ಕನಕಪುರದಲ್ಲಿ ಬಂಡೆ ಭದ್ರ: ನಿಜವಾಯ್ತು ಡಿಕೆ ಶಿವಕುಮಾರ್ ಜನ್ಮ ಕುಂಡಲಿ ಭವಿಷ್ಯ!
ಡಿಕೆಶಿ.... ಡಿಕೆಶಿ... ಇದೊಂದು ಹೆಸರು ಮೇ 13ರಿಂದ ಪ್ರತಿಯೊಬ್ಬರ ಬಾಯಲ್ಲೂ ಬರಲು ಆರಂಭಿಸಿದೆ. ಇದು ನಿಜಕ್ಕೂ ಡಿಕೆ ಶಿವಕುಮಾರ್ ಅವರು ಮಾಡಿದ ಕರಾಮತ್ತೇ ನಿಜ. ಸದ್ಯ ಸಿಎಂ ರೇಸ್ನಲ್ಲಿರುವ ಡಿಕೆ ಶಿವಕುಮಾರ್ ಅವರ ಬಗ್ಗೆ ಈ ಒಂದು ತಿಂಗಳ ಹಿಂದೆ ಜನ್ಮ ಕುಂಡಲಿ ಭವಿಷ್ಯ ನುಡಿಯಲಾಗಿತ್ತು. ಈ ಜನ್ಮ ಕುಂಡಲಿ ಭವಿಷ್ಯ ಸದ್ಯ ನಿಜವಾಗಿದೆ.
ಹೌದು.. ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತಗಳನ್ನು ಪಡೆದು ಅಧಿಕಾರದ ಗದ್ದುಗೆಗೆ ಏರಿದೆ. ಇದೊಂದು ಭಾರೀ ಮಟ್ಟದ ಗೆಲುವು. ಯಾಕೆಂದರೆ ಡಬಲ್ ಇಂಜಿನ್ ಸರ್ಕಾರದ ಕೇಂದ್ರ ಹಾಗೂ ವಿವಿಧ ರಾಜ್ಯಗಳ ಘಟಾನುಘಟಿ ನಾಯಕರು ಕರ್ನಾಟಕಕ್ಕೆ ಬಂದು ಭರ್ಜರಿ ಪ್ರಚಾರ ಮಾಡಿ, ಕೋಟ್ಯಾಂತರ ರೂಪಾಯಿ ಖರ್ಚು ಮಾಡುವುದು ಮಾತ್ರವಲ್ಲದೆ, ಈ ಬಾರಿ ಸರ್ಕಾರ ನಮ್ಮದೇ ಎಂದು ಬೀಗಿತ್ತು. ಆದರೆ ಜೈಲು, ಆರೋಪ, ಐಟಿ ದಾಳಿ ಇಂತೆಲ್ಲಾ ಸಂದಿಗ್ಧ ಕೆಸರಿನಲ್ಲಿ ಅರಳಿದ್ದು ಕಮಲವಲ್ಲ ಬದಲಿಗೆ 'ಕೈ' ಎನ್ನುವುದು ದೊಡ್ಡ ವಿಚಾರ.

ಹೀಗಾಗಿ ಕಾಂಗ್ರೆಸ್ ಈ ಬಾರಿ ಇತಿಹಾಸನ್ನೇ ಸೃಷ್ಟಿಸಿದೆ. ಇದಕ್ಕೆ ಕಾರಣರಾದ ಕಾಂಗ್ರೆಸ್ನ ಘಟಾನುಘಟಿ ನಾಯಕರಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರ ಮಹತ್ವದ್ದು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಾಥ್ ನೀಡಿ ಪಕ್ಷ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ನಾಯಕರಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರ ಸಣ್ಣದಲ್ಲ. ಅಂತೆಯೇ ಕನಕಪುರದಲ್ಲೂ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ಪಕ್ಷ ಮುನ್ನಡೆಸುವ ಜವಬ್ದಾರಿಯೊಂದಿಗೆ ಡಿಕೆ ಶಿವಕುಮಾರ್ ತಮ್ಮ ಕ್ಷೇತ್ರದಲ್ಲೂ ಮತದಾನ ಪ್ರಭುಗಳ ಮನಗೆದ್ದಿದ್ದಾರೆ.
ಡಿಕೆ ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕರಾಗಿ ಗುರುತಿಸಿಕೊಂಡವರು. ಹೀಗೆ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡ ಡಿಕೆ ಶಿವಕುಮಾರ್ ಅವರ ಜನ್ಮ ಕುಂಡಲಿ ಆಧಾರದ ಮೇಲೆ ಈ ಇಂದು ತಿಂಗಳ ಹಿಂದೆ ಭವಿಷ್ಯ ನುಡಿಯಲಾಗಿತ್ತು.
ನಿಜವಾಯ್ತು ಡಿಕೆ ಶಿವಕುಮಾರ್ ಜನ್ಮ ಕುಂಡಲಿ ಭವಿಷ್ಯ
ಡಿಕೆ ಶಿವಕುಮಾರ್ ಅವರ ಮೇಷ ರಾಶಿ ಆಧಾರದ ಮೇಲೆ ಅವರ ಜನ್ಮ ಕುಂಡಲಿ ಅತ್ಯುತ್ತಮವಾಗಿತ್ತು. ಹೀಗಾಗಿ ಅವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಾರೆ ಎನ್ನಲಾಗಿತ್ತು. ಜನ್ಮ ಕುಂಡಲಿ ಆಧಾರದ ಮೇಲೆ ಡಿಕೆ ಶಿವಕುಮಾರ್ ಸದ್ಯ ತೀವ್ರ ಪೈಪೋಟಿ ನೀಡುವ ಮೂಲಕ ಬಿಜೆಪಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನ ಮೇ 10ರಂದು ನಡೆಯಿತು. ಮೇ 13ರಂದು ಮತ ಎಣಿಕೆ ಪ್ರಕ್ರಿಯೆ ಆರಂಭದಲ್ಲೇ ಡಿಕೆ ಶಿವಕುಮಾರ್ ಮುನ್ನಡೆ ಕಾಯ್ದುಕೊಂಡರು. ನಂತರದ ಹಾವು ಏಣಿ ಆಟದಲ್ಲಿ ಕೊನೆಗೆ ಜಯ ಸಿಕ್ಕಿದ್ದು ಡಿಕೆ ಶಿವಕುಮಾರ್ ಅವರಿಗೆ. ಬರೋಬ್ಬರಿ 1,22,392 ಮತಗಳನ್ನು ಪಡೆಯುವ ಮೂಲಕ ಡಿಕೆಶಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಒಂದು ತಿಂಗಳ ಹಿಂದೆ ನಡುದ ಡಿಕೆ ಶಿವಕುಮಾರ್ ಅವರ ಜನ್ಮ ಕುಂಡಲಿ ಪ್ರಕಾರ, ಶನಿಯ ಮಹಾದಶ ಶುಕ್ರ ಗ್ರಹದ ಅಂತರದಶ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಮೇಷ ರಾಶಿಯ ಹತ್ತನೇ ಮನೆಯಲ್ಲಿ ಶನಿ ನೆಲೆಸಿತ್ತು. ಶನಿಯ ಈ ಸ್ಥಾನ ತುಂಬಾ ಉತ್ತಮವಾಗಿತ್ತು. ಇದರೊಂದಿಗೆ ಹನ್ನೊಂದನೆ ಮನೆಯಲ್ಲಿ ಸ್ಥಾನ ಪಡೆದಿರುವ ಶುಕ್ರ ಗ್ರಹ ಉತ್ತಮ ಫಲಿತಾಂಶವನ್ನು ನೀಡಲಿದೆ ಎಂದು ಹೇಳಲಾಗಿತ್ತು. ಶನಿಯ ಮಹಾದಶ, ಶುಕ್ರ ಗ್ರಹದ ಅಂತರದಶ ನೋಡುವುದಾದರೆ ಡಿಕೆ ಶಿವಕುಮಾರ್ ಅವರ ಜನ್ಮ ಕುಂಡಲಿ ತುಂಬಾ ಪ್ರಬಲವಾಗಿತ್ತು.
ಶನಿಯ ಸ್ಥಾನದಿಂದ ಡಿಕೆ ಶಿವಕುಮಾರ್ ಅವರಿಗೆ ಹೆಚ್ಚಿನ ಲಾಭ ಸಿಗಲಿದೆ ಎಂದು ಹೇಳಲಾಗಿತ್ತು. ಡಿಕೆ ಶಿವಕುಮಾರ್ ಅವರ ಜನ್ಮ ಕುಂಡಲಿ ತುಂಬಾ ಚೆನ್ನಾಗಿದ್ದು ಬಿಜೆಪಿ ವಿರುದ್ಧ ಅವರು ಪ್ರಬಲ ಸ್ಪರ್ಧಿಯಾಗುವುದರಲ್ಲಿ ಎರಡು ಮಾತಿಲ್ಲ ಎನ್ನಲಾಗಿತ್ತು. ಡಿಕೆ ಶಿವಕುಮಾರ್ ಅವರ ಜನ್ಮ ಕುಂಡಲಿ ತುಂಬಾ ಚೆನ್ನಾಗಿದ್ದದ್ದೇ ಈ ಬಾರಿ ಅವರು ಜಯ ಸಾಧಿಸಲು ಸಾಧ್ಯವಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಅವರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರ ಜನ್ಮ ಕುಂಡಲಿ ಜಾತಕ ಸದ್ಯ ನಿಜವಾಗಿದೆ.
ಜೊತೆಗೆ ಚುನಾವಣೆಯ ಬಳಿಕ ಡಿಕೆ ಶಿವಕುಮಾರ್ಗೆ ರಾಹುಲ್ ಗಾಂಧಿ ಕೇಂದ್ರ ಮಟ್ಟದಲ್ಲಿ ಹೆಚ್ಚಿನ ಜವಬ್ದಾರಿಯನ್ನೂ ನೀಡುವ ಸಾಧ್ಯತೆ ಇದೆ ಎಂದೂ ಕೂಡ ಜನ್ಮ ಕುಂಡಲಿಯಲ್ಲಿ ಹೇಳಲಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ. ಸದ್ಯ ಜನ್ಮ ಕುಂಡಲಿಯಂತೆ ಡಿಕೆ ಶಿವಕುಮಾರ್ ಜಯ ಸಾಧಿಸಿದ್ದಾರೆ. ಕೇಂದ್ರ
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications