ಜ್ಯೋತಿಷ್ಯ: ಸಾಂಸಾರಿಕ ಸಮಸ್ಯೆಗೆ ಕಾರಣ ಮತ್ತು ಪರಿಹಾರ ಏನು?
ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಸಾಮರಸ್ಯ ಇದ್ದು, ಮನೆಯ ಯಜಮಾನಿಯಿಂದ ನೆಮ್ಮದಿ ನೆಲೆಸಿದರೆ ಎಲ್ಲದರಲ್ಲೂ ಗೆಲುವೇ. ಅಥವಾ ಎಂಥ ಸವಾಲನ್ನು ಎದುರಿಸಲೂ ಬಲವೇ. ಅದೇ ರೀತಿ ತನ್ನ ಮನೆ, ತಂದೆ- ತಾಯಿ, ಅಕ್ಕ- ತಂಗಿ, ಅಣ್ಣ- ತಮ್ಮ ಎಲ್ಲರನ್ನೂ ಬಿಟ್ಟು ಬಂದ ಹೆಣ್ಣಿಗೆ ಗಂಡನ ಪ್ರೀತಿಯೂ ಅಷ್ಟೇ ಮುಖ್ಯ.
ಆದರೆ, ಕೆಲವೊಮ್ಮೆ ಸರಿಯಾದ ಜಾತಕ ವಿಶ್ಲೇಷಣೆ ಮಾಡದೆ ಆದ ಮದುವೆ ಅಥವಾ ಪ್ರೀತಿಸಿ ಮಾಡಿಕೊಂಡ ವಿವಾಹದಲ್ಲಿ ಗಂಡ- ಹೆಂಡತಿ ಮಧ್ಯೆ ನಿತ್ಯವೂ ಜಗಳ- ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ಮನೆಯಲ್ಲಿ ಸದಾ ಕಲಹ. ಅವಾಚ್ಯ ಶಬ್ದಗಳ ಬೈಗುಳ ಕೇಳಿಬರುತ್ತದೆ. ಯಾಕಾಗಿ ಈ ರೀತಿಯ ಫಲಗಳನ್ನು ಅನುಭವಿಸಬೇಕಾಗುತ್ತದೆ ಎಂಬ ಬಗ್ಗೆ ಕೆಲವು ಮುಖ್ಯ ಸಲಹೆಗಳನ್ನು ಇಲ್ಲಿ ನೀಡಲಾಗುತ್ತಿದೆ.
* ವಧು- ವರರ ಸಾಲಾವಳಿ ನೋಡುವಾಗ ಗುಣ, ಕೂಟ ಆಗಿಬಂದರೆ ಸಾಕು ಎಂದು ಕೆಲವು ಜ್ಯೋತಿಷಿಗಳನ್ನು ವಿವಾಹ ನಿಶ್ಚಯ ಮಾಡಿಕೊಡುತ್ತಾರೆ. ಲಗ್ನ ಕುಂಡಲಿಯಾಗಲಿ, ನವಾಂಶ ಕುಂಡಲಿಯಾಗಲೀ ವಧು- ವರರ ಜಾತಕದಲ್ಲಿನ ದೋಷಗಳನ್ನಾಗಲೀ ಪರಾಂಬರಿಸುವುದಿಲ್ಲ. ಹೀಗೆ ಮದುವೆಯಾದ ನಂತರ ನಿತ್ಯವೂ ಒಂದಿಲ್ಲೊಂದು ರಗಳೆ ಇರುತ್ತದೆ.

* ಮದುವೆ ವಿಚಾರಕ್ಕೆ ಬಂದಾಗ ಜನ್ಮ ಜಾತಕದಲ್ಲಿ ಗಂಡು- ಹೆಣ್ಣು ಇಬ್ಬರಿಗೂ ಲಗ್ನದಿಂದ ಸಪ್ತಮ ಸ್ಥಾನ ಬಹಳ ಮುಖ್ಯವಾದದ್ದು, ಆ ನಂತರ ಇಬ್ಬರಿಗೂ ಪಂಚಮ ಸ್ಥಾನ (ಸಂತಾನ) ಹಾಗೂ ಹೆಣ್ಣಿಗೆ ಲಗ್ನದ ಅಷ್ಟಮ ಸ್ಥಾನ (ಆಯುಷ್ಯ) ಕೂಡ ಮುಖ್ಯವಾದದ್ದು. ಇವೆಲ್ಲವನ್ನೂ ಸರಿಯಾಗಿ ಪರಾಂಬರಿಸಿ, ಆ ನಂತರ ನವಾಂಶ ಕುಂಡಲಿ ಹೇಗಿದೆ ಎಂದು ಸಹ ಗಮನಿಸಬೇಕು.
* ಇಲ್ಲಿ ಕೆಲವು ನಕ್ಷತ್ರ ಅಥವಾ ರಾಶಿಯ ಹೆಸರನ್ನು ಹೇಳಲು ಹೋಗುವುದಿಲ್ಲ. ಆದರೆ ಅವುಗಳ ಸಮಸ್ಯೆಯನ್ನು ತಿಳಿಸುತ್ತೇನೆ. ಏನೇ ಮಾಡಿದರೂ ಅವರ ಅನುಮಾನವನ್ನು ಪರಿಹರಿಸುವುದಕ್ಕೆ ಸಾಧ್ಯವೇ ಇಲ್ಲ. ಕೆಲವರಿಗೆ ಅದ್ಯಾವ ಪರಿಯ ಸಿಟ್ಟು ಅಂದರೆ, ಆ ಸಮಯದಲ್ಲಿ ಅದೇನು ಮಾಡುತ್ತಿದ್ದೇನೆ ಎಂಬ ಪರಿವೆ ಇರುವುದಿಲ್ಲ. ಹಠದ ಸ್ವಭಾವ ಇರುವ ನಕ್ಷತ್ರಗಳು ಯಾವುದರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ.
* ಇವು ಆಯಾ ಲಗ್ನ ಅಥವಾ ನಕ್ಷತ್ರ ಅಥವಾ ಗ್ರಹ ಸ್ಥಿತಿಯಲ್ಲಿ ಜನಿಸಿದವರ ಜೀವದ ಸ್ವಭಾವ ಆಗಿರುತ್ತದೆ. ಅದನ್ನು ಬದಲಿಸುವುದೇ ಕಷ್ಟಸಾಧ್ಯ. ಇನ್ನು ಸಪ್ತಮ ಸ್ಥಾನದಲ್ಲಿ ರಾಹು ಅಥವಾ ಕೇತು ಅಥವಾ ಕುಜ ಅಥವಾ ಶನಿ ಇದ್ದಲ್ಲಿ ಆಯಾ ಗ್ರಹಕ್ಕೆ ತಕ್ಕಂತೆ ಫಲ ಅನುಭವಿಸಬೇಕಾಗುತ್ತದೆ. ಜಾತಕದಲ್ಲಿ ರಾಹು- ಗುರು, ರವಿ- ಶುಕ್ರ ಇಂಥ ಗ್ರಹ ಸಂಯೋಗದಿಂದಲೂ ಸಮಸ್ಯೆಗಳು ಎದುರಾಗುತ್ತವೆ.
* ಇಂಥ ದೋಷಗಳನ್ನು ಪರಿಹರಿಸುವುದಕ್ಕೆ ವಿವಾಹದ ಪೂರ್ವದಲ್ಲಿ ಕೆಲವು ಶಾಂತಿ, ಹವನ, ಪೂಜೆ ಅಥವಾ ಜಪ ಮಾಡಿಕೊಳ್ಳಬೇಕು. ಒಂದು ವೇಳೆ ಮದುವೆ ಆಗಿದೆ ಅಂತಾದರೆ ಕೆಲವು ನಿರ್ದಿಷ್ಟ ತೀರ್ಥ ಕ್ಷೇತ್ರಗಳಿಗೆ ನಿರ್ದಿಷ್ಟ ಸಮಯದಲ್ಲಿ ದರ್ಶನಕ್ಕೆ ತೆರಳುವ ಮೂಲಕ ಪರಿಹಾರ ಮಾಡಿಕೊಳ್ಳಬೇಕು.
ಲಗ್ನಕ್ಕೆ ಏಳನೇ ಮನೆಯಲ್ಲಿ ಯಾವ ಗ್ರಹ ಇದೆ, ಆ ರಾಶಿಯ ಅಧಿಪತಿ ಯಾವ ಮನೆಯಲ್ಲಿ ಇದೆ, ಸಪ್ತಮ ಸ್ಥಾನದ ಮೇಲೆ ಯಾವ ಗ್ರಹದ ದೃಷ್ಟಿ ಇದೆ ಮತ್ತು ಗ್ರಹದ ಬಲಾಬಲವನ್ನು ಲೆಕ್ಕ ಹಾಕಬೇಕು. ಮದುವೆ ಆಗುವ ಮುನ್ನ ಜಾತಕ ತೋರಿಸುವಾಗಲೇ ಸರಿಯಾದ ವಧು ಅಥವಾ ವರನನ್ನು ಆರಿಸಿಕೊಳ್ಳುವುದು ಮುಂಜಾಗ್ರತೆಯಾಗುತ್ತದೆ.
ಒಂದು ವೇಳೆ ಮದುವೆ ಆಗಿದೆ. ಈಗ ಗಂಡ- ಹೆಂಡತಿ ಮಧ್ಯೆ ಹೊಂದಾಣಿಕೆ ಆಗುತ್ತಿಲ್ಲ ಎಂದಾದಲ್ಲಿ ಕೆಲವು ಪೂಜೆ, ಹವನ, ತೀರ್ಥ ಕ್ಷೇತ್ರಗಳ ದರ್ಶನ ಅಥವಾ ಜಪಗಳನ್ನು ಮಾಡುವ ಮೂಲಕ ಪರಿಹರಿಸಿಕೊಳ್ಳಬಹುದು. ಆದರೆ ಪರಿಹಾರ ಏನು ಎಂಬುದನ್ನು ತಜ್ಞ ಜ್ಯೋತಿಷಿಗಳಲ್ಲಿ ಜಾತಕ ತೋರಿಸಿ, ತಿಳಿದುಕೊಳ್ಳಿ.
ಯಾವುದೇ ಮಾರ್ಗದರ್ಶನಕ್ಕೆ, ಸೂಕ್ತ ಜಾತಕ ವಿಶ್ಲೇಷಣೆಗೆ ವೈಯಕ್ತಿಕವಾಗಿ ಭೇಟಿಗೆ ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಪೀಠ, ಜಯನಗರ, ಬೆಂಗಳೂರು. ಮೊಬೈಲ್ 9986623344 ಸಂಪರ್ಕಿಸಿ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications