Brahma Yoga 2024: ಇಂದು ಬ್ರಹ್ಮ ಯೋಗ: ಈ ರಾಶಿಗೆ ಅದೃಷ್ಟವೇ ಸ್ನೇಹಿತ
ಅಕ್ಟೋಬರ್ 2 ರಂದು ಬ್ರಹ್ಮ ಯೋಗ ರೂಪುಗೊಳ್ಳಲಿದೆ. ಈ ದಿನ ಚಂದ್ರನು ಬುಧ, ಕನ್ಯಾ ರಾಶಿಯಲ್ಲಿ ಸಾಗಲಿದ್ದಾನೆ. ಭಾದ್ರಪದ ಮಾಸದ ಶುಕ್ಲ ಪಕ್ಷದ ಅಮಾವಾಸ್ಯೆಯ ತಿಥಿಯಾಗಿದ್ದು, ಈ ದಿನಾಂಕವನ್ನು ಮಹಾಲಯ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಇಂದು ಶ್ರಾದ್ಧ ಆಚರಣೆಗಳು ಮತ್ತು ತರ್ಪಣವನ್ನು ಮಾಡಿದ ನಂತರ ಪೂರ್ವಜರು ಬೀಳ್ಕೊಡಲಾಗುತ್ತದೆ. ಅಲ್ಲದೆ ಇಂದು ಬ್ರಹ್ಮಯೋಗ, ಸರ್ವಾರ್ಥ ಸಿದ್ಧಿ ಯೋಗ, ಐಂದ್ರ ಯೋಗ, ಉತ್ತರ ಫಾಲ್ಗುಣಿ ನಕ್ಷತ್ರಗಳ ಶುಭ ಸಂಯೋಗವೂ ನಡೆಯಲಿದೆ.
ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಹಾಲಯ ಅಮಾವಾಸ್ಯೆ ಶ್ರಾದ್ಧದ ದಿನದಂದು ಶುಭ ಯೋಗದ ಲಾಭವನ್ನು ಕೆಲ ರಾಶಿಯವರು ಪಡೆಯುತ್ತಾರೆ. ಈ ರಾಶಿಯವರು ಹಣದ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಹಾಗಾದರೆ ಅಕ್ಟೋಬರ್ 2 ರಂದು ಯಾವ ರಾಶಿಯವರಿಗೆ ಅದೃಷ್ಟ ಒಲಿಯಲಿದೆ ಎಂಬುದನ್ನು ತಿಳಿಯೋಣ.

ಮಿಥುನ ರಾಶಿ
ಮಹಾಲಯ ಅಮಾವಾಸ್ಯೆಯ ದಿನ ಮಿಥುನ ರಾಶಿಯವರಿಗೆ ಒಳ್ಳೆಯದಾಗಲಿದೆ. ವ್ಯಾಪಾರಕ್ಕಾಗಿ ನೀವು ಸರ್ಕಾರದಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ನಿಮ್ಮ ಕುಟುಂಬದೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ. ಮಿಥುನ ರಾಶಿಯವರ ಕುಟುಂಬದಲ್ಲಿ ಹಬ್ಬದ ವಾತಾವರಣ ಇರುತ್ತದೆ. ನಿಮ್ಮ ಆರ್ಥಿಕ ನಿರ್ಧಾರಗಳು ನಿಮ್ಮ ಕೈ ಹಿಡಿಯಲಿವೆ. ಪೂರ್ವಜರ ಆಶೀರ್ವಾದ ಇರುತ್ತದೆ. ಮನೆಯನ್ನು ಅಲಂಕರಿಸುವ ಅಥವಾ ದುರಸ್ತಿ ಮಾಡುವ ಬಗ್ಗೆ ನಿಮ್ಮ ಕುಟುಂಬದ ಸದಸ್ಯರೊಂದಿಗೆ ನೀವು ಚರ್ಚಿಸಬಹುದು.

ಕನ್ಯಾ ರಾಶಿ
ಮಹಾಲಯ ಅಮಾವಾಸ್ಯೆ ಕನ್ಯಾ ರಾಶಿಯವರಿಗೆ ಅದ್ಭುತವಾದ ದಿನವಾಗಿರಲಿದೆ. ಗ್ರಹಗಳ ಸ್ಥಾನ ನಿಮ್ಮ ಪರವಾಗಿರುತ್ತವೆ. ಅಮವಾಸ್ಯೆ ತಿಥಿಯಂದು ಕುಟುಂಬದಲ್ಲಿ ಶ್ರಾದ್ಧ ನಡೆಯಲಿದೆ. ನೀವು ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಇಂದು ಅತ್ಯಂತ ಮಂಗಳಕರ ದಿನವಾಗಿದೆ. ಕನ್ಯಾ ರಾಶಿಯ ಜನರು ತಮ್ಮ ಪೂರ್ವಜರ ಆಶೀರ್ವಾದದಿಂದ ಆರೋಗ್ಯವನ್ನು ಪಡೆಯುತ್ತಾರೆ. ತುಂಬಾ ಶಕ್ತಿಯುತವಾಗಿರುತ್ತೀರಿ. ನಿಮ್ಮ ಪೂರ್ವಜರ ಆಶೀರ್ವಾದದಿಂದ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯಮಿಗಳಿಗೆ ಇಂತಹ ಸುದ್ದಿಗಳು ಬರುವ ಸಾಧ್ಯತೆಯಿದೆ. ಅದು ಭವಿಷ್ಯದಲ್ಲಿ ಉತ್ತಮ ಲಾಭವನ್ನು ನೀಡುತ್ತದೆ.

ವೃಶ್ಚಿಕ ರಾಶಿ
ಮಹಾಲಯ ಅಮಾವಾಸ್ಯೆ ವೃಶ್ಚಿಕ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಇದು ನಿಮ್ಮ ಶ್ರಮಕ್ಕೆ ಸಿಕ್ಕ ಯಶಸ್ಸಾಗಿದೆ. ವೃಶ್ಚಿಕ ರಾಶಿಯ ಜನರು ತಮ್ಮ ಪೂರ್ವಜರ ಆಶೀರ್ವಾದವನ್ನು ಪಡೆಯುತ್ತಾರೆ. ಇದರಿಂದಾಗಿ ಪ್ರಗತಿಯಲ್ಲಿರುವ ಅಡೆತಡೆಗಳು ದೂರವಾಗುತ್ತವೆ. ನೀವು ಯೋಜಿಸಿರುವ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಉದ್ಯೋಗ ಮತ್ತು ವ್ಯಾಪಾರ ಮಾಡುವವರಿಗೆ ಉತ್ತಮ ಲಾಭದ ಕಾರಣ, ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಪ್ರಭಾವ ಎಲ್ಲೆಡೆ ಹೆಚ್ಚಾಗುತ್ತದೆ.

ಕುಂಭ ರಾಶಿ
ಮಹಾಲಯ ಅಮಾವಾಸ್ಯೆಯ ದಿನ ಕುಂಭ ರಾಶಿಯವರಿಗೆ ಹೊಸ ಭರವಸೆಯ ಕಿರಣವನ್ನು ತರಲಿದೆ. ನವರಾತ್ರಿ ಹಾಗು ದೀಪಾವಳಿ ಹಬ್ಬದ ಕಳೆ ಮನೆಯಲ್ಲಿರುತ್ತದೆ. ವ್ಯಾಪಾರಸ್ಥರು ವ್ಯಾಪಾರದಲ್ಲಿ ಕೆಲವು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬಹುದು. ಇದು ಭವಿಷ್ಯದಲ್ಲಿ ಖಂಡಿತವಾಗಿಯೂ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಕುಂಭ ರಾಶಿಯವರಿಗೆ ಮನೆಯಲ್ಲಿ ಧಾರ್ಮಿಕ ವಾತಾವರಣವಿರುತ್ತದೆ. ಅವರು ತಮ್ಮ ಸಂಗಾತಿಯೊಂದಿಗೆ ನವರಾತ್ರಿ ಪೂಜೆಗೆ ಸಂಬಂಧಿಸಿದ ವಸ್ತುಗಳನ್ನು ಸಹ ಖರೀದಿಸಬಹುದು.
(ಗಮನಿಸಿ: ಈ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ನೀಡುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಕಾರ್ಯಗತಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications