ಜ್ಯೋತಿಷ್ಯ ಟಿಪ್ಸ್: ಯಾವ ವಾರ ಏನು ಮಾಡಿದರೆ ಕೈಗೊಳ್ಳುವ ಕಾರ್ಯ ಯಶಸ್ಸು?
ಮನೆಯಿಂದ ಆಚೆ ತೆರಳುವ ವೇಳೆ ಶುಭ ಶಕುನವನ್ನು ನಂಬುವವರು ಇರುವಂತೆಯೇ ಒಳ್ಳೆ ಕೆಲಸಕ್ಕೆ ತೆರಳುವ ಮುನ್ನ ಕೆಲ ಪದಾರ್ಥವನ್ನು ಸೇವಿಸಿದರೆ ಒಳಿತು ಸಂಭವಿಸುತ್ತದೆ ಎಂಬುದು ನಂಬಿಕೆ. ಈ ವಿಚಾರದಲ್ಲಿ ಜನ್ಮ ರಾಶಿಯ ಪಾತ್ರ ಏನೂ ಇರುವುದಿಲ್ಲ. ಒಟ್ಟಿನಲ್ಲಿ ಒಳ್ಳೆ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಇಲ್ಲಿ ತಿಳಿಸುವ ಕೆಲ ಸಲಹೆಗಳನ್ನು ಅನುಸರಿಸಿದರೆ ಅನುಕೂಲಕರವಾದ ಸನ್ನಿವೇಶ ಸೃಷ್ಟಿಯಾಗಿ, ಕೈಗೊಂಡ ಕೆಲಸ ಸಿದ್ಧಿ ಆಗುತ್ತದೆ.
ಇಲ್ಲಿ ತಿಳಿಸುತ್ತಿರುವ ಅಂಶ ಸಾಮಾನ್ಯವಾಗಿ ಅನ್ವಯಿಸುವಂಥದ್ದು. ಆದ್ದರಿಂದ ಯಾರಾದರೂ ಇದನ್ನು ಪ್ರಯತ್ನಿಸಬಹುದು. ಆದರೆ ನಂಬಿಕೆ ಬಹಳ ಮುಖ್ಯ. ಮಾಡುವ ಕೆಲಸದಲ್ಲಿನ ಉದ್ದೇಶ ಶುದ್ಧಿ ಮತ್ತು ಪ್ರಯತ್ಮ ಸಹ ಅಷ್ಟೇ ಮುಖ್ಯ. ಇಲ್ಲಿ ತಿಳಿಸುತ್ತಿರುವ ಸಲಹೆ ಆಯಾ ವಾರಕ್ಕೆ ಅನ್ವಯಿಸುವಂತೆ ಇದೆ.
ಇದರ ಹೊರತಾಗಿ ತಾರಾನುಕೂಲ ನೋಡಿದರೆ ಒಳ್ಳೆಯದು. ಆದರೆ ಹಲವು ಕೆಲಸಗಳನ್ನು ಆಯಾ ದಿನದಂದೇ ಮಾಡಬೇಕು. ಆದ್ದರಿಂದ ಹಾಗೆ ತಾರಾನುಕೂಲವನ್ನೇ ನೋಡಿ ಕೆಲಸ ಮಾಡುವುದು ಕಷ್ಟಸಾಧ್ಯ. ಆ ಕಾರಣಕ್ಕೆ ಈ ಸರಳ ಸಲಹೆಗಳು. ಯತ್ನ ಕಾರ್ಯದಲ್ಲಿ ಅನುಕೂಲ ಆಗಲಿ ಎಂದು ಶುಭ ಹಾರೈಸುತ್ತಾ ನಿಮಗಾಗಿ ಈ ಲೇಖನ.

ಸೂರ್ಯದೇವನಿಗೆ ನೀರನ್ನು ಇಡಿ
ಭಾನುವಾರದಂದು ಯಾವುದೇ ಶುಭ ಕಾರ್ಯಗಳಿಗೆ ತೆರಳುವ ಮುನ್ನ ಮನೆಯಲ್ಲಿ ವೀಳ್ಯದೆಲೆ- ಅಡಿಕೆ ಹಾಕಿಕೊಳ್ಳಿ. ಜತೆಗೆ ಬೆಳಗ್ಗೆ ಸೂರ್ಯದೇವನಿಗೆ ನೀರನ್ನು ಇಡಿ. ವೀಳ್ಯದೆಲೆ- ಅಡಿಕೆ ಎಲ್ಲ ಸೇರಿ ಮಾಡುವ ಬೀಡಾ ಸೇವಿಸಿದರೂ ಅಡ್ಡಿ ಇಲ್ಲ. ಅಭ್ಯಾಸ ಇಲ್ಲದವರು ದಯವಿಟ್ಟು ಮಾಡಬೇಡಿ. ಒಂದು ವೇಳೆ ವೀಳ್ಯದೆಲೆ- ಅಡಿಕೆ ಹಾಕುವಂತಿದ್ದರೆ ಅಡ್ಡಿ ಇಲ್ಲ.

ಕನ್ನಡಿಯಲ್ಲಿ ಪ್ರತಿಬಿಂಬ ನೋಡಿಕೊಳ್ಳಿ
ಇನ್ನು ಸೋಮವಾರದಂದು ಮುಖ್ಯ ಕೆಲಸವಿದ್ದು, ಮನೆಯಿಂದ ಆಚೆ ತೆರಳುವ ಮುನ್ನ ಕನ್ನಡಿಯಲ್ಲಿ ನಿಮ್ಮ ಪ್ರತಿಬಿಂಬವನ್ನು ಒಮ್ಮೆ ನೋಡಿಕೊಂಡು, ಆ ನಂತರ ಹೊರಡಿ. ಹೀಗೆ ಮಾಡುವುದರಿಂದ ನೀವು ಪ್ರಯತ್ನಿಸುವ ಕೆಲಸದಲ್ಲಿ ಯಶಸ್ಸು ದೊರೆಯುವ ಸಾಧ್ಯತೆಯು ಹೆಚ್ಚಿರುತ್ತದೆ.

ನಿಂಬೆಹಣ್ಣು ಸ್ವಲ್ಪ ಭಾಗ ತಿನ್ನಿ
ಕುಜ ಅಥವಾ ಅಂಗಾರಕನ ವಾರವಾದ ಮಂಗಳವಾರದಂದು ಬಹು ಮುಖ್ಯ ಕಾರ್ಯದ ಸಲುವಾಗಿ ಪ್ರಯತ್ನಿಸುತ್ತಿದ್ದರೆ, ಅಂದು ನಿಂಬೆಹಣ್ಣನ್ನು ಒಳಗೊಂಡಂಥ ಯಾವುದಾದರೂ ಖಾದ್ಯ ಅಥವಾ ಸ್ವಲ್ಪ ನಿಂಬೆಹಣ್ಣಿನ ಭಾಗ ತಿಂದು, ಆ ನಂತರ ತೆರಳಿದರೆ ಕಾರ್ಯ ಸಿದ್ಧಿಗೆ ಅನುಕೂಲ ಆಗುತ್ತದೆ.

ಸಿಹಿ ತಿಂದು ಮನೆಯಿಂದ ಹೊರಡಿ
ಕೆಲವರು ಸಾಧಾರಣವಾಗಿ ಈ ಸಲಹೆ ನೀಡುತ್ತಾರೆ. ಆದರೆ ಪರಿಣಾಮಕಾರಿ ಆಗುವುದು ಬುಧವಾರದಂದು. ತುಂಬ ಮುಖ್ಯವಾದ ಕೆಲಸದ ಮೇಲೆ ಬುಧವಾರದಂದು ಮನೆಯಿಂದ ಹೊರಡುವ ಮೊದಲು ಸ್ವಲ್ಪ ಸಿಹಿ ತಿಂದು ಹೊರಡಿ. ಆಗ ಯತ್ನ ಕಾರ್ಯದಲ್ಲಿ ಸಫಲತೆಗೆ ಸಹಕಾರವಾಗುತ್ತದೆ.

ಹಳದಿ ಸಾಸಿವೆ ಸ್ವಲ್ಪ ಪ್ರಮಾಣದಲ್ಲಿ ಸೇವಿಸಿ
ಯಾರಿಗೇ ಆಗಲಿ ತಾವು ಅನುಸರಿಸುವ ಗುರುಗಳ ಆರಾಧನೆಗೆ ಮುಖ್ಯವಾದ ವಾರವಾದ ಗುರುವಾರದಂದು ಯಾವುದಾದರೂ ಬಗೆಯಲ್ಲಿ ಹಳದಿ ಸಾಸಿವೆ ತಿಂದು ಮನೆಯಿಂದ ಹೊರಟರೆ ಮಾಡುವ ಕೆಲಸದಲ್ಲಿ ಅನುಕೂಲ ದೊರೆಯುತ್ತದೆ. ಹಳದಿ ಸಾಸಿವೆ ಸ್ವಲ್ಪ ಪ್ರಮಾಣದಲ್ಲಿ ಬಾಯಿಗೆ ಹಾಕಿಕೊಂಡು ಹೊರಡಿ, ಆ ನಂತರ ಬದಲಾವಣೆ ನೀವು ಗಮನಿಸಿ.

ಮೊಸರು ತಿಂದು ಮನೆಯಿಂದ ಹೊರಡಿ
ಇನ್ನು ಲಕ್ಷ್ಮಿ ಅಥವಾ ದೇವಿ ಆರಾಧನೆಗೆ ಬಹಳ ಅನುಕೂಲಕರ ಎಂದೇ ಪರಿಗಣಿಸುವ ಶುಕ್ರವಾರದಂದು ಮನೆಯಿಂದ ತೆರಳುವ ಮೊದಲು ಮೊಸರನ್ನು ತಿಂದು ಹೊರಟರೆ ನೀವು ಪ್ರಯತ್ನಿಸಿದ ಕಾರ್ಯದಲ್ಲಿ ಸಫಲತೆ ಸಿಗುವ ಸಾಧ್ಯತೆ ಹೆಚ್ಚು. ವಿದ್ಯಾರ್ಥಿಗಳು ಮೊಸರು ಹಾಗೂ ಸಕ್ಕರೆ ತಿಂದು ಮನೆಯಿಂದ ಹೊರಟರೆ ಪರೀಕ್ಷೆಯಂಥ ಸಂದರ್ಭದಲ್ಲಿ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ.

ತುಪ್ಪ ಸೇವಿಸಿ ನೋಡಿ
ಲೇಖನದ ಕೊನೆ ಘಟ್ಟಕ್ಕೆ ಬಂದಿದ್ದೇವೆ. ಯಾವುದಾದರೂ ಕಾರ್ಯಕ್ಕೆ ಶನಿವಾರದಂದು ಪ್ರಯತ್ನಿಸುತ್ತಿದ್ದಲ್ಲಿ ಮನೆಯಿಂದ ತೆರಳುವ ಮೊದಲು ಸ್ವಲ್ಪ ಪ್ರಮಾಣದಲ್ಲಿ ತುಪ್ಪವನ್ನು ಸೇವಿಸಿ, ಆ ನಂತರ ನೀವು ಅಂದುಕೊಂಡ ಕೆಲಸ ಕೈಗೊಂಡರೆ ಯಶಸ್ಸು ಪಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಈ ಸಲಹೆಗಳನ್ನು ಒಮ್ಮೆ ಪ್ರಯತ್ನಿಸಿ ನೋಡಿ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications