ಜ್ಯೋತಿಷ್ಯ: ಮದುವೆ ವಿಳಂಬಕ್ಕೆ ಪರಿಹಾರ ತಿಳಿಸಿ...
ಭವಿಷ್ಯದ ಬಗ್ಗೆ ನಿಮಗಿರುವ ಪ್ರಶ್ನೆಗಳನ್ನು ಕಳಿಸಿದರೆ ಒನ್ಇಂಡಿಯಾ ಕನ್ನಡದ ಜ್ಯೋತಿಷಿಗಳಾದ ಪಂಡಿತ್ ವಿಠ್ಠಲ ಭಟ್ ಅವರು ಉತ್ತರ ನೀಡುತ್ತಾರೆ ಎಂದು ತಿಳಿಸಲಾಗಿತ್ತು. ಆ ನಂತರ ಅನೇಕ ಓದುಗರು ತಮ್ಮ ಪ್ರಶ್ನೆಗಳನ್ನು ಕಳುಹಿಸಿದ್ದರು. ಆ ಪೈಕಿ ಆಯ್ದ 3 ಪತ್ರಕ್ಕೆ ಜ್ಯೋತಿಷಿಗಳು ಉತ್ತರಿಸಿದ್ದಾರೆ.
ಅಂದಹಾಗೆ ನೀವು ಕೂಡ ಪ್ರಶ್ನೆ ಕಳುಹಿಸಬಹುದು. ನಿಮ್ಮ ಹೆಸರು, ಜನ್ಮ ದಿನಾಂಕ, ಹುಟ್ಟಿದ ಸಮಯ, ಊರು-ಜಿಲ್ಲೆ-ತಾಲೂಕು, ತಂದೆ-ತಾಯಿಯ ಹೆಸರು. ನಿಮ್ಮ ಪ್ರಶ್ನೆ ಇಷ್ಟೂ ವಿವರವನ್ನು ನಮಗೆ ಈ ಮೇಲ್ [email protected] ಮೂಲಕ ಕಳುಹಿಸಿದರೆ, ಆಯ್ದ ಪ್ರಶ್ನೆಗಳಿಗೆ ಪರಿಹಾರ ಸಹಿತವಾಗಿ ಜ್ಯೋತಿಷಿಗಳು ಉತ್ತರ ನೀಡುತ್ತಾರೆ.[ಜ್ಯೋತಿಷ್ಯ: ಗುರುಬಲದಲ್ಲಿ ಇನ್ನಷ್ಟು ಎತ್ತರಕ್ಕೆ ಏರಿದ ನರೇಂದ್ರ ಮೋದಿ]

ಜ್ಯೋತಿಷಿ ಪಂಡಿತ್ ವಿಠ್ಠಲ ಭಟ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಮೊಬೈಲ್ ಫೋನ್ ನಂಬರ್ 9845682380 ಮೂಲಕ ಸಂಪರ್ಕಿಸಬಹುದು. ಇನ್ನು ಪರಿಹಾರ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದಂತೆ ಜ್ಯೋತಿಷಿಗಳು ಸೂಚಿಸಿದ್ದರ ಬಗ್ಗೆ ನಂಬಿಕೆ ಇದ್ದಲ್ಲಿ ಅನುಸರಿಸಬಹುದು. ಈ ವಿಚಾರದಲ್ಲಿ ಒನ್ ಇಂಡಿಯಾ ಕನ್ನಡ ಯಾವುದೇ ರೀತಿಯಲ್ಲೂ ಜವಾಬ್ದಾರಿಯಲ್ಲ. -ಸಂಪಾದಕ
ಪ್ರಶ್ನೆ: ನಮಸ್ತೆ. ನನ್ನ ಮದುವೆಗಾಗಿ ಮನೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ ಬಹುತೇಕ ಪ್ರಸ್ತಾವಗಳು ಅಂತಿಮ ಹಂತದವರೆಗೆ ಬಂದು ನಿಲ್ಲುತ್ತಿದೆ. ಈ ಬಗ್ಗೆ ನನ್ನ ಕುಟುಂಬದವರಿಗೆ ಚಿಂತೆಯಾಗಿದೆ. ದಯವಿಟ್ಟು ಇದಕ್ಕೆ ಕಾರಣ ತಿಳಿಸಿ.
ಉತ್ತರ. ನಿಮ್ಮದು ಜ್ಯೇಷ್ಠಾ ನಕ್ಷತ್ರ, ವೃಶ್ಚಿಕ ರಾಶಿ. ನಿಮ್ಮ ಜಾತಕದಲ್ಲಿ ಮದುವೆಗೆ ಸಂಬಂಧಿಸಿದ ಹಾಗೆ ಕೆಲ ಸಮಸ್ಯೆಗಳಿವೆ. ಅದರ ನಿವಾರಣೆಗಾಗಿ ಕುಜ, ಶುಕ್ರ ಮತ್ತು ಶನಿ ಶಾಂತಿ ಹವನ ಮಾಡಿಸಬೇಕು. ಮತ್ತು ತುಂಬ ಶಕ್ತಿಶಾಲಿಯಾದ ಸುಬ್ರಹ್ಮಣ್ಯ ಹಾಗೂ ದುರ್ಗಾ ಕ್ಷೇತ್ರದ ದರ್ಶನ ಮಾಡಿ. ಶುಭವಾಗಲಿ.[ಜ್ಯೋತಿಷ್ಯ: ಯಾವ ರಾಶಿಯವರಿಗೆ ಯಾವುದು ಅದೃಷ್ಟ ರತ್ನ?]
ಪ್ರಶ್ನೆ: ನಾನು ಅಂದುಕೊಂಡ ಯಾವ ಕೆಲಸವೂ ಆಗುತ್ತಿಲ್ಲ. ಮನೆ ಖರೀದಿಸಬೇಕು ಅಂದುಕೊಳ್ತಿದೀನಿ, ಅದೂ ಆಗ್ತಿಲ್ಲ. ನನಗೆ ಇನ್ನೊಬ್ಬರ ಬಳಿ ಕೆಲಸ ಮಾಡುವುದು ಇಷ್ಟವಿಲ್ಲ. ವ್ಯಾಪಾರ ಮಾಡಬೇಕು ಅನ್ನೋದು ನನ್ನಾಸೆ. ಆದರೆ ಸಮಯವೇ ಕೂಡಿಬರುತ್ತಿಲ್ಲ. ನನಗೆ ಪರಿಹಾರ ಸೂಚಿಸಿ. ಭವಿಷ್ಯ ಹೇಗಿರುತ್ತದೆ ಎಂದು ತಿಳಿಸಿ.
ಉತ್ತರ: ನಿಮ್ಮದು ಕೃತ್ತಿಕಾ ನಕ್ಷತ್ರ, ವೃಷಭ ರಾಶಿ, ಸಿಂಹ ಲಗ್ನ. ನಕ್ಷತ್ರ ಹಾಗೂ ಲಗ್ನ ಎರಡೂ ನಿಮ್ಮ ಅತಿ ಕೋಪವನ್ನು ಸೂಚಿಸುತ್ತದೆ. ಸಾಧನೆಗೆ ಅವೇ ಅಡ್ಡಿ. ಮೊದಲಿಗೆ ಸಿಟ್ಟು-ಹಟ ಸ್ವಭಾವ ಬಿಡಿ. ನಿಮ್ಮ ಜಾತಕದಲ್ಲಿ ಶುಕ್ರ ನೀಚ ಸ್ಥಿತಿಯಲ್ಲಿದ್ದು, ಯಾವ ಕಾರಣಕ್ಕೂ ವ್ಯಾಪಾರಕ್ಕೆ ಕೈ ಹಾಕಬೇಡಿ. ಶುಕ್ರ ಹಾಗೂ ಶನಿ ಶಾಂತಿ ಹವನ ಮಾಡಿಸಿ, ನಿಮ್ಮ ಇಷ್ಟಾರ್ಥ ಈಡೇರಲಿ.
ಪ್ರಶ್ನೆ: ನಾನು ಎಂಎಸ್ಸಿ ಮ್ಯಾಥಮೆಟಿಕ್ಸ್ ಮಾಡುತ್ತಿದ್ದೇನೆ. ನನ್ನ ವಿದ್ಯಾಭ್ಯಾಸದ ಬಗ್ಗೆ ತಿಳಿಸಿ. ಒಳ್ಳೆ ಅಂಕ ಬರಲು ಏನು ಮಾಡಬೇಕು, ನನಗೆ ಮುಂದೆ ಪಿಎಚ್.ಡಿ ಮಾಡುವ ಆಸೆ ಇದೆ. ಮಾಡ್ತೀನಾ? ಮುಂಚೆ ಬಹಳ ಚೆನ್ನಾಗಿ ಓದ್ತಿದ್ದೆ. ಈಗ ಎಲ್ಲಿ ಫೇಲ್ ಆಗಿಬಿಡ್ತೀನೋ ಅನಿಸ್ತಿದೆ. ನನ್ನ ಪ್ರಶ್ನೆಗಳಿಗೆ ದಯವಿಟ್ಟು ಉತ್ತರಿಸಿ.[ಜ್ಯೋತಿಷ್ಯ: ರಾಹು ಗ್ರಹವು ಕೊಟ್ಟರೆ ವರ, ಇಟ್ಟರೆ ಶಾಪ!]
ಉತ್ತರ: ನಿಮ್ಮ ಜಾತಕದಲ್ಲಿ ವಿದ್ಯೆ ಉತ್ತಮವಾಗಿದೆ. ಆದ್ದರಿಂದ ಕಿಂಚಿತ್ತೂ ಚಿಂತೆ ಬೇಡ. ಕಷ್ಟಪಟ್ಟು ಅಲ್ಲದೆ, ಇಷ್ಟಪಟ್ಟು ಓದಿ. ಫೇಲಾಗುವ ಭಯ ಬೇಡ. ನಿಮ್ಮ ಜಾತಕದಲ್ಲಿ ಬುಧ ಲಾಭ ಸ್ಥಾನ ಹಾಗೂ ಗುರು ಸ್ವಸ್ಥಾನ-ಭಾಗ್ಯ ಸ್ಥಾನದಲ್ಲಿದೆ. ನಿಮಗೆ ವಿದ್ಯೆ ವಿಚಾರದಲ್ಲಿ ಸಹಕಾರ ದೊರೆಯುತ್ತದೆ. ನಿಮ್ಮದು ಮೇಷ ಲಗ್ನ. ಅಂದರೆ ಹಟ ಸ್ವಭಾವ. ಅದನ್ನು ವಿದ್ಯೆಯಲ್ಲಿ ತೋರಿಸಿ. ಶುಭವಾಗಲಿ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications