ಕುಜ ದೋಷ ಎಂದರೇನು? ಪರಿಹಾರ ಮಾರ್ಗಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
Recommended Video

ಈ ಹಿಂದೆ ನಿಮಗೆ ಗಜಕೇಸರಿ ಯೋಗದ ಬಗ್ಗೆ ತಿಳಿಸಿಕೊಟ್ಟಿದ್ದೆ. ಈ ದಿನ ದೋಷವೊಂದರ ಬಗ್ಗೆ ತಿಳಿದುಕೊಳ್ಳೋಣ. ಪದೇ ಪದೇ ಕೇಳಿರಬಹುದಾದ, ಪರಿಚಿತವಾದ ಪದ ಇದು. ವಿಶೇಷವಾಗಿ ವಿವಾಹ ಸಂದರ್ಭದಲ್ಲಿ ವಧುವಿನ ಕಡೆಯವರು ಚಿಂತೆಗೆ ಈಡಾಗುತ್ತಾರೆ. ಅದಕ್ಕೆ ಕಾರಣ ಜನ್ಮ ಜಾತಕದಲ್ಲಿನ ಕುಜ ದೋಷ. ಹೆಣ್ಣುಮಕ್ಕಳ ಪೋಷಕರನ್ನು ಬಹಳ ಚಿಂತೆಗೆ ಗುರಿ ಮಾಡುವ ಈ 'ಕುಜ ದೋಷ'ದ ಬಗ್ಗೆ ಮಾಹಿತಿ ಇಲ್ಲಿದೆ.
ಕುಜ ಅಂದರೆ ಅಗ್ನಿ ತತ್ವದ ಗ್ರಹ. ಜನ್ಮ ಜಾತಕದಲ್ಲಿ ಯಾವ ಸ್ಥಾನಗಳಲ್ಲಿ ಕುಜ ಗ್ರಹ ಇದ್ದರೆ ದೋಷಪೂರಿತ ಆಗುತ್ತದೆ ಎಂಬುದನ್ನು ಮುಖ್ಯವಾಗಿ ತಿಳಿದುಕೊಳ್ಳಬೇಕು. ಅದಕ್ಕೆ ಮುನ್ನ ಕುಜ ದೋಷ ಇದೆ ಎಂದಾಕ್ಷಣ ಭಯ ಪಡುವ ಅಗತ್ಯ ಇಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ. ಧೈರ್ಯಗೆಡಬೇಡಿ.
ಭಾರತದಲ್ಲಿ ಜನಿಸುವವರ ಪೈಕಿ ಶೇಕಡಾ ಅರವತ್ತರಿಂದ ಎಪ್ಪತ್ತರಷ್ಟು ಮಂದಿಗೆ ಕುಜ ದೋಷಕಾರಿಯಾಗಿ ಇದ್ದೇ ಇರುತ್ತದೆ. ಅದೇ ರೀತಿಯಾಗಿ ದೋಷವು ಪರಿಹಾರ ಕೂಡ ಆಗಿರುತ್ತದೆ. ಆದರೆ ಆ ದೋಷ ಪರಿಹಾರ ಆಗಿದೆಯಾ ಇಲ್ಲವಾ ಎಂಬುದನ್ನು ತಿಳಿದುಕೊಂಡರೆ ಆಯಿತು. ದೋಷಕಾರಿ ಹೌದು ಎಂದಾದರೆ ಅದನ್ನು ಪರಿಹರಿಸಿಕೊಂಡು ಮುಂದುವರಿದರೆ ಜೀವನದಲ್ಲಿ ಯಶಸ್ಸು ಸಿಗುತ್ತದೆ.

ಕುಜ ದೋಷ ಎಂದರೇನು?
ಕುಜ ದೋಷವನ್ನು ಜನ್ಮ ಕುಂಡಲಿಯಲ್ಲಿನ ಲಗ್ನದಿಂದ ನೋಡಬೇಕು. ಲಗ್ನದಿಂದ ಎರಡು, ನಾಲ್ಕು, ಏಳು, ಎಂಟು ಅಥವಾ ಹನ್ನೆರಡನೇ ಸ್ಥಾನಗಳ ಪೈಕಿ ಯಾವುದೇ ಮನೆಯಲ್ಲಿ ಕುಜ ಗ್ರಹ ಇದ್ದರೆ ಅದು ದೋಷವಾಗಿ ಮಾರ್ಪಾಡಾಗುತ್ತದೆ. ಈ ರೀತಿ ದೋಷ ಇರುವವರಿಗೆ ಕುಜ ದೋಷ ಇರುವವರ ಜತೆಗೇ ವಿವಾಹ ಮಾಡಬೇಕು. ಆಗ ಅವರ ಜೀವನ ಚೆನ್ನಾಗಿರುತ್ತದೆ. ಸಂತಾನದಲ್ಲಿ ಸಮಸ್ಯೆಗಳಾಗುವುದಿಲ್ಲ. ಯಾವುದೇ ಸಮಸ್ಯೆಗಳಾಗುವುದಿಲ್ಲ. ಪುರುಷರ ಜಾತಕದಲ್ಲಿ ಲಗ್ನದಿಂದ ಎರಡು, ಏಳು ಅಥವಾ ಎಂಟರಲ್ಲಿ ಇರುವ ಕುಜ ಉಗ್ರ ಸ್ವರೂಪದ ದೋಷವನ್ನು ನೀಡಿದರೆ, ಸ್ತ್ರೀಯರಿಗೆ ಏಳು, ಎಂಟು ಹಾಗೂ ಹನ್ನೆರಡು ಕುಜ ದೋಷ ಉಗ್ರವಾದ ಸ್ಥಾನ. ಆದರೆ ಇದಕ್ಕೆ ಸ್ವಾಭಾವಿಕವಾಗಿಯೇ ಪರಿಹಾರಗಳಿರುತ್ತವೆ.

ಸ್ವಾಭಾವಿಕ ಪರಿಹಾರಗಳೇನು?
ನಿಮ್ಮ ಜನ್ಮ ಜಾತಕದಲ್ಲಿ ಮೇಷ, ಸಿಂಹ, ವೃಶ್ಚಿಕ, ಮಕರ, ಕುಂಭ ರಾಶಿಗಳಲ್ಲಿ ಕುಜ ಗ್ರಹ ಇದ್ದರೆ, ಅದು ಲಗ್ನದಿಂದ 1, 4, 7, 8, 12ನೇ ಸ್ಥಾನಗಳೇ ಆಗಿದ್ದರೂ ದೋಷವು ಸ್ವಾಭಾವಿಕವಾಗಿಯೇ ನಿವಾರಣೆ ಆಗುತ್ತದೆ. ಅಂಥ ಸಂದರ್ಭದಲ್ಲಿ ಪ್ರತ್ಯೇಕವಾಗಿ ದೋಷ ಪರಿಹಾರ ಪೂಜೆಗಳನ್ನೇನೂ ಮಾಡುವ ಅಗತ್ಯವಿಲ್ಲ. ಕರ್ಕಾಟಕ, ಸಿಂಹ ಲಗ್ನದಲ್ಲಿ ಹುಟ್ಟಿದವರಿಗೆ ಕುಜ ದೋಷ ಇಲ್ಲ. ವೃಶ್ಚಿಕ, ಮಿಥುನ ಲಗ್ನದವರಿಗೆ ಹನ್ನೆರಡನೇ ಸ್ಥಾನದಲ್ಲಿ ಕುಜನಿದ್ದರೂ ದೋಷವಿಲ್ಲ.

ಪರಿಹಾರ ಮಾಡಿಕೊಳ್ಳಲಿಲ್ಲ ಅಂದರೆ ಏನಾಗುತ್ತದೆ?
ವಿವಾಹದಲ್ಲಿ ಸಮಸ್ಯೆಗಳಾಗುತ್ತವೆ. ವಿವಾಹ ವಿಚ್ಛೇದನ ಆಗಬಹುದು. ದಂಪತಿ ಮಧ್ಯೆ ಮನಸ್ತಾಪ ಆಗುತ್ತದೆ. ಒಂದೇ ಮನೆಯಲ್ಲಿದ್ದರೂ ವೈವಾಹಿಕ ಸುಖ ಅನುಭವಿಸಲು ಆಗುವುದಿಲ್ಲ. ಸಂತಾನ ಸಮಸ್ಯೆಗಳಾಗುತ್ತವೆ. ಇನ್ನು ಕುಜನನ್ನು ಭೂಮಿ ಪುತ್ರ ಎನ್ನುತ್ತಾರೆ. ಭೂಮಿಗೆ ಸಂಬಂಧಿಸಿದ ಯಾವುದೇ ಕೆಲಸ ಕೈ ಹಿಡಿಯುವುದಿಲ್ಲ. ರಿಯಲ್ ಎಸ್ಟೇಟ್, ಕೃಷಿ ಪ್ರಗತಿ ಆಗುವುದಿಲ್ಲ. ಆದ್ದರಿಂದ ಕುಜ ದೋಷವುಳ್ಳವರ ಹೆಸರಲ್ಲಿ ಭೂಮಿ ನೋಂದಣಿ ಮಾಡಿಕೊಂಡರೆ ಅದು ಉಳಿಯದೆ, ಮಾರಾಟ ಆಗಿಬಿಡುತ್ತದೆ. ಕಾಯಿಲೆ ಕಾಣಿಸಿಕೊಂಡು, ಅದರ ನಿವಾರಣೆಗಾಗಿ ಹಣಕಾಸಿನ ಅಗತ್ಯ ಕಂಡುಬಂದು, ಆ ಭೂಮಿ ಮಾರಾಟ ಮಾಡಬೇಕಾದ ಸಂದರ್ಭ ಬರುತ್ತದೆ.

ಯಾವ ನಕ್ಷತ್ರಗಳಿಗೆ ಕುಜ ದೋಷ ಇರುವುದಿಲ್ಲ?
ಅಶ್ವಿನಿ, ಮೃಗಶಿರಾ, ಪುನರ್ವಸು, ಪುಷ್ಯ, ಆಶ್ಲೇಷಾ, ಉತ್ತರಾ, ಸ್ವಾತಿ, ಅನೂರಾಧ, ಪೂರ್ವಾಷಾಢ, ಉತ್ತರಾಷಾಢ, ಶ್ರವಣ, ಉತ್ತರಾಭಾದ್ರಾ ನಕ್ಷತ್ರದವರಿಗೆ ಕುಜ ದೋಷವಿದ್ದರೂ ಶಾಂತಿ ಮಾಡಿಕೊಳ್ಳುವ ಅಗತ್ಯವಿಲ್ಲ. ಕೆಲವರು ವಿವಾಹ ಜೀವನದಲ್ಲಿ ತೊಂದರೆ ಅನುಭವಿಸುತ್ತಲೇ ಇರುತ್ತಾರೆ. ಕೆಲವರು ನಲವತ್ತು-ಐವತ್ತನೇ ವರ್ಷದಲ್ಲಿ ವಿವಾಹ ವಿಚ್ಛೇದನ ತೆಗೆದುಕೊಳ್ಳುವ ನಿರ್ಧಾರ ಮಾಡುತ್ತಾರೆ. ಹಾಗಂತ ಕುಜ ದೋಷದ ಪರಿಣಾಮ ಕುಜ ದಶೆ, ಕುಜ ಭುಕ್ತಿ, ಗೋಚಾರದಲ್ಲಿ ನಿಮ್ಮ ನಕ್ಷತ್ರಕ್ಕೆ ಕುಜ ಪರಿಣಾಮ ಬೀರುವ ಸ್ಥಿತಿಯಲ್ಲಿ ಬಂದಾಗ ತೊಂದರೆ ಆಗುತ್ತದೆ.

ಕುಜ ದೋಷದ ಪರಿಹಾರ ಮಾರ್ಗಗಳೇನು?
ಕುಜನ ಗಾಯತ್ರಿ ಮಂತ್ರವಾದ ಧರುಸುತಾಯ ವಿದ್ಮಹೇ ಋಣಹರಾಯ ಧೀಮಹಿ ತನ್ನಃ ಕುಜಃ ಪ್ರಚೋದಯಾತ್ ಅನ್ನು ನಿತ್ಯವೂ ಹೇಳಿಕೊಂಡರೆ ಕುಜ ದೋಷದ ಪ್ರಭಾವ ಕಡಿಮೆ ಆಗುತ್ತದೆ. ಕೆಂಪು ವಸ್ತ್ರ ದಾನ ಮಾಡುವುದರಿಂದ, ಯಥಾ ಶಕ್ತಿ ತೊಗರಿಬೇಳೆ ಧಾನ್ಯ ಮಾಡುವುದರಿಂದ, ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ದರ್ಶನ ಹಾಗೂ ಅಲ್ಲಿ ಸೇವೆ ಮಾಡುವುದರಿಂದ, ಲಕ್ಷ್ಮಿ ನರಸಿಂಹ ಸ್ವಾಮಿ ಆರಾಧನೆ ಮಾಡುವುದರಿಂದ ಹಾಗೂ ಮಹಾವಿಷ್ಣುವಿನ ಕಲ್ಯಾಣೋತ್ಸವ ಮಾಡಿಸುವುದರಿಂದ ಕೂಡ ಕುಜ ದೋಷ ಪ್ರಭಾವ ಕಡಿಮೆ ಆಗುತ್ತದೆ. ಆದರೆ ಸ್ವಯಂ ವೈದ್ಯ ಹೇಗೆ ಅಪಾಯಕಾರಿ ಹಾಗೂ ನಿರುಪಯೋಗಿಯೋ ಸ್ವಯಂ ಜ್ಯೋತಿಷ್ಯವೂ ಹಾಗೆಯೇ. ಆದ್ದರಿಂದ ನಿಮ್ಮ ಜಾತಕವನ್ನು ಒಮ್ಮೆ ತಜ್ಞ ಜ್ಯೋತಿಷಿಗಳಲ್ಲಿ ತೋರಿಸಿ. ಯೋಗ-ದೋಷಗಳ ಬಗ್ಗೆ ತಿಳಿದುಕೊಳ್ಳಿ. ಯೋಗವನ್ನು ಸರಿಯಾದ ಸಮಯಕ್ಕೆ ಬಳಸಿಕೊಳ್ಳಿ. ದೋಷ ಪರಿಹಾರ ಮಾಡಿಸಿಕೊಳ್ಳಿ.
ಗುರೂಜಿ ಹರಿ ಶಾಸ್ತ್ರಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಂಪರ್ಕ ಸಂಖ್ಯೆ 7996729783.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications