ಜ್ಯೋತಿಷ್ಯ: ಫೆಬ್ರವರಿ ಮಧ್ಯದಿಂದ ಜೂನ್ ವರೆಗೆ ಯಡಿಯೂರಪ್ಪನವರಿಗೆ ಆತಂಕ
ಈ ವರ್ಷದ ಏಪ್ರಿಲ್ ನಲ್ಲಿ ಮಕರ ರಾಶಿಗೆ ಗುರು ಗ್ರಹದ ಪ್ರವೇಶ ಆಗಲಿದೆ. ಶನಿಯ ಜತೆಗೂಡಿ ಗುರು ಗ್ರಹವು ಅಲ್ಲಿ ಕೆಲ ಇರುತ್ತದೆ. ಅದರ ಪರಿಣಾಮವು ಫೆಬ್ರವರಿ ಮಧ್ಯ ಭಾಗದಿಂದಲೇ ಗೋಚರಿಸಲು ಆರಂಭವಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಆ ಬದಲಾವಣೆಯನ್ನು ಗಮನಿಸಬಹುದು. ಪ್ರಧಾನಿ ನರೇಂದ್ರ ಮೋದಿ ಅವರ ಜಾತಕಕ್ಕೆ ಹೋಲಿಸಿದರೆ ಯಡಿಯೂರಪ್ಪ ಅವರ ಜಾತಕ ದುರ್ಬಲವಾಗಿದೆ.
ಆದ್ದರಿಂದ ಕರ್ನಾಟಕ ರಾಜಕೀಯದಲ್ಲಿ ಸಂಚಲನವೊಂದು ನಡೆಯಲಿದೆ. ಇದು ಫೆಬ್ರವರಿ ತಿಂಗಳ ಆರಂಭ. ಏಪ್ರಿಲ್-ಮೇ-ಜೂನ್ ಈ ಮೂರು ತಿಂಗಳಲ್ಲಿ ಆ ಸಂಚಲನಕ್ಕೆ ರಾಜ್ಯ ಹಾಗೂ ಇಲ್ಲಿನ ಜನರು ಸಾಕ್ಷಿ ಆಗಲಿದ್ದಾರೆ. ಮುಖ್ಯವಾಗಿ ಬಿ. ಎಸ್. ಯಡಿಯೂರಪ್ಪ ಅವರು ನಿರ್ಧಾರವೊಂದನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ರಾಜ್ಯ ರಾಜಕಾರಣಕ್ಕೆ ಅವರ ಉತ್ತರಾಧಿಕಾರಿ ಹೆಸರನ್ನು ಸೂಚಿಸುವ ಸಾಧ್ಯತೆ ಕಾಣುತ್ತಿದೆ. ಇದರ ಜತೆ ಜತೆಗೆ ತಮ್ಮ ಕುಟುಂಬದ ವ್ಯಕ್ತಿಯೊಬ್ಬರನ್ನು ರಾಜ್ಯ ರಾಜಕಾರಣಕ್ಕೆ ಸಕ್ರಿಯವಾಗಿ ಕರೆತರುವ ಸಾಧ್ಯತೆ ಇದೆ. ಪಕ್ಷದೊಳಗೆ ಅಥವಾ ಸರ್ಕಾರದೊಳಗೂ ಸ್ಥಾನಮಾನ ಕಲ್ಪಿಸಬಹುದು. ಈ ಅವಧಿಯಲ್ಲಿ ಪಕ್ಷದೊಳಗೆ ಆಂತರಿಕ ಭಿನ್ನಮತ ದೊಡ್ಡ ಮಟ್ಟಕ್ಕೆ ಹೆಚ್ಚಾಗಲಿದೆ.

ಮೈ ಮರೆತರೆ ಹಗರಣದ ಸ್ವರೂಪದಲ್ಲಿ ಅಪಮಾನವೊಂದನ್ನು ಎದುರುಗೊಳ್ಳಬಹುದು. ಇದಕ್ಕೆ ಬೇಕಾದ ರಕ್ಷಣೆ ಪಡೆದುಕೊಳ್ಳುವುದಕ್ಕೆ ಒಂದು ಅವಕಾಶ ಇದೆ. ಆದರೆ ಅದರಿಂದ ಬಹಳ ದೊಡ್ಡ ಮಟ್ಟದಲ್ಲಿ ಸಹಾಯ ಆಗಬಹುದು ಎನಿಸುತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗುರು ಶಾಪ ಕಾಣಿಸುತ್ತಿದೆ.
ಅದರ ನಿವಾರಣೆ ಆಗಬೇಕು ಅಂದಲ್ಲಿ, ಈ ಹಿಂದೆ ಅವರು ನೀಡಿದ್ದ ಮಾತೊಂದನ್ನು ನೆನಪಿಸಿಕೊಂಡು, ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗುತ್ತದೆ. ಫೆಬ್ರವರಿ ಹದಿನೈದರ ನಂತರ ಅವರ ಆಲೋಚನೆ ಮುಂಚಿನಂತೆ ಇರುವುದಕ್ಕೆ ಅವಕಾಶ ಇರುವುದಿಲ್ಲ. ಆದರೂ ಗುರು ದತ್ತಾತ್ರೇಯರ ಮೊರೆ ಹೋದರೆ ಕೆಲವು ಅಪಾಯಗಳಿಂದ ತಪ್ಪಿಸಿಕೊಳ್ಳುವ ದಾರಿ ಕಾಣಿಸಬಹುದು.
ಬಹು ಕಾಲದಿಂದ ಯಡಿಯೂರಪ್ಪ ಅವರ ಜತೆಯಲ್ಲೇ ಇರುವ ವ್ಯಕ್ತಿಯೊಬ್ಬರ ಸಲಹೆಯೂ ಅಪಾಯಕಾರಿಯಾಗಿ ಪರಿಣಮಿಸಬಹುದು. ಅದರಲ್ಲೂ ಧಾರ್ಮಿಕ ವಿಚಾರದಲ್ಲಿ ಜನರು ಸಿಟ್ಟಿಗೇಳುವಂಥ ನಿರ್ಧಾರವನ್ನು ಸರ್ಕಾರದ ಪರವಾಗಿ ಘೋಷಿಸುವಂಥ ಸಾಧ್ಯತೆಗಳಿವೆ. ಇವೆಲ್ಲ ಯಾಕೆ ಹೇಳಬೇಕಾಗಿದೆ ಅಂದರೆ, ಜೂನ್ ತನಕ ಇರುವ ಅಪಾಯವನ್ನು ಅವರು ದಾಟಲು ನೆರವಾಗಬಹುದು ಎಂಬ ಕಾರಣಕ್ಕೆ. ಉಳಿದಂತೆ ಆ ದೈವೇಚ್ಛೆ.
(ಈ ಮೇಲ್ಕಂಡ ಅಭಿಪ್ರಾಯವು ಲೇಖಕರವೇ ಹೊರತು ಒನ್ ಇಂಡಿಯಾ ಕನ್ನಡ ಜವಾಬ್ದಾರ ಅಲ್ಲ)
ವೈಯಕ್ತಿಕವಾಗಿ ಭೇಟಿ ಮಾಡಬೇಕಿದ್ದಲ್ಲಿ ವಿಳಾಸ ಮತ್ತು ಸಂಪರ್ಕ ಸಂಖ್ಯೆ:
ಶ್ರೀನಿವಾಸನ್
ಪ್ರಧಾನ ಜ್ಯೋತಿಷ್ಯರು
ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಪೀಠ
# 37, 27ನೇ ಕ್ರಾಸ್, 12ನೇ ಮುಖ್ಯರಸ್ತೆ
ವಾಸುದೇವ್ ಅಡಿಗಾಸ್ ಹೋಟೆಲ್ ಹತ್ತಿರ
ಜಯನಗರ 4ನೇ ಬ್ಲಾಕ್, opp ಸಿಂಡಿಕೇಟ್ ಬ್ಯಾಂಕ್
ಬೆಂಗಳೂರು 560011
ಸಂಪರ್ಕ ಸಂಖ್ಯೆ 9886665656- 9886155755
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications