ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ...; ಬೀರೂರು ಮೈಲಾರಲಿಂಗಸ್ವಾಮಿ ನುಡಿದ ಕಾರ್ಣಿಕ!
ಚಿಕ್ಕಮಗಳೂರು, ಅಕ್ಟೋಬರ್ 16: ನಾಡಿನ ಸುಪ್ರಸಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಮೈಲಾರಲಿಂಗಸ್ವಾಮಿ ಕಾರ್ಣಿಕ ಭವಿಷ್ಯವನ್ನು ಗೊರವಯ್ಯ ದಶರಥ ಪೂಜಾರ್ ನುಡಿದಿದ್ದಾರೆ.
ಕಡೂರು ತಾಲೂಕಿನ ಬೀರೂರಿನ ಮೈಲಾರಲಿಂಗ ಸ್ವಾಮಿ ನುಡಿಯುವ ಕಾರ್ಣಿಕ ಭವಿಷ್ಯವು ರಾಜ್ಯ ರಾಜಕೀಯ, ಮಳೆ, ಆರೋಗ್ಯದ ಕುರಿತಾಗಿದೆ. ಈ ಬಾರಿಯ ಮೈಲಾರಲಿಂಗೇಶ್ವರಸ್ವಾಮಿಯ ಭವಿಷ್ಯವಾಣಿ ಹೀಗಿದೆ.
"ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಸಿಂಹಾಸನಕ್ಕೆ ಗಿಳಿಗಳು ಕುಟುಕಿವು, ದಾನವರು ಮಾನವರಿಗೆ ಕಂಟಕವಾದರು, ರಾಮರಾಜ್ಯಕ್ಕೆ ಸರ್ವರು ಹೊಡೆ ಹೊಡೆದರು, ಸರ್ವರು ಎಚ್ಚರದಿಂದರಬೇಕು.''

ಬೀರೂರು ಮೈಲಾರಲಿಂಗೇಶ್ವಸ್ವಾಮಿಯ ಭವಿಷ್ಯವಾಣಿಯ ಮೇಲೆ ನಾಡಿನ ಜನರಿಗೆ ಅಪಾರವಾದ ನಂಬಿಕೆಯಾಗಿದೆ. ಶುಕ್ರವಾರ ರಾತ್ರಿ ಮೈಲಾರಲಿಂಗ ಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಿತು. ನಂತರ ಗೊರವಯ್ಯ ದಶರಥ ಪೂಜಾರ್ ಎಂಬುವವರು ಮೈಲಾರಲಿಂಗ ಸ್ವಾಮಿಯ ಕಾರ್ಣಿಕವನ್ನು ನುಡಿದರು.
ಇನ್ನು ವಿಜಯದಶಮಿಯ ಮುನ್ನಾ ದಿನ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ (2021) ದಸರಾ ಕಾರ್ಣಿಕ ನುಡಿದಿರುವ ಗೊರವಯ್ಯ, 'ಎರಿ ದೊರೆ ಆಕತಲೆ ದೈವ ದರ್ಬಾರ್ ಆಕತಲೆ ಪರಾಕ್' ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಇದು ನಾಡು ಸುಭಿಕ್ಷವಾಗುವ, ರೈತರ ಬಾಳು ಹಸನಾಗುವ ಕಾರ್ಣಿಕ ಎಂದು ಅರ್ಥೈಸಲಾಗುತ್ತಿದೆ. ಕಾರ್ಣಿಕದ ಬಗ್ಗೆ ದೇವಾಲಯದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಗುರೂಜಿಯವರು ವಿಶ್ಲೇಷಣೆಯನ್ನು ಮಾಡಿ, ಮಾಧ್ಯಮದವರಿಗೆ ವಿವರಿಸಿದ್ದಾರೆ.
"ಮುಂದಿನ ಆರು ತಿಂಗಳಲ್ಲಿ ಈ ಸರ್ಕಾರ ಬೀಳಲಿದೆ, ಗಡ್ಡಧಾರಿಯೊಬ್ಬರು ಮುಂದೆ ಸಿಎಂ ಆಗಲಿದ್ದಾರೆ,'' ಎಂದು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಸನ್ನಿಧಾನದ ಧರ್ಮದರ್ಶಿ ವೆಂಕಟಪ್ಪ ಒಡೆಯರ್ ಹೇಳಿದ್ದರು. ಇದೆಲ್ಲಾ, ಸುಳ್ಳು ಕಾರ್ಣಿಕವನ್ನು ವರ್ಷಕ್ಕೊಮ್ಮೆ ಮಾತ್ರ ನುಡಿಯುವುದು ಎಂದು ಕಾರ್ಣಿಕ ನುಡಿಯುವ ಗೊರವಯ್ಯ ಅಕ್ರೋಶ ವ್ಯಕ್ತಪಡಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications