ಕುಂಭ ನವಾಂಶಕ್ಕೆ ಗುರು ಸಂಚಾರ; ಸೆ. 25ರೊಳಗೆ ರಾಜ್ಯ ಸರಕಾರಕ್ಕೆ ಸಂಚಕಾರ?!
ಈ ಬಾರಿ ಕರ್ನಾಟಕ ರಾಜಕಾರಣದಲ್ಲಿ ಗುರು ಗ್ರಹದ ಸಂಚಾರ ಸಂಚಲನ ಉಂಟು ಮಾಡುತ್ತದೆಯೇ? ಈ ಪ್ರಶ್ನೆಗೆ ಜ್ಯೋತಿಷಿಗಳು 'ಹೌದು' ಎನ್ನುತ್ತಿದ್ದಾರೆ. ಈ ಹಿಂದೆ ಚಂದ್ರಗ್ರಹಣ ಸಂಭವಿಸಿದ ನಲವತ್ತೆಂಟು ದಿನಗಳ ಒಳಗಾಗಿ ರಾಜ್ಯದಲ್ಲಿನ ಮೈತ್ರಿ ಸರಕಾರ ಬಿದ್ದು ಹೋಗುತ್ತದೆ ಎಂಬ ರೀತಿಯಲ್ಲಿ ಒನ್ ಇಂಡಿಯಾ ಕನ್ನಡದ ಜತೆ ಮಾತನಾಡುವಾಗ ಉಡುಪಿಯ ಕಾಪು ಮೂಲದ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದರು.
ಇದೀಗ ಗುರು ಗ್ರಹವು ಕುಂಭ ರಾಶಿಯನ್ನು ಪ್ರವೇಶ ಮಾಡುವವನಿದ್ದು ಸೆಪ್ಟೆಂಬರ್ ಇಪ್ಪತ್ತೈದನೇ ತಾರೀಕು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಭಾರೀ ಗಂಡಾಂತರ ಎದುರಾಗಲಿದೆ. ಆ ಸಮಯದೊಳಗೆ ಈಗಿನ ಸರಕಾರ ಪತನವಾದರೂ ಅಚ್ಚರಿಯಿಲ್ಲ ಎಂದು ಅಭಿಪ್ರಾಯ ಪಡುತ್ತಾರೆ ಜ್ಯೋತಿಷಿಗಳು.
ಈ ವಿಚಾರವಾಗಿ ಜ್ಯೋತಿಷಿಗಳಾದ ಪ್ರಕಾಶ್ ಅಮ್ಮಣ್ಣಾಯ ಅವರನ್ನು ಮಾತನಾಡಿಸಿದಾಗ, " ಗುರು ಗ್ರಹವು ಕುಂಭ ನವಾಂಶ ಪ್ರವೇಶ ಮಾಡುವವನಿದ್ದು, ಈಗಿನ ಬಿಜೆಪಿ ಸರಕಾರ ಪತನ ಆಗುವ ಸೂಚನೆಗಳು ಇರುವುದು ನಿಜ. ಆದರೆ ಕೆಲವು ಪರಿಹಾರಗಳನ್ನು ಮಾಡಿಕೊಳ್ಳುವ ಮೂಲಕ ಉಳಿಸಿಕೊಳ್ಳಬಹುದು. ಆದರೆ ಅದು ಕೂಡ ಬಹಳ ಸಮಯ ಸಾಧ್ಯವಿಲ್ಲ. ದಯವಿಟ್ಟು ಇದಕ್ಕಿಂತ ಹೆಚ್ಚಿಗೆ ನನ್ನನ್ನು ಕೇಳಬೇಡಿ" ಎಂದರು.

ಕರ್ನಾಟಕ ರಾಜಕೀಯದ ಈಚೆಗಿನ ಬೆಳವಣಿಗೆ ಹಾಗೂ ಜ್ಯೋತಿಷ್ಯ ರೀತಿಯ ಭವಿಷ್ಯ ಜತೆಜತೆಗೆ ಸಾಗುತ್ತಿರುವಂತೆ ಕಾಣುತ್ತಿದೆ. ರಾಜ್ಯದ ಪ್ರಮುಖ ಪಕ್ಷಗಳಲ್ಲಿ ಇರುವ ನಾಯಕರು ಕೆಲವರಿಗೆ ಜ್ಯೋತಿಷ್ಯದ ಮೇಲೆ ಇರುವ ನಂಬಿಕೆ ಇದಕ್ಕೆ ಕಾರಣ. ಆದ್ದರಿಂದಲೇ ಸರಕಾರ ರಚನೆ, ವಿಶ್ವಾಸ ಮತ ಮಂಡನೆ, ಸಂಪುಟ ರಚನೆ, ವಿಸ್ತರಣೆ ಇತ್ಯಾದಿಯನ್ನು ಜ್ಯೋತಿಷ್ಯವನ್ನು ನಂಬಿಯೇ ಮಾಡುತ್ತಿದ್ದಾರೆ.
ಯಾವುದೇ ಸರಕಾರದ ಅಳಿವು- ಉಳಿವು ಪಂಚಾಂಗದಿಂದ ನಿರ್ಧಾರ ಆಗುತ್ತದೆ ಎಂಬ ನಂಬಿಕೆ ಒನ್ ಇಂಡಿಯಾ ಕನ್ನಡದ್ದಲ್ಲ. ಆದರೆ ಈ ಹಿಂದಿನ ಹಲವು ಉದಾಹರಣೆಗಳು ಜ್ಯೋತಿಷ್ಯಕ್ಕೂ ರಾಜಕಾರಣದಲ್ಲಿ ಒಂದು ಸ್ಥಾನವನ್ನು ಒದಗಿಸಿಕೊಟ್ಟಿದೆ. ಆದ್ದರಿಂದ ಜ್ಯೋತಿಷಿಗಳ ಅಭಿಪ್ರಾಯಕ್ಕೂ ಒಂದು ವೇದಿಕೆ ಒದಗಿಸಲಾಗುತ್ತಿದೆ, ಅಷ್ಟೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications