ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ...; ಬೀರೂರು ಮೈಲಾರಲಿಂಗಸ್ವಾಮಿ ನುಡಿದ ಕಾರ್ಣಿಕ!
ಚಿಕ್ಕಮಗಳೂರು, ಅಕ್ಟೋಬರ್ 16: ನಾಡಿನ ಸುಪ್ರಸಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಮೈಲಾರಲಿಂಗಸ್ವಾಮಿ ಕಾರ್ಣಿಕ ಭವಿಷ್ಯವನ್ನು ಗೊರವಯ್ಯ ದಶರಥ ಪೂಜಾರ್ ನುಡಿದಿದ್ದಾರೆ.
ಕಡೂರು ತಾಲೂಕಿನ ಬೀರೂರಿನ ಮೈಲಾರಲಿಂಗ ಸ್ವಾಮಿ ನುಡಿಯುವ ಕಾರ್ಣಿಕ ಭವಿಷ್ಯವು ರಾಜ್ಯ ರಾಜಕೀಯ, ಮಳೆ, ಆರೋಗ್ಯದ ಕುರಿತಾಗಿದೆ. ಈ ಬಾರಿಯ ಮೈಲಾರಲಿಂಗೇಶ್ವರಸ್ವಾಮಿಯ ಭವಿಷ್ಯವಾಣಿ ಹೀಗಿದೆ.
"ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಸಿಂಹಾಸನಕ್ಕೆ ಗಿಳಿಗಳು ಕುಟುಕಿವು, ದಾನವರು ಮಾನವರಿಗೆ ಕಂಟಕವಾದರು, ರಾಮರಾಜ್ಯಕ್ಕೆ ಸರ್ವರು ಹೊಡೆ ಹೊಡೆದರು, ಸರ್ವರು ಎಚ್ಚರದಿಂದರಬೇಕು.''

ಬೀರೂರು ಮೈಲಾರಲಿಂಗೇಶ್ವಸ್ವಾಮಿಯ ಭವಿಷ್ಯವಾಣಿಯ ಮೇಲೆ ನಾಡಿನ ಜನರಿಗೆ ಅಪಾರವಾದ ನಂಬಿಕೆಯಾಗಿದೆ. ಶುಕ್ರವಾರ ರಾತ್ರಿ ಮೈಲಾರಲಿಂಗ ಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಿತು. ನಂತರ ಗೊರವಯ್ಯ ದಶರಥ ಪೂಜಾರ್ ಎಂಬುವವರು ಮೈಲಾರಲಿಂಗ ಸ್ವಾಮಿಯ ಕಾರ್ಣಿಕವನ್ನು ನುಡಿದರು.
ಇನ್ನು ವಿಜಯದಶಮಿಯ ಮುನ್ನಾ ದಿನ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ (2021) ದಸರಾ ಕಾರ್ಣಿಕ ನುಡಿದಿರುವ ಗೊರವಯ್ಯ, 'ಎರಿ ದೊರೆ ಆಕತಲೆ ದೈವ ದರ್ಬಾರ್ ಆಕತಲೆ ಪರಾಕ್' ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಇದು ನಾಡು ಸುಭಿಕ್ಷವಾಗುವ, ರೈತರ ಬಾಳು ಹಸನಾಗುವ ಕಾರ್ಣಿಕ ಎಂದು ಅರ್ಥೈಸಲಾಗುತ್ತಿದೆ. ಕಾರ್ಣಿಕದ ಬಗ್ಗೆ ದೇವಾಲಯದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಗುರೂಜಿಯವರು ವಿಶ್ಲೇಷಣೆಯನ್ನು ಮಾಡಿ, ಮಾಧ್ಯಮದವರಿಗೆ ವಿವರಿಸಿದ್ದಾರೆ.
"ಮುಂದಿನ ಆರು ತಿಂಗಳಲ್ಲಿ ಈ ಸರ್ಕಾರ ಬೀಳಲಿದೆ, ಗಡ್ಡಧಾರಿಯೊಬ್ಬರು ಮುಂದೆ ಸಿಎಂ ಆಗಲಿದ್ದಾರೆ,'' ಎಂದು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಸನ್ನಿಧಾನದ ಧರ್ಮದರ್ಶಿ ವೆಂಕಟಪ್ಪ ಒಡೆಯರ್ ಹೇಳಿದ್ದರು. ಇದೆಲ್ಲಾ, ಸುಳ್ಳು ಕಾರ್ಣಿಕವನ್ನು ವರ್ಷಕ್ಕೊಮ್ಮೆ ಮಾತ್ರ ನುಡಿಯುವುದು ಎಂದು ಕಾರ್ಣಿಕ ನುಡಿಯುವ ಗೊರವಯ್ಯ ಅಕ್ರೋಶ ವ್ಯಕ್ತಪಡಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications