ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರಾ: ಜ್ಯೋತಿಷಿ ಏನಂತಾರೆ?
Recommended Video

ಇಲ್ಲಿ ಪ್ರಕಟವಾಗಿರುವ ಭವಿಷ್ಯವು ಜ್ಯೋತಿಷಿಗಳು ಹೇಳಿರುವುದು. ಇದರಲ್ಲಿನ ಯಾವುದೇ ಅಂಶಕ್ಕೂ ಒನ್ಇಂಡಿಯಾ ಕನ್ನಡ ಜವಾಬ್ದಾರವಲ್ಲ - ಸಂಪಾದಕ
*****
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಭವಿಷ್ಯದ ಬಗೆಗಿನ ಲೇಖನವಿದು. ಮಹಾನ್ ನಾಯಕರಾದ ಅವರ ವಿಚಾರದಲ್ಲಿ ಭಾವೋದ್ವೇಗಕ್ಕೆ ಒಳಗಾಗುವ ಅಭಿಮಾನಿಗಳೇ ಹೆಚ್ಚು. ಆದರೆ ಗ್ರಹಗತಿಗಳು ಎಲ್ಲರನ್ನೂ ಒಂದೇ ರೀತಿ ನೋಡುತ್ತವೆ.
ಅವರ ಜನ್ಮ ಜಾತಕ ಹಾಗೂ ಗ್ರಹಗಳ ಸ್ಥಿತಿಯ ಆಧಾರದಲ್ಲಿ ಏನನ್ನು ಸೂಚಿಸುತ್ತಿದೆಯೋ ಆ ಅಂಶಗಳನ್ನೇ ಇಲ್ಲಿ ಕೊಡಲಾಗಿದೆ. ಫಲಾಫಲದ ಪರಾಮರ್ಶೆಯಷ್ಟೇ ನಾವು ಮಾಡಲು ಸಾಧ್ಯ. ಉಳಿದದ್ದು ಆ ಭಗವಂತನಿಗೆ ಬಿಟ್ಟ ವಿಚಾರ. ವೃಶ್ಚಿಕ ರಾಶಿಯವರಾದ ಯಡಿಯೂರಪ್ಪನವರ ಜನ್ಮ ಜಾತಕ ನೋಡುವಾಗ ವೃಷಭದಲ್ಲಿ ಶನಿ ಗ್ರಹವಿದೆ.
ಇನ್ನು ಧನು ಲಗ್ನದವರಾದ ಅವರಿಗೆ ಎರಡನೇ ಸ್ಥಾನದಲ್ಲಿ ಕುಜ ಹಾಗೂ ಬುಧ ಗ್ರಹವಿದೆ. ಸದ್ಯಕ್ಕೆ ಧನು ರಾಶಿಯಲ್ಲಿ ಶನಿಯು ಸ್ಥಿತನಾಗಿದ್ದು, ಜನ್ಮ ಕಾಲದಲ್ಲಿ ವೃಷಭ ರಾಶಿಯಲ್ಲಿದ್ದ ಶನಿಯಿಂದ ಲೆಕ್ಕ ಹಾಕಿದರೆ ಈಗ ಎಂಟನೆ ಸ್ಥಾನದಲ್ಲಿದೆ. ಆದ್ದರಿಂದ ಯಾವ ರೀತಿಯಲ್ಲೂ ಅನುಕೂಲಕರವಾದ ಅಥವಾ ಶುಭವಾದ ಫಲಗಳನ್ನು ಹೇಳುವುದು ಕಷ್ಟವಾಗುತ್ತದೆ.

ಸಾಡೇ ಸಾತ್ ನಿಂದ ಶ್ರಮ ಹೆಚ್ಚು
ವೃಶ್ಚಿಕ ರಾಶಿಗೆ ಈಗ ಸಾಡೇಸಾತ್ ನಡೆಯುತ್ತಿದೆ. ಆದ್ದರಿಂದ ಶ್ರಮ ಹೆಚ್ಚಾಗುತ್ತದೆ. ಇನ್ನು ಜನ್ಮ ಜಾತಕದಲ್ಲಿರುವ ಶನಿಯಿಂದ ಎಂಟನೇ ಮನೆಯಲ್ಲಿ ಸದ್ಯಕ್ಕೆ ಶನಿ ಆಗುವುದರಿಂದ ಆರೋಗ್ಯದಲ್ಲಿ ಬಹಳ ಸಮಸ್ಯೆಗಳಾಗುತ್ತವೆ. ಇನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಆಗುವುದಕ್ಕೆ ಸಾಲುಸಾಲು ಅಡೆತಡೆಗಳು ಎದುರಾಗುತ್ತದೆ.

ಮಾತಿನ ಕಾರಣಕ್ಕೆ ವಿರೋಧ
ಯಡಿಯೂರಪ್ಪನವರು ತಮ್ಮ ಮಾತುಗಳಿಂದ ಬಹಳ ವಿರೋಧ ಕಟ್ಟಿಕೊಳ್ಳುತ್ತಾರೆ. ಪಕ್ಷದ ವರಿಷ್ಠರು ಹಾಗೂ ರಾಜ್ಯ ಬಿಜೆಪಿಯೊಳಗಿನ ನಾಯಕರ ಅಸಮಾಧಾನಕ್ಕೂ ಇದು ಕಾರಣ ಆಗಲಿದೆ. ತಮ್ಮ ಸಿಟ್ಟಿನ ನಡವಳಿಕೆ ಕಾರಣಕ್ಕೆ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ ಎಂಬುದನ್ನು ಸೂಚಿಸುತ್ತಿದೆ.

ಮತ್ತೆ ಎದ್ದು ನಿಲ್ಲುವ ಆರೋಪಗಳು
ಇನ್ನು ಈ ಹಿಂದೆ ಎದುರಿಸಿದ್ದ ಆರೋಪಗಳು ಮತ್ತೆ ಬೇಟೆ ಆಡಲು ಆರಂಭಿಸುತ್ತವೆ. ಇದಕ್ಕೆ ಕಾರಣ ಕೂಡ ಗ್ರಹಸ್ಥಿತಿಗಳೆ. ಯಾವುದು ಮುಗಿಯಿತು, ಇನ್ನು ಸಮಸ್ಯೆಯಿಲ್ಲ ಎಂದು ಭಾವಿಸಿದ್ದರೋ ಅವುಗಳೇ ಎದ್ದು ನಿಲ್ಲುತ್ತವೆ. ಅಷ್ಟೇ ಅಲ್ಲ, ಕಂಟಕವಾಗಿ ಮಾರ್ಪಾಡು ಆಗುತ್ತವೆ.

ಹಿನ್ನಡೆಯ ಸೂಚನೆ
ಆದ್ದರಿಂದ ಯೋಗಸ್ಯ ಪರಿರಕ್ಷಣಂ ಕ್ಷೇಮಃ ಎಂಬ ಮಾತಿನಂತೆ ತಮಗಿರುವ ಯೋಗವನ್ನು ಕಾಯ್ದುಕೊಳ್ಳುವುದೇ ಬುದ್ಧಿವಂತಿಕೆ. ಇನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಅಧಿಕಾರ ಹಿಡಿಯುವುದನ್ನು ಕೂಡ ಸೂಚಿಸುತ್ತಿದೆ. ಒಟ್ಟಿನಲ್ಲಿ ಯಡಿಯೂರಪ್ಪನವರ ಸಂಘಟನಾ ಶಕ್ತಿಯಲ್ಲಿನ ಹಿನ್ನಡೆ, ಸಿಟ್ಟು, ಅನಾರೋಗ್ಯ ಸಮಸ್ಯೆಯಾಗಿ ಅವರನ್ನು ಕಾಡುತ್ತದೆ, ಎಚ್ಚರ ಅಗತ್ಯ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications