ಬಿಎಸ್ವೈ ಬಹುಮತ ಸಾಬೀತು ಮಾಡ್ತಾರಾ? ಜ್ಯೋತಿಷಿ ಏನಂತಾರೆ?
ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿಜೆಪಿಯ ಜನಪ್ರಿಯ ನಾಯಕ, 75 ವರ್ಷದ ಹಿರಿಯ ರಾಜಕಾರಣಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪನವರು ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗುತ್ತಾರಾ?
ಮೊದಲು ಯಡಿಯೂರಪ್ಪನವರು ಗುರುವಾರ 12.20ಕ್ಕೆ ಪ್ರಮಾಣ ಸ್ವೀಕರಿಸುತ್ತಾರೆ ಎಂದು ನಿಗದಿಯಾಗಿತ್ತು. ಆದರೆ, ಕೆಲವೇ ಗಂಟೆಗಳ ಅವಧಿಯಲ್ಲಿ ಅದು ಸರಿಯಾಗಿ 9 ಗಂಟೆಗೆ ಎಂದು ಬದಲಾಯಿತು. ಸುಪ್ರೀಂ ಕೋರ್ಟಿನಲ್ಲಿ ರಾಜ್ಯಪಾಲರ ತೀರ್ಮಾನದ ವಿರುದ್ಧ ಅರ್ಜಿ ಸಲ್ಲಿಸಿದ್ದರಿಂದ ತರಾತುರಿಯಲ್ಲಿ ಮುಹೂರ್ತ ನಿಗದಿಯಾಯಿತು.
ಈ ದಿನ ಅಂದ್ರೆ ಗುರುವಾರ ಅವರು ಅಧಿಕಾರ ಸ್ವೀಕರಿಸಿದ ಮುಹೂರ್ತ ಏನನ್ನು ಸೂಚಿಸುತ್ತದೆ? ಇದರಿಂದ ಅವರು ಯಶಸ್ವಿಯಾಗಿ ಬಹುಮತ ಸಾಬೀತುಪಡಿಸುತ್ತಾರಾ? ಪೂರ್ಣಾವಧಿ ಅಧಿಕಾರ ಚಲಾಯಿಸುತ್ತಾರಾ? ಈ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಪ್ರಕಾಶ್ ಅಮ್ಮಣ್ಣಾಯ ಅವರು ಒನ್ಇಂಡಿಯಾ ಕನ್ನಡದ ಜೊತೆಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಅವರ ಲೆಕ್ಕಾಚಾರ ಹೇಗಿದೆ ಮುಂದೆ ಓದಿ.

"ಯಡಿಯೂರಪ್ಪ ಅವರು ಮಿಥುನ ಲಗ್ನದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆ ಲಗ್ನಕ್ಕೆ ಸಪ್ತಮದಲ್ಲಿ ಶನಿ, ಅಷ್ಟಮದಲ್ಲಿ ಕುಜ ಹಾಗೂ ಪಂಚಮದಲ್ಲಿ ಗುರು ಇದೆ. ಈ ಗ್ರಹ ಸ್ಥಿತಿಯ ಆಧಾರದಲ್ಲಿ ಹೇಳಬೇಕೆಂದರೆ ಈ ಸರ್ಕಾರಕ್ಕೆ ಆಯುಷ್ಯ ಹೆಚ್ಚಿಸಿಕೊಳ್ಳುವ ಸಾಧ್ಯತೆಗಳಿವೆ. ಅಧಿಕಾರ ಸ್ವೀಕರಿಸಿದ ಸಂದರ್ಭ ಬಿಜೆಪಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸುವ ಅವಕಾಶಗಳಿವೆ" ಎಂದು ಅವರು ವಿಶ್ಲೇಷಿಸಿದ್ದಾರೆ.
"ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುತ್ತಾರೋ, ಇಲ್ಲವೋ ಅದು ದೈವ ಸಂಕಲ್ಪ. ಆದರೆ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಲಗ್ನಕ್ಕೆ ದೈವಬಲ ಇದೆ. ಆದ್ದರಿಂದ ಯಾರು ಊಹಿಸದ ರೀತಿಯಲ್ಲಿ ಈ ಸರ್ಕಾರ ಬಾಳಿಕೆ ಬರುವ ಲಕ್ಷಣಗಳು ಗೋಚರಿಸುತ್ತಿವೆ" ಎಂದು ಪ್ರಕಾಶ್ ಅಮ್ಮಣ್ಣಾಯ ತಿಳಿಸಿದರು.
"ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಇದು ಸರಿ, ಇದು ತಪ್ಪು ಎಂಬ ಕಟ್ಟಳೆಗಳಿವೆ. ಆದರೆ ಈಗಿನ ಸನ್ನಿವೇಶ ಸರಿ-ತಪ್ಪುಗಳ ಮಧ್ಯದ ಗೆರೆಯನ್ನು ಅಳಿಸಿ ಹಾಕಿದೆ. ಇಲ್ಲಿ ಇನ್ನೊಂದು ವಿಚಾರ ಸ್ಪಷ್ಟಪಡಿಸುತ್ತೇನೆ. ನಾನೊಬ್ಬ ಜ್ಯೋತಿಷಿ. ನನಗೆ ಎಲ್ಲಾ ಪಕ್ಷಗಳು ಒಂದೇ. ಗ್ರಹಸ್ಥಿತಿಯ ಆಧಾರದಲ್ಲಿ ನನ್ನ ತಿಳಿವಳಿಕೆಯ ಮಿತಿಯಲ್ಲಿ, ಆ ದೇವರು ನುಡಿಸಿದ್ದನ್ನು ಹೇಳಿದ್ದೇನೆ. ಮತ್ತೇ ನನ್ನ ವಿರುದ್ಧ ಬೇಜಾರು ಮಾಡ್ಕೊಳ್ಬೇಡಿ."
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications