ಕೃಷ್ಣ ಪಕ್ಷದ ಚತುರ್ದಶಿ, ಅಮಾವಾಸ್ಯೆ ಜನನವಾದರೆ ಏನು ಫಲ?
Recommended Video

ಜ್ಯೋತಿಷ್ಯದಲ್ಲಿ ಜನನ ಕಾಲದ ದೋಷಗಳ ಬಗ್ಗೆ ಹೇಳಲಾಗಿದೆ. ಲಗ್ನ ಚೆನ್ನಾಗಿದ್ದು, ಗ್ರಹಗಳು ಉತ್ತಮ ಸ್ಥಿತಿಯಲ್ಲಿದ್ದರೂ ಜನನ ಕಾಲದ ಆಧಾರದಲ್ಲಿ ಕೆಲವು ದೋಷಗಳನ್ನು ಹೇಳಲಾಗಿದೆ. ಅಂದರೆ ಅಮಾವಾಸ್ಯೆ ಹಾಗೂ ಕೃಷ್ಣ ಪಕ್ಷದ ಚತುರ್ದಶಿಯಂದು ಗಂಡು ಮಕ್ಕಳ ಜನನವಾದರೆ ಅದನ್ನು ದೋಷವೆಂದು ಪರಿಗಣಿಸಲಾಗುತ್ತದೆ.
ಇನ್ನು ಭದ್ರ ಕರಣದಲ್ಲಿ ಜನನವಾದರೆ, ತಂದೆ- ತಾಯಿ, ಸೋದರನ ನಕ್ಷತ್ರದಲ್ಲೇ ಮಗುವಿನ ಜನನವಾದರೆ, ಸೂರ್ಯ ಗ್ರಹವು ಮತ್ತೊಂದು ರಾಶಿಯನ್ನು ಪ್ರವೇಶ ಮಾಡುವ ಸಮಯದಲ್ಲಿ, ಸೂರ್ಯ ಅಥವಾ ಚಂದ್ರ ಗ್ರಹಣದ ವೇಳೆಯಲ್ಲಿ, ವ್ಯತೀಪಾತ ಯೋಗದಲ್ಲಿ, ಯಮಗಂಡ, ತಿಥಿಕ್ಷಯ, ದಗ್ಧ ಯೋಗದಲ್ಲಿ ಜನಿಸಿದರೆ ದೋಷಪ್ರದ ಎಂದು ಪರಿಗಣಿಸಲಾಗುತ್ತದೆ.
ಮೂವರು ಹೆಣ್ಣುಮಕ್ಕಳ ನಂತರ ಒಂದು ಗಂಡುಮಗು ಜನಿಸಿದರೆ, ಮೂವರು ಗಂಡು ಮಕ್ಕಳ ನಂತರ ಒಂದು ಹೆಣ್ಣುಮಗು ಹುಟ್ಟಿದರೆ ಅದು ಕೂಡ ದೋಷಪ್ರದ ಎನಿಸುತ್ತದೆ. ಆದರೆ ಈ ಎಲ್ಲ ದೋಷಗಳಿಗೂ ಜ್ಯೋತಿಷ್ಯದಲ್ಲಿ ಪರಿಹಾರವನ್ನು ಸೂಚಿಸಲಾಗಿದೆ ಎಂಬುದು ಗಮನಿಸಬೇಕಾದ ಅಂಶ.

ಅಮಾವಾಸ್ಯೆಯಂದು ಜನಿಸಿದ ಗಂಡುಮಕ್ಕಳು ಬಡತನ ಅನುಭವಿಸಬೇಕಾದ ಸ್ಥಿತಿ ಏರ್ಪಡುತ್ತದೆ. ಆದ್ದರಿಂದ ಆ ಜನನ ದೋಷದ ನಿವಾರಣೆ ಮಾಡಿಕೊಳ್ಳುವುದು ಬಹಳ ಮುಖ್ಯ. ಹಾಗೆ ನಿವಾರಣೆ ಮಾಡಿಕೊಂಡರೆ ಅಮಾವಾಸ್ಯೆ ಜನನ ದೋಷವು ಹೋಗಿ, ಆ ಮಗುವಿಗೆ ಉತ್ತಮ ಫಲಗಳು ದೊರೆಯುತ್ತವೆ.
ಕೃಷ್ಣ ಪಕ್ಷದ ಚತುರ್ದಶಿ ಜನನ ದೋಷದ ವಿಚಾರಕ್ಕೆ ಬಂದರೆ, ಆ ತಿಥಿಯ ಪ್ರಮಾಣವನ್ನು ಆರು ಭಾಗ ಮಾಡಿಕೊಳ್ಳಬೇಕು. ಮೊದಲ ಭಾಗದಲ್ಲಿ ಜನನ ಆಗಿದ್ದರೆ ಶುಭಪ್ರದ. ಎರಡನೇ ಭಾಗದಲ್ಲಿ ಆದರೆ ನಾಶವನ್ನು ಅಥವಾ ತಂದೆಗೆ ಕೆಡುಕನ್ನು ಸೂಚಿಸುತ್ತದೆ. ಮೂರನೇ ಭಾಗವು ತಾಯಿಗೆ ಕೆಡುಕನ್ನು ಸೂಚಿಸುತ್ತದೆ. ನಾಲ್ಕನೇ ಭಾಗದಲ್ಲಿ ಜನನವಾದರೆ ತಾಯಿಯ ಅಣ್ಣ- ತಮ್ಮಂದಿರಿಗೆ ಕೆಡುಕು, ಐದನೇ ಭಾಗದಲ್ಲಿಯಾದರೆ ಕುಟುಂಬವೇ ನಾಶ, ಆರರಲ್ಲಿ ಸ್ವತಃ ಆ ಮಗುವಿಗೇ ತೊಂದರೆಯಾಗುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications