Get Updates
Get notified of breaking news, exclusive insights, and must-see stories!

Darshan Thoogudeepa: ದರ್ಶನ್ ವಿಚಾರದಲ್ಲಿ ನಿಜವಾಯ್ತು ಬೀರಲಿಂಗೇಶ್ವರ ದೈವ ನುಡಿದ ಭವಿಷ್ಯ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಆರೋಗ್ಯ ಸರಿಯಾಗಿಲ್ಲ. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಸರ್ಜರಿ ಮಾಡಬೇಕು ಎನ್ನುವ ಕಾರಣಕ್ಕೆ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಈ ಹಿಂದೆ ದರ್ಶನ್ ಅದೆಷ್ಟೇ ಪ್ರಯತ್ನ ಪಟ್ಟರೂ ಜೈಲಿನಿಂದ ಹೊರಬರುವುದು ಸುಲಭವಾಗಿರಲಿಲ್ಲ. ಇದರಿಂದಾಗಿ ದರ್ಶನ್ ಯಾವಾಗ ಜೈಲಿನಿಂದ ಹೊರಬರುತ್ತಾರೆ ಎನ್ನುವ ಬಗ್ಗೆ ಬಳ್ಳಾರಿಯ ಬೀರಲಿಂಗೇಶ್ವರ ದೈವ ಭವಿಷ್ಯ ನುಡಿದಿತ್ತು. ಈ ಭವಿಷ್ಯ ಸದ್ಯ ನಿಜವಾಗಿದೆ.

ಹೌದು... ದರ್ಶನ್ ಆರೋಗ್ಯ ಕಾರಣಕ್ಕೆ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ. ಆದರೆ ಕೋರ್ಟ್‌ ನೀಡಿದ ಆರು ವಾರಗಳ ಒಳಗೆ ದರ್ಶನ್ ಸರ್ಜರಿ ಮಾಡಿಸಿಕೊಂಡು ಜೈಲಿಗೆ ವಾಪಸ್‌ ಹೋಗಬೇಕಿದೆ. ಆದರೆ ಕೋರ್ಟ್‌ ನೀಡಿದ ಆರು ವಾರಗಳಲ್ಲಿ 12 ದಿನಗಳು ಕಳೆದು ಹೋಗಿವೆ. ಆದರೀನ್ನೂ ಕೂಡ ದರ್ಶನ್ ಸರ್ಜರಿ ಮಾಡಿಸಿಕೊಂಡಿಲ್ಲ. ಸರ್ಜರಿ ಮಾಡಿದರೆ ವಾಸಿಯಾಗಲು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ದರ್ಶನ್ ಜಾಮೀನು ಅವಧಿ ಪೂರ್ಣಗೊಳ್ಳುವುದರ ಒಳಗಾಗಿ ಅವರಿಗೆ ಸರ್ಜರಿ ಆಗಬೇಕಿದೆ. ಇಲ್ಲವಾದಲ್ಲಿ ದರ್ಶನ್ ಆರು ವಾರಗಳ ಅವಧಿಗೂ ಮುನ್ನ ಜೈಲಿಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಬಹುದು.

beeralingeshwar god s prediction about the release of Darshan has come true

ಇದರಿಂದಾಗಿ ದರ್ಶನ್ ಜೈಲಿನಿಂದ ಹೊರಬಂದ ಮೇಲೋ ನೆಮ್ಮದಿ ಇಲ್ಲದಂತಾಗಿದೆ. ದರ್ಶನ್ ಅವರಿಗೆ ತಮ್ಮ ಆರೋಗ್ಯದ ಚಿಂತೆ ಒಂದೆಡೆಯಾದರೆ, ಜೈಲಿಗೆ ಹೋಗುವ ಚಿಂತೆ ಮತ್ತೊಂದೆಡೆ ಕಾಡ ತೊಡಗಿದೆ. ಜೈಲಿನಲ್ಲಿ ಇರುವಾಗ ನಿದ್ದೆ ಮಾಡದ ದಾಸ ಜೈಲಿನಿಂದ ಹೊರ ಬಂದ ಬಳಿಕವೂ ನಿದ್ದೆಗೆ ಜಾರದಂತಾಗಿದೆ.

ದರ್ಶನ್‌ ಹೊರಬರಲೆಂದು ದರ್ಶನ್‌ ಪತ್ನಿ ಭೇಟಿ ನೀಡದ ದೇವರಿಲ್ಲ. ಪ್ರಮುಖ ಶಕ್ತಿದೇವರಿಗೆ ಹರಕೆ ಹೊತ್ತು, ನವಗ್ರಹಗಳ ಶಾಂತಿ ಹೋಮ ಮಾಡಿಸಿ ಗಂಡನ ದರ್ಶನಕ್ಕಾಗಿ ಬೇಡಿಕೊಂಡಿದ್ದರು. ಅಭಿಮಾನಿಗಳು ಕೂಡ ದೇವರ ಮೊರೆ ಹೋಗಿ ದರ್ಶನ್‌ಗಾಗಿ ಸಾಕಷ್ಟು ಪೂಜೆಗಳನ್ನು ಮಾಡಿಸಿದ್ದರು. ದರ್ಶನ್ ಪತ್ನಿ ಹಾಗೂ ಅಭಿಮಾನಿಗಳ ಪೂಜಾ ಫಲ ಈಗ ಸಿಕ್ಕಿದೆ. ದರ್ಶನ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ. ಈ ವಿಚಾರದಲ್ಲಿ ಅನೇಕ ಜ್ಯೋತಿಷಿಗಳು ನುಡಿದ ಭವಿಷ್ಯದಲ್ಲಿ ಬಳ್ಳಾರಿಯ ಬೀರಲಿಂಗೇಶ್ವರ ದೈವ ನುಡಿದ ಭವಿಷ್ಯ ಕೂಡ ನಿಜವಾಗಿದೆ.

ದರ್ಶನ್ ವಿಚಾರದಲ್ಲಿ ನಿಜವಾಯ್ತು ಬೀರಲಿಂಗೇಶ್ವರ ದೈವ ನುಡಿದ ಭವಿಷ್ಯ

ಕೊಲೆ ಆರೋಪಿ ದರ್ಶನ್‌ ಬಿಡುಗಡೆ ಬಗ್ಗೆ ಅವರ ಅಭಿಮಾನಿಗಳು ಫೋಟೋ ಹಿಡಿದು ದೈವದ ಮೊರೆ ಹೋಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗೆ ಬಳ್ಳಾರಿಯ ಬಲಕಲ್ ಅನ್ನೋ ಗ್ರಾಮದ ಬೀರಲಿಂಗೇಶ್ವರ ದೈವದ ಬಳಿ ದರ್ಶನ್ ಬಿಡುಗಡೆ ಬಗ್ಗೆ ಅಭಿಮಾನಿಗಳು ದಿನಾಂಕ ಕೇಳಿದ್ದರು. ಈ ವೇಳೆ ಮೂರು ತಿಂಗಳ ಬಳಿಕ ದರ್ಶನ್ ಜೈಲಿನಿಂದ ಹೊರಬರುತ್ತಾರೆ ಅಂತಾ ಬೀರಲಿಂಗೇಶ್ವರ ದೈವ ಭವಿಷ್ಯ ನುಡಿದಿತ್ತು.

ದರ್ಶನ್ ಭಾವಚಿತ್ರದ ಮೇಲೆ ತಲೆಯಿಟ್ಟು ದೈವ ನುಡಿದ ಮಾತಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ದರ್ಶನ್‌ ಬಿಡುಗಡೆ ಬಗ್ಗೆ ದೈವ ಹೇಳಿದ ಮಾತಿನ ವಿಡಿಯೋವನ್ನು ಮಾಡಿ ಅಭಿಮಾನಿಗಳು ತಮ್ಮ ಇನ್‌ಸ್ಟಾ ಖಾತೆಯಲ್ಲೂ ಹಂಚಿಕೊಂಡಿದ್ದರು. ಸದ್ಯ ಈ ದೈವ ನುಡಿದ ಭವಿಷ್ಯ ನಿಜವಾಗಿದೆ.

ದರ್ಶನ್ ಮೂರು ತಿಂಗಳಲ್ಲಿ ಜೈಲಿನಿಂದ ಹೊರಬರುತ್ತಾರೆ. ಆದರೆ ಅವರು ಜೈಲಿನಿಂದ ಹೊರಬಂದ ಬಳಿಕವೂ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ ಎಂದು ಬೀರಲಿಂಗೇಶ್ವರ ದೈವ ಭವಿಷ್ಯ ನುಡಿದಿತ್ತು. ಇದು ದರ್ಶನ್ ವಿಚಾರದಲ್ಲಿ ಅಕ್ಷರಶ: ನಿಜವಾಗಿದೆ. ಹೀಗಾಗಿ ಬೀರಲಿಂಗೇಶ್ವರ ದೈವದ ಮೇಲೆ ಜನರಿಗೆ ನಂಬಿಕೆ ಹೆಚ್ಚಾಗಿದೆ.

ಒಟ್ಟಿನಲ್ಲಿ ಜೈಲಿನಿಂದ ಹೊರಬಂದಿರುವ ದರ್ಶನ್ ಸರ್ಜರಿ ಮಾಡಿಸಿಕೊಳ್ತಾರಾ? ಇಲ್ವಾ? ಜೈಲಿಗೆ ವಾಪಾಸ್ ಹೋಗ್ತಾರಾ? ಸರ್ಜರಿ ಮಾಡಿಸಿಕೊಂಡು ಇನ್ನಷ್ಟು ದಿನ ಜೈಲಿನಿಂದ ಹೊರಗಡೆ ಇರಲು ಸಮಯ ತೆಗೆದುಕೊಂಡು ಆಸ್ಪತ್ರೆಯಲ್ಲಿ ಉಳಿಯುತ್ತಾರಾ ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+