Kendra Trikona Yoga 2025: ಕೇಂದ್ರ ತ್ರಿಕೋನ ರಾಜಯೋಗ- ಈ ರಾಶಿಗಳಿಗೆ ಸಂಪತ್ತಿನ ದೇವತೆಯ ಆಶೀರ್ವಾದಿಂದ ಸಕಲೈಶ್ವರ್ಯ
ವೈದಿಕ ಜ್ಯೋತಿಷ್ಯದ ಪ್ರಕಾರ ಒಂಬತ್ತು ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ಅವುಗಳಿಂದ ರೂಪುಗೊಳ್ಳುವ ಯೋಗಗಳು ಮಾನವ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಒಂಬತ್ತು ಗ್ರಹಗಳಲ್ಲಿ ಶುಕ್ರನನ್ನು ರಾಕ್ಷಸರ ಗುರು ಎಂದು ಪರಿಗಣಿಸಲಾಗುತ್ತದೆ. ಈ ಶುಕ್ರ ಗ್ರಹ ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತದೆ.
ಶುಕ್ರ ಗ್ರಹ ವೃಷಭ ಮತ್ತು ತುಲಾ ರಾಶಿಗಳ ಅಧಿಪತಿಯಾಗಿದ್ದು, ಸೌಂದರ್ಯ, ಐಷಾರಾಮಿ, ಪ್ರೀತಿ, ಸಂಪತ್ತು, ಸಮೃದ್ಧಿ ಮತ್ತು ವೈವಾಹಿಕ ಜೀವನಕ್ಕೆ ಕಾರಣವಾದ ಅಂಶವಾಗಿದೆ. ಈಗ ಶುಕ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದೆ. ಶುಕ್ರ ಮೇ 31ರಂದು ಮಂಗಳನ ಮೇಷ ರಾಶಿಯನ್ನು ಪ್ರವೇಶಿಸುತ್ತದೆ. ಜೂನ್ನಲ್ಲಿ ವೃಷಭ ರಾಶಿಯನ್ನು ಪ್ರವೇಶಿಸುತ್ತದೆ. ಶುಕ್ರ ವೃಷಭ ರಾಶಿಗೆ ಹೋಗುವುದು ಸ್ವಲ್ಪ ವಿಶೇಷ.
ಜೂನ್ ನಲ್ಲಿ ವೃಷಭ ರಾಶಿಗೆ ಪ್ರವೇಶಿಸುವ ಶುಕ್ರನು ಕೇಂದ್ರ ತ್ರಿಕೋನ ರಾಜಯೋಗವನ್ನು ರೂಪಿಸುತ್ತಾನೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಕಂಡುಬರಲಿದೆ. ಈ ರಾಜಯೋಗ ಕೆಲವು ರಾಶಿಗಳಿಗೆ ಅದೃಷ್ಟವನ್ನು ತರುತ್ತದೆ. ಒಂದು ವರ್ಷದ ನಂತರ ಶುಕ್ರನಿಂದ ರೂಪುಗೊಂಡ ಕೇಂದ್ರ ತ್ರಿಕೋನ ರಾಜಯೋಗದಿಂದಾಗಿ ಯಾವ ರಾಶಿಗಳು ಅದೃಷ್ಟಶಾಲಿಯಾಗುತ್ತವೆ ಎಂಬುದನ್ನು ಈಗ ನೋಡೋಣ.

ವೃಷಭ ರಾಶಿ
ಕೇಂದ್ರ ತ್ರಿಕೋನ ರಾಜಯೋಗ ವೃಷಭ ರಾಶಿಯವರಿಗೆ ಹೆಚ್ಚಿನ ಲಾಭವನ್ನು ನೀಡಲಿದೆ. ಏಕೆಂದರೆ ಶುಕ್ರ ಗ್ರಹ ವೃಷಭ ರಾಶಿಯ ಮೊದಲ ಮನೆಗೆ ಹೋಗುತ್ತದೆ. ಇದು ವೃಷಭ ರಾಶಿಯ ಎಲ್ಲಾ ಯೋಜಿತ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುವುದನ್ನು ಖಚಿತಪಡಿಸುತ್ತದೆ.
ವೃಷಭ ರಾಶಿಯವರು ಈ ಸಮಯದಲ್ಲಿ ವ್ಯಕ್ತಿತ್ವದಲ್ಲಿ ಉತ್ತಮ ಪ್ರಗತಿ, ವಿವಾಹಿತರು ಸಂತೋಷದ ಜೀವನವನ್ನು ಕಾಣಲಿದ್ದಾರೆ. ನಿಮ್ಮ ಜೀವನ ಸಂಗಾತಿಯೂ ಸಹ ಉತ್ತಮ ಪ್ರಗತಿಯನ್ನು ಕಾಣುತ್ತಾರೆ. ಅವಿವಾಹಿತರಿಗೆ ಒಳ್ಳೆಯ ವರ ಸಿಗಲಿದ್ದಾನೆ. ಜೀವನದಲ್ಲಿ ಐಷಾರಾಮಿ ಮತ್ತು ಸೌಕರ್ಯಗಳು ಹೆಚ್ಚಾಗುತ್ತವೆ. ಕೆಲಸದ ಸ್ಥಳದಲ್ಲಿ ಗೌರವ ಮತ್ತು ಘನತೆ ಹೆಚ್ಚಾಗುವುದು. ಕೆಲವರಿಗೆ ಬಡ್ತಿ ಕೂಡ ಸಿಗಬಹುದು.

ಸಿಂಹ ರಾಶಿ
ಕೇಂದ್ರ ತ್ರಿಕೋನ ರಾಜಯೋಗ ಸಿಂಹ ರಾಶಿಯವರಿಗೆ ಅದೃಷ್ಟವನ್ನು ತರಲಿದೆ. ಶುಕ್ರನ ಕೃಪೆಯಿಂದಾಗಿ ಕೆಲಸ ಮಾಡುವವರು ಕೆಲಸದಲ್ಲಿ ಉತ್ತಮ ಯಶಸ್ಸನ್ನು ಸಾಧಿಸುತ್ತಾರೆ. ಬಡ್ತಿಯ ಅವಕಾಶವಿದೆ. ಉದ್ಯಮಿಗಳು ಬಹಳಷ್ಟು ಹಣವನ್ನು ಉಳಿಸಲಿದ್ದಾರೆ. ವ್ಯವಹಾರದಲ್ಲಿ ನಿಮಗೆ ಹಲವು ಪಟ್ಟು ಹೆಚ್ಚಿನ ಲಾಭ ಸಿಗುತ್ತದೆ.
ಉದ್ಯೋಗಿಗಳಿಗೆ ಅಪೇಕ್ಷಿತ ವರ್ಗಾವಣೆ ಸಿಗಬಹುದು. ಉದ್ಯಮಿಗಳು ಹೊಸ ಯೋಜನೆಗಳಿಂದ ಉತ್ತಮ ಲಾಭ ಗಳಿಸುತ್ತಾರೆ. ತಂದೆಯೊಂದಿಗಿನ ಸಂಬಂಧ ಬಲಗೊಳ್ಳುತ್ತದೆ. ಕೆಲಸದಲ್ಲಿ ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ನಿಮಗೆ ಅವಕಾಶ ಸಿಗುತ್ತದೆ. ಈ ಅವಕಾಶ ಕಚೇರಿಯಲ್ಲಿ ಉನ್ನತ ಸ್ಥಾನವನ್ನು ಸಾಧಿಸಲು ನಿಮಗೆ ಸಹಾಯ ಮಾಡುತ್ತದೆ.

ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಕೇಂದ್ರ ತ್ರಿಕೋನ ರಾಜಯೋಗ ಅತ್ಯುತ್ತಮ ಫಲಿತಾಂಶಗಳನ್ನು ನೀಡಲಿದೆ. ಇದಲ್ಲದೆ ಈ ರಾಜಯೋಗದ ಮೂಲಕ ಅದೃಷ್ಟ ಹೊಳೆಯಲಿದೆ, ಸಂಪತ್ತು ವೃದ್ಧಿಯಾಗುತ್ತದೆ. ವಿದೇಶ ಪ್ರಯಾಣ ಮಾಡುವ ಅವಕಾಶಗಳು ದೊರೆಯಲಿವೆ. ಪ್ರೇಮ ಸಂಬಂಧಿ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಮನೆಯಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಸುಧಾರಣೆ ಕಂಡುಬರುವ ಸಾಧ್ಯತೆ ಇದೆ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿಯನ್ನು ನೀವು ನೋಡಬಹುದು. ಶುಭ ಸಮಾರಂಭಗಳಲ್ಲಿ ನೀವು ಹೆಚ್ಚಾಗಿ ಭಾಗವಹಿಸುವಿರಿ. ಪ್ರಮುಖ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ನಮ್ಮ ಏಕೈಕ ಉದ್ದೇಶ ಮಾಹಿತಿಯನ್ನು ಒದಗಿಸುವುದು. ಯಾವುದೇ ಮಾಹಿತಿ ಕಾರ್ಯಗತಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)
-
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications