ಜ್ಯೋತಿಷ್ಯ: ಜೆಡಿಎಸ್, ಬಿಜೆಪಿಯ ಅಚ್ಚರಿ ಸಿಎಂ ಕ್ಯಾಂಡಿಡೇಟ್
Recommended Video

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಏನಾಗಬಹುದು ಎಂಬ ಕುತೂಹಲ ಸಹಜವಾಗಿ ಎಲ್ಲ ಕಡೆಯೂ ಕಂಡುಬರುತ್ತಿದೆ. ಮೇ ಹನ್ನೆರಡು ಮತದಾನ, ಹದಿನೈದನೇ ತಾರೀಕು ಮತ ಎಣಿಕೆ ಎಂಬುದು ಈಗಾಗಲೇ ಗೊತ್ತಾಗಿದೆ. ಈ ದಿನಾಂಕ ಘೋಷಣೆಯಾದ ನಂತರ ಫಲಿತಾಂಶದ ಬಗ್ಗೆ ಸಂಖ್ಯಾಶಾಸ್ತ್ರಜ್ಞರು, ಜ್ಯೋತಿಷಿಗಳು, ಟಾರೋಟ್ ಕಾರ್ಡ್ ರೀಡರ್ ಗಳು ಭವಿಷ್ಯ ನುಡಿಯುತ್ತಿದ್ದಾರೆ.
ಇದೀಗ ಚುನಾವಣೆ ಫಲಿತಾಂಶದ ಬಗ್ಗೆ ಹೊಸದಾಗಿ ಭವಿಷ್ಯ ನುಡಿದಿದ್ದಾರೆ ಮುಂಬೈ ಮೂಲದ ಟಾರೋಟ್ ಕಾರ್ಡ್ ರೀಡರ್ ಪ್ರಕಾಶ್ ದಳವಿ. ಅವರಿಗೆ ಭಾರತದಾದ್ಯಂತ ಅಭಿಮಾನಿಗಳಿದ್ದು, ಕ್ರಿಕೆಟ್ ಬಗ್ಗೆ ಅವರು ನುಡಿದಿರುವ ಭವಿಷ್ಯಗಳು ಅತಿ ಹೆಚ್ಚು ಪ್ರಚಾರ ಪಡೆದಿವೆ. ಅದೇ ರೀತಿ ರಾಜಕೀಯ ಭವಿಷ್ಯಗಳನ್ನು ಸಹ ಅವರು ನುಡಿಯುತ್ತಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ಜನಿಸಿದ ಅವರು, ಸದ್ಯಕ್ಕೆ ಮುಂಬೈನಲ್ಲಿ ನೆಲೆಸಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೆ ಏರುತ್ತಾರೆ ಎಂದು ಲೋಕಸಭೆ ಚುನಾವಣೆಗೆ ಒಂದು ವರ್ಷದ ಮೊದಲೇ ಭವಿಷ್ಯ ನುಡಿದಿದ್ದರಂತೆ ಪ್ರಕಾಶ್ ದಳವಿ. ಅವರು ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಏನು ಹೇಳಿದ್ದಾರೆ ಎಂದು ತಿಳಿಯಲು ಮುಂದೆ ಓದಿ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಟಾರೋಟ್ ಕಾರ್ಡ್ ಗಳು ಏನನ್ನು ಸೂಚಿಸುತ್ತವೆ
ಟಾರೋಟ್ ಕಾರ್ಡ್ ಪ್ರಕಾರ ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುವುದು ಸ್ಪಷ್ಟವಾಗಿದೆ. ಇನ್ನು ಯಡಿಯೂರಪ್ಪ ಅವರು ಮತ ಎಣಿಕೆ ದಿನದ ಬೆಳಗ್ಗೆ ಏನಾದರೂ ಹೇಳಬಹುದು. ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಸಿಗುತ್ತದೆ. ಸರಕಾರ ರಚಿಸುವಷ್ಟು ಪೂರ್ಣ ಪ್ರಮಾಣದ ಬಹುಮತ ಸಿಗುವುದಿಲ್ಲ. ಆದ್ದರಿಂದ ಮೈತ್ರಿ ಸರಕಾರ ರಚನೆಗೆ ಮುಂದಾಗುತ್ತಾರೆ. ಅದರಲ್ಲೂ ಜೆಡಿಎಸ್ ಜತೆಗೆ ಬಿಜೆಪಿ ಮೈತ್ರಿ ಆಗುವುದು ಗೋಚರಿಸುತ್ತಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಸಾಧ್ಯತೆ
ಇನ್ನು ಜೆಡಿಎಸ್ ನ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಹೆಚ್ಚಿನ ಪಕ್ಷದಲ್ಲಿ ಕಾಣುತ್ತಿದೆ. ಕರ್ನಾಟಕದಲ್ಲಿ ಮುಂದೆ ರಚನೆ ಆಗುವ ಸರಕಾರದಲ್ಲಿ ಒಂದೋ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುತ್ತಾರೆ. ಒಂದು ವೇಳೆ ಆ ಅವಕಾಶ ತಪ್ಪಿದಲ್ಲಿ ಕುಮಾರಸ್ವಾಮಿ ಅವರು ಯಾರನ್ನು ಸೂಚಿಸುತ್ತಾರೋ ಅವರೇ ಮುಖ್ಯಮಂತ್ರಿ ಆಗುತ್ತಾರೆ.

ಎಚ್.ಡಿ.ರೇವಣ್ಣ ಅವರಿಗೆ ಅದೃಷ್ಟವಿದೆ
ವಿಪರೀತವಾದ ರಾಜಕೀಯ ಬೆಳವಣಿಗೆಗಳು ಆಗಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗದ ಪಕ್ಷದಲ್ಲಿ ಜೆಡಿಎಸ್ ನಿಂದ ಮತ್ತೆ ಯಾರಿಗೆ ಗದ್ದುಗೆ ಏರುವ ಅವಕಾಶ ಇದೆ ಎಂದು ನೋಡಿದರೆ ಎಚ್.ಡಿ.ರೇವಣ್ಣ ಅವರಿಗೆ ಮುಖ್ಯಮಂತ್ರಿ ಆಗುವ ಯೋಗಗಳಿವೆ. ಅವರ ಪಾಲಿಗೆ ಅದೃಷ್ಟ ತೆರೆದುಕೊಳ್ಳಬಹುದು.

ಬಿಜೆಪಿಯಿಂದ ಈಶ್ವರಪ್ಪ ಅವರಿಗೆ ಅದೃಷ್ಟದ ಬಾಗಿಲು
ಬಿಜೆಪಿಯು ಯಡಿಯೂರಪ್ಪ ಅವರ ಬಲದಿಂದ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೂ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳು ಕಡಿಮೆ. ಇನ್ನು ಆ ಪಕ್ಷದಿಂದ ಅಶೋಕ್ ಮತ್ತು ಕೆ.ಎಸ್.ಈಶ್ವರಪ್ಪ ಅವರ ಕಾರ್ಡ್ ಗಳನ್ನು ಗಮನಿಸಿದರೆ, ಈಶ್ವರಪ್ಪ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಮಿತ್ರ ಪಕ್ಷವು ಈಶ್ವರಪ್ಪ ಅವರು ಸಿಎಂ ಆಗಲು ಒಪ್ಪಿಗೆ ಸೂಚಿಸುವ ಸಾಧ್ಯತೆಗಳು ಹೆಚ್ಚಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications