ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೊರವಪ್ಪನ ಕಾರ್ಣಿಕ ಭವಿಷ್ಯ ನಿಜವಾಯ್ತು, ಜೆಡಿಎಸ್ ಗೆ ಪವರ್!

By Mahesh
|
Google Oneindia Kannada News

ಬಳ್ಳಾರಿ, ಮೇ 21: ಬಳ್ಳಾರಿ ಜಿಲ್ಲೆಯ ಐತಿಹಾಸಿಕ ಸುಕ್ಷೇತ್ರ ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವ ನುಡಿ ಈ ಬಾರಿ ಪ್ರಸ್ತುತ ರಾಜಕಾರಣದ ಸ್ಥಿತಿ ಕುರಿತಂತೆ ಭವಿಷ್ಯ ನುಡಿದಿದ್ದು ನಿಜವಾಗಿದೆ ಎಂದು ಸುಕ್ಷೇತ್ರ ಮೈಲಾರದ ಮೈಲಾರಲಿಂಗೇಶ್ವರ ಧರ್ಮದರ್ಶಿ ವೆಂಕಪ್ಪ ಒಡೆಯರ್ ಘೋಷಿಸಿದ್ದಾರೆ.

ಗೊರವಪ್ಪ ಕಳೆದ ಫೆಬ್ರವರಿ ಮೊದಲ ವಾರದಲ್ಲಿ 'ಆಕಾಶ ಗಿಡಕ್ಕೆ ಗಿಣಿ ಕಿತ್ತಿತ್ತಲೆ ಪರಾಕ್‌' ಎಂದು ಕಾರ್ಣಿಕ ನುಡಿ ಹೇಳಿದ್ದರು. ಅದೀಗ ಸತ್ಯವಾದಂತಾಗಿದೆ ಎಂದಿದ್ದಾರೆ.

ಕೋಡಿ ಶ್ರೀಗಳ ಭವಿಷ್ಯ: ಶಾಸ್ತ್ರಿ ಅವರಂಥ ದೇಶ ನಾಯಕನ ಸಾವುಕೋಡಿ ಶ್ರೀಗಳ ಭವಿಷ್ಯ: ಶಾಸ್ತ್ರಿ ಅವರಂಥ ದೇಶ ನಾಯಕನ ಸಾವು

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದ ಮೈಲಾರಲಿಂಗೇಶ್ವರ ದೇಗುಲದ ವತಿಯಿಂದ ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಈ ಮೂಲಕ ಶತ ಶತಮಾನಗಳಿಂದ ಹೇಳುತ್ತಾ ಬರುತ್ತಿರುವ ಕಾರ್ಣಿಕ ಭವಿಷ್ಯದ ಮುನ್ನುಡಿ ಎಂಬುದು ಸಾಬೀತಾದಂತಾಗಿದೆ ಎಂದಿದ್ದಾರೆ.

<span class=ಮೈಲಾರ ಲಿಂಗೇಶ್ವರ ಕಾರ್ಣಿಕ ದೈವವಾಣಿಯ ಅರ್ಥ: ಉಳಿದವರು ಕಂಡಂತೆ" title="ಮೈಲಾರ ಲಿಂಗೇಶ್ವರ ಕಾರ್ಣಿಕ ದೈವವಾಣಿಯ ಅರ್ಥ: ಉಳಿದವರು ಕಂಡಂತೆ" />ಮೈಲಾರ ಲಿಂಗೇಶ್ವರ ಕಾರ್ಣಿಕ ದೈವವಾಣಿಯ ಅರ್ಥ: ಉಳಿದವರು ಕಂಡಂತೆ

ನಾಡಿನ ಭವಿಷ್ಯವಾಣಿಯಾದ ಕಾರ್ಣಿಕ, ಶುಭಾಶುಭ ಫಲಗಳ ಬಗ್ಗೆ ಸಾರ್ವಜನಿಕರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ರಾಜಕೀಯ, ಸಾಮಾಜಿಕ ಹಾಗೂ ಇತರ ಕ್ಷೇತ್ರಗಳ ಮೇಲೆ ಗಂಭೀರ ಪರಿಣಾಮ ಬೀರುವ ವಿಶ್ಲೇಷಣೆಗಳು, ವಿಶೇಷ ಅರ್ಥಗಳು ಕೇಳುತ್ತಿದ್ದು, ಪರಸ್ಪರ ಚರ್ಚೆಗಳಿಗೆ ಕಾರಣವಾಗಿದೆ.

ಕೋಡಿಶ್ರೀಗಳು ನುಡಿದ ಭವಿಷ್ಯವೇನು: ಕುಮಾರಸ್ವಾಮಿ ಮುಂದಿನ ಸಿಎಂ?ಕೋಡಿಶ್ರೀಗಳು ನುಡಿದ ಭವಿಷ್ಯವೇನು: ಕುಮಾರಸ್ವಾಮಿ ಮುಂದಿನ ಸಿಎಂ?

ವ್ಯಾಪಾರದಲ್ಲಿ ಲಾಭ ನಷ್ಟ ಏರುಪೇರು, ರೈತರು ಈ ಬಾರಿ ಸಾಧಾರಣ ಮಳೆ, ರಾಜಕೀಯವಾಗಿ ಪಕ್ಷ ಒಡೆಯುವ ಸಂಭವ ಹೀಗೆ ಚರ್ಚೆಗಳು ಅರ್ಥಗಳು ನಡೆದಿವೆ.

ಏನಿದರ ನಿಜವಾದ ಅರ್ಥ

ಏನಿದರ ನಿಜವಾದ ಅರ್ಥ

ಗೊರವಪ್ಪನ ಕಾರ್ಣಿಕ ಭವಿಷ್ಯ,'ಆಕಾಶ ಗಿಡಕ್ಕೆ ಗಿಣಿ ಕಿತ್ತಿತ್ತಲೆ ಪರಾಕ್‌' ಅರ್ಥ: ಆಕಾಶದಂತಿರುವ ಎರಡು ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದ ಅಧಿಕಾರ ಸಿಕ್ಕಿಲ್ಲ. ಬದಲಿಗೆ ಗಿಳಿಯಂತಿರುವ ಹಸಿರು ಬಣ್ಣದ ಸಣ್ಣ ಪಕ್ಷ ಜೆಡಿಎಸ್‌ಗೆ ಅಧಿಕಾರ ಸಿಕ್ಕಿದೆ ಎಂದು ವೆಂಕಪ್ಪ ಒಡೆಯರ್ ವಿಶ್ಲೇಷಿಸಿದ್ದಾರೆ.

ಈ ಹಿಂದೆ ಸಹ ಗೊರವಪ್ಪ ಹೇಳಿರುವ ಕಾರ್ಣಿಕಗಳು ಸತ್ಯವಾಗಿದ್ದು, ಇದು ಶ್ರೀಕ್ಷೇತ್ರದ ಮಹಿಮೆಯಾಗಿದೆ ಎಂದು ಒಡೆಯರ್ ಹೇಳಿದ್ದಾರೆ.

ಗೊರವಯ್ಯ ನುಡಿಯುವ ಭವಿಷ್ಯ

ಗೊರವಯ್ಯ ನುಡಿಯುವ ಭವಿಷ್ಯ

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ನೈಋತ್ಯಕ್ಕಿರುವ ಮೈಲಾರ ಲಿಂಗೇಶ್ವರ ದೇವಾಲಯಕ್ಕೆ ಶತ ಶತಮಾನಗಳ ಇತಿಹಾಸವಿದೆ. ತುಂಗಭದ್ರಾ ನದಿ ತಟದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಈ ದೇವಾಲಯದಲ್ಲಿ ಶಿವನನ್ನು ಆರಾಧಿಸಲಾಗುತ್ತದೆ. ಕುರುಬ ಗೌಡ ಸಮುದಾಯದರು ಆರಾಧಿಸುವ ಈ ಶಿವನ ಸನ್ನಿಧಿಯಲ್ಲಿ ನಡೆಯುವ ವಾರ್ಷಿಕ ಕಾರ್ಣಿಕೋತ್ಸವ ಜಗತ್ಪ್ರಸಿದ್ದ. ಹಾಗೇ, ಒಂದೇ ವಾಕ್ಯದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೂಡಾ ಅಷ್ಟೇ ಹೆಸರುವಾಸಿ.

ಒಂದು ವಾಕ್ಯದ ಭವಿಷ್ಯವನ್ನು ನುಡಿಯುತ್ತಾನೆ

ಒಂದು ವಾಕ್ಯದ ಭವಿಷ್ಯವನ್ನು ನುಡಿಯುತ್ತಾನೆ

ಭವಿಷ್ಯವಾಣಿ ನುಡಿಯುವ ಕಾರ್ಣಿಕೋತ್ಸವದ ಮೊದಲು ಗೊರವಯ್ಯ ಒಂಬತ್ತು ದಿನಗಳ ಕಟ್ಟುನಿಟ್ಟಿನ ಉಪವಾಸ, ಜಪ, ತಪದಲ್ಲಿರುತ್ತಾನೆ. ತದನಂತರ ಕ್ಷೇತ್ರದ ಧರ್ಮದರ್ಶಿ ಯವರೊಂದಿಗೆ ಮತ್ತು ವಿಜಯನಗರದ ಅರಸರು ಅರ್ಪಿಸಿದ್ದ ಮೂರ್ತಿಯೊಂದಿಗೆ ಕುದುರೆ ಏರಿ ಡಂಕನಮರಡಿ ಎನ್ನುವ ಸ್ಥಳಕ್ಕೆ ಬರುತ್ತಾರೆ. ಅಲ್ಲಿ ಧರ್ಮದರ್ಶಿಗಳಿಂದ ಬಂಡಾರದ ಆಶೀರ್ವಾದ ಪಡೆದು ಕ್ಷೇತ್ರದ ಪರಂಪರೆಯಂತೆ 15 ಅಡಿ ಎತ್ತರದ ಬಿಲ್ಲುಗಂಬವನ್ನು ಸರ ಸರನೇರಿ, ಆಕಾಶವನ್ನು ನೋಡುತ್ತಾ ಒಂದು ವಾಕ್ಯದ ಭವಿಷ್ಯವನ್ನು ನುಡಿಯುತ್ತಾನೆ.

ಮೈಲಾರ ಲಿಂಗ ಕ್ಷೇತ್ರ ತಲುಪುವುದು ಹೇಗೆ?

ಮೈಲಾರ ಲಿಂಗ ಕ್ಷೇತ್ರ ತಲುಪುವುದು ಹೇಗೆ?

ಬಳ್ಳಾರಿ ಜಿಲ್ಲೆ ಹಡಗಲಿಗೆ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಸ್ ಸೌಕರ್ಯವಿದೆ. ಹಡಗಲಿಯಿಂದ ಈ ಕ್ಷೇತ್ರಕ್ಕೆ 40 ಕಿ.ಮೀ ಹಾಗೂ ರಾಣೆ ಬೆನ್ನೂರಿನಿಂಡ 34 ಕಿ.ಮೀ ಆಗುತ್ತದೆ. ಗೊರವ ಸಮುದಾಯದ ಅಧಿದೇವತೆ ಪರಮ ಶಿವನನ್ನು ಇಲ್ಲಿ ಮೈಲಾರ ಲಿಂಗರೂಪಿಯಾಗಿ ಪೂಜಿಸಲಾಗುತ್ತದೆ. ಕಂಬಳಿ ಹೊದ್ದು, ಢಮರುಗ ಹಿಡಿದು ಹಣೆಯಲ್ಲಿ ಭಂಡಾರ ತೊಟ್ಟು ಮೈಲಾರಿ ವೇಷಧಾರಿಯಾಗಿ ಶಿವನನ್ನು ಪೂಜಿಸಲಾಗುತ್ತದೆ. ಮಲ್ಲಾಸುರ, ಮಣಿಕಾಸುರನನ್ನು ಮೈಲಾರ ರೂಪದಲ್ಲಿ ಅವತರಿಸಿದ ಶಿವ ಕೊಂದು ಹಾಕಿದ್ದು ಪೌರಣಿಕ ಕಥೆಗಳಲ್ಲಿ ಓದಬಹುದು.

English summary
Karnataka Election Reuslts 2018 : Mylara Lingeshwara Annual Karnika Utsava and Utterance Predication has come true said Temple administration's official statement. Karnikotsava is annual fair in Mylara Lingeshwara Temple in Hoovina Hadagali Taluk, Bellary District, Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X