ದೇವರಗುಡ್ಡ ಮಾಲತೇಶ ಮೈಲಾರಲಿಂಗ ಸ್ವಾಮಿಯ ಕಾರ್ಣಿಕದ ಸಂಪೂರ್ಣ ವಿಶ್ಲೇಷಣೆ
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಮೈಲಾರಲಿಂಗ ಸ್ವಾಮಿಯ ಭವಿಷ್ಯವಾಣಿಯ ಅರ್ಥವೇನು ಎನ್ನುವುದನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಸಂತೋಷ್ ಗುರೂಜಿಯವರು ವಿಶ್ಲೇಷಣೆಯನ್ನು ಮಾಡಿದ್ದಾರೆ.
ವಿಡಿಯೋ ಮೂಲಕ ಕಾರ್ಣಿಕದ ವಿಶ್ಲೇಷಣೆಯನ್ನು ಮಾಡಿರುವ ಗುರೂಜಿಗಳು ಕ್ಷೇತ್ರದಲ್ಲಿ ನುಡಿಯಲಾಗುವ ಭವಿಷ್ಯವಾಣಿ ಎಂದೂ ಸುಳ್ಳಾಗುವುದಿಲ್ಲ ಎಂದು ಹೇಳಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. ಗುರೂಜಿಯ ವಿಶ್ಲೇಷಣೆಯ ಪೂರ್ಣ ಪಾಠ ಇಂತಿದೆ:
"ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಗೊರವಯ್ಯನವರು 21 ಅಡಿ ಬಿಲ್ಲನ್ನು ಏರಿ ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿರುತ್ತಾರೆ. 'ಎರೆ ದೊರೆ ಆಕತಲೆ ದೈವ ದರ್ಬಾರ್ ಆಕತಲೆ ಪರಾಕ್' ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದರು. ಪ್ರತೀ ವರ್ಷ ನಿಜಾಂಶವನ್ನು ತಿಳಿಸುವಂತಹ ಭವಿಷ್ಯವಾಣಿ ಆಗಿರುತ್ತದೆ" ಎಂದು ಸಂತೋಷ್ ಗುರೂಜಿ ಹೇಳಿದ್ದಾರೆ.
"ಕಳೆದ ವರ್ಷ ವ್ಯಾಧಿ ಬೂದಿ ಆತಲೇ, ಸೃಷ್ಟಿ ಸಿರಿಯಾದಿತಲೇ ಪರಾಕ್ ಎನ್ನುವ ಭವಿಷ್ಯವಾಣಿಯನ್ನು ನುಡಿಯಲಾಗಿತ್ತು. ಕಾಯಿಲೆ ಬೂದಿಯಾಗುತ್ತದೆ, ದೇಶದ ಜನತೆ ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎನ್ನುವುದು ಇದರ ಅರ್ಥವಾಗಿತ್ತು".

ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಬೇಕಾಗುತ್ತದೆ
"ಈ ವರ್ಷ ನುಡಿಯಲಾದ ಭವಿಷ್ಯವನ್ನು ವಿಶ್ಲೇಷಣೆ ಮಾಡುವುದಾದರೆ, ಎರೆ ಅಂದರೆ ಮಣ್ಣು, ದೊರೆ ಅಂದರೆ ಮಣ್ಣಿನ ರಾಜ ಎಂದು ಕರೆಯಬಹುದು. ರೈತರಿಗೆ ಆದ್ಯತೆಯನ್ನು ಕೊಡಬೇಕಾಗಿರುವುದರಿಂದ, ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಬೇಕಾಗುತ್ತದೆ. ರೈತ ಏನು ಬೆಳೆ ಬೆಳೆಯುತ್ತಾನೋ, ಅದು ದೊರೆಯಾಗುತ್ತದೆ. ಅಂದರೆ, ಬೆಳೆ ವೃದ್ದಿಯಾಗಿ ಫಲವನ್ನು ಕೂಡುತ್ತದೆ"ಎಂದು ಸಂತೋಷ್ ಗುರೂಜಿ ಹೇಳಿದ್ದಾರೆ.

ಕೊರೊನಾ ಮೂರನೇ ಅಲೆ ಬರತಕ್ಕಂತಹ ವಾತಾವರಣ ಇಲ್ಲ
"ಇನ್ನು, ದೈವ ದೊರೆಯಾದಿತಲೇ ಎಂದರೆ ದೇವರ ಕೃಪೆ ಎಲ್ಲರ ಮೇಲೆ ಇರಲಿದೆ. ಕೊರೊನಾ ಮೂರನೇ ಅಲೆ ಬರತಕ್ಕಂತಹ ವಾತಾವರಣ ಇಲ್ಲ. ರಾಜಕೀಯವಾಗಿಯೂ ಕಾರ್ಣಿಕದ ವಿಶ್ಲೇಷಣೆಯನ್ನು ಮಾಡಬೇಕಾಗುತ್ತದೆ. ಎರೆ ಅಂದರೆ ಕಟ್ಟಕಡೆ/ತುದಿ ಎಂದು ಹೇಳಬಹುದು. ದೊಡ್ಡದೊಡ್ಡ ಪಕ್ಷಗಳಿಗೆ ಪಕ್ಷೇತರರ ಬೆಂಬಲ ಬೇಕಾಗುತ್ತದೆ. ರಾಜ್ಯದ ರಾಜಕೀಯದಲ್ಲಿ ಪಕ್ಷೇತರರು ಪ್ರಮುಖ ಪಾತ್ರ ವಹಿಸುತ್ತಾರೆ" ಎಂದು ದೈವವಾಣಿಯನ್ನು ವಿಶ್ಲೇಷಿಸಬಹುದು ಎಂದು ಗುರೂಜಿ ಹೇಳಿದ್ದಾರೆ.

ಜನತೆ ಮತ್ತು ದೈವ ಮೆಚ್ಚುವಂತಹ ಆಡಳಿತವನ್ನು ಸರಕಾರ ಕೊಡುತ್ತದೆ
"ದೈವ ದೊರೆಯಾಕಿತಲೇ ಎಂದರೆ, ದೈವದ ಆಶೀರ್ವಾದ ಇರಲಿದೆ ಎಂದು ಮತ್ತು ಜನತೆ ಮತ್ತು ದೈವ ಮೆಚ್ಚುವಂತಹ ಆಡಳಿತವನ್ನು ಸರಕಾರ ಕೊಡುತ್ತದೆ ಎಂದು ಈ ಬಾರಿಯ ಕಾರ್ಣಿಕವನ್ನು ವಿಶ್ಲೇಷಣೆಯನ್ನು ಮಾಡಬಹುದು" ಎಂದು ಕ್ಷೇತ್ರದ ಪ್ರಧಾನ ಅರ್ಚಕರಾದಂತಹ ಸಂತೋಷ್ ಗುರೂಜಿ ಹೇಳಿದ್ದಾರೆ. ಆ ಮೂಲಕ, ಕೊರೊನಾ ಮಹಾಮಾರಿಯ ಕಾಟ ದೂರವಾಗಿ ಜನತೆ ನೆಮ್ಮದಿಯ ಜೀವನವನ್ನು ನಡೆಸಬಹುದು ಎಂದು ಭಕ್ತರು ನಂಬಿದ್ದಾರೆ.

ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು
"ಈ ಸಂವತ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ, ಪಂಚಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ- ರುಜಿನಗಳು ಹೆಚ್ಚಾಗಲಿದೆ. ಜನವರಿಯವರೆಗೂ ರೋಗ ಬಾಧೆ ಇರಲಿದೆ. ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು, ಕಾಯಿಲೆಯಿಂದ ಸಾಯುವುದಿಲ್ಲ,'' ಎಂದು ಜುಲೈ ತಿಂಗಳಲ್ಲಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯವನ್ನು ನುಡಿದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications