ದಾರೆ. ಈಗ, ಸಂಖ್ಯಾಶಾಸ್ತ್ರಜ್ಞರೊಬ್ಬರು ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕರಿಸಿದ ಘಳಿಗೆಯ ವಿಶ್ಲೇಷಣೆ ಮಾಡಿದ್ದಾರೆ.
ನಾಗರಾಜ್ ಎನ್ ಪಾಟೀಲ ಎಂಬ ಖ್ಯಾತ ಸಂಖ್ಯಾಶಾಸ್ತ್ರಜ್ಞರ ಪ್ರಕಾರ, ಯಡಿಯೂರಪ್ಪನವರು ಪ್ರಮಾಣ ಸ್ವೀಕರಿಸುವಾಗಲೇ ಎಡವಿದ್ದಾರೆ. ಅಂದರೆ, ತಪ್ಪು ದಿನಾಂಕದಂದು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿ ತಪ್ಪು ಮಾಡಿದ್ದಾರೆ. ನಾಗರಾಜ್ ಅವರ ವಿವರಣೆ ಮುಂದಿನಂತೆ ಇದೆ.

ಯಡಿಯೂರಪ್ಪನವರು ಹುಟ್ಟಿದ್ದು 27ನೇ ತಾರೀಖಿನಂದು (27ನೇ ಫೆಬ್ರವರಿ 1943). ಎರಡೂ ಸಂಖ್ಯೆ ಸೇರಿದರೆ 9 ಆಗುತ್ತದೆ. ಆದರೆ, ಅವರು ಪ್ರಮಾಣ ವಚನ ಸ್ವೀಕರಿಸಿದ್ದು 17ರಂದು. ಎರಡೂ ಸಂಖ್ಯೆಯನ್ನು ಕೂಡಿದರೆ ಬರುವುದು 8. ಇದು 9ನೇ ಸಂಖ್ಯೆಗೆ ತದ್ವಿರುದ್ಧ.
* ಸಂಖ್ಯಾಶಾಸ್ತ್ರದ ಪ್ರಕಾರ 9 ಮತ್ತು 8 ಸಂಖ್ಯೆಗಳಿಗೆ ಆಗಿಬರುವುದಿಲ್ಲ. ಎರಡೂ ತದ್ವಿರುದ್ಧ. ಗ್ರಹಗಳು ಕೂಡ ಇದನ್ನೇ ಸೂಚಿಸುತ್ತವೆ. 9ನೇ ಸಂಖ್ಯೆಯನ್ನು ಮಂಗಳ ಪ್ರತಿನಿಧಿಸುತ್ತಿದ್ದರೆ, 8ನೇ ಸಂಖ್ಯೆಯನ್ನು ಶನಿ ಪ್ರತಿನಿಧಿಸುತ್ತದೆ.
* ಇನ್ನು, 17ನೇ ಮೇ, 2018ನ್ನು ಒಟ್ಟಾರೆಯಾಗಿ ಕೂಡಿಸಿದರೆ ಬರುವ ಸಂಖ್ಯೆ 15. ಇದು ಅತೀವ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ ಮತ್ತು ಇದು ಭವಿಷ್ಯದಲ್ಲಿ ಆಂತರಿಕ ಮತ್ತು ಬಾಹ್ಯ ರಾಜಕೀಯ ವೈರಿಗಳನ್ನು ಸೃಷ್ಟಿಸುವಲ್ಲಿ ಸಹಕಾರಿಯಾಗುತ್ತದೆ. ವೈರಿಗಳು ಪ್ರತಿಸ್ಪರ್ಧಿಗಳಿಂದಲೂ ಹುಟ್ಟಬಹುದು ಅಥವಾ ಮಹಿಳಾ ನಾಯಕಿಯರಿಂದಲೂ ಹುಟ್ಟಬಹುದು.
* ಒಂದು ವೇಳೆ ವಿಶ್ವಾಸಮತ ಗೆದ್ದಮೇಲೆ ಕೂಡ ಸರಕಾರ ರಚಿಸಿದ ನಂತರ ಭವಿಷ್ಯದಲ್ಲಿ ಹಲವಾರು ಗಂಭೀರ ಪರಿಸ್ಥಿತಿಗಳನ್ನು ಎದುರಿಸುವಂತಾಗಬಹುದು.

* ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ವೈಯಕ್ತಿಕವಾಗಿ ಹಲವಾರು ಅಡೆತಡೆಗಳನ್ನು ಅವರು ಎದುರಿಸಲಿದ್ದಾರೆ. ಇದೆಲ್ಲದರಿಂದಾಗಿ ಅವರ ವೈಯಕ್ತಿಕ ಇಮೇಜಿಗೆ ಭಾರೀ ಹೊಡೆತ ಬೀಳುತ್ತದೆ. ಇಷ್ಟು ಮಾತ್ರವಲ್ಲ ಅವರ ಆರೋಗ್ಯದ ಮೇಲೆ ಕೂಡ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications