ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ, ದೇಶದಲ್ಲಿ ದಂಗೆ: ಭವಿಷ್ಯವಾಣಿ

ಕೊರೊನಾ ಮೊದಲನೇ, ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ, ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ.

ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು.

ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಗಬಹುದು ಎನ್ನುವುದಕ್ಕೂ ಸಿನ್ಹಾ ಉತ್ತರ ನೀಡಿದ್ದರು. ಜೂನ್ 14ರ ವರೆಗೆ ಅವರ ಜಾತಕಫಲ ಸರಿಯಾಗಿರಲಿಲ್ಲ. ಆದರೂ, ಅವರು ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದೂ ಇವರು ಭವಿಷ್ಯ ನುಡಿದಿದ್ದರು.

ಈಗ ಮತ್ತೊಂದು ಭವಿಷ್ಯವನ್ನು ನುಡಿದಿರುವ ಸಿನ್ಹಾ, ಅಕ್ಟೋಬರ್ ತಿಂಗಳಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ ನಡೆಯಲಿದೆ. ಇದರಿಂದ, ದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.

 ರಾಜನೀತಿಯ ಕಾರಕ ಎಂದು ಕರೆಯಲ್ಪಡುವುದು ರಾಹು ರಾಶಿ

ರಾಜನೀತಿಯ ಕಾರಕ ಎಂದು ಕರೆಯಲ್ಪಡುವುದು ರಾಹು ರಾಶಿ

ರಾಜನೀತಿಯ ಕಾರಕ ಎಂದು ಕರೆಯಲ್ಪಡುವುದು ರಾಹು ರಾಶಿ. ಭಾರತದ ರಾಜಕೀಯದಲ್ಲಿ ಬಹಳದೊಡ್ಡ ಮಟ್ಟದಲ್ಲಿ ಪರಿವರ್ತನೆಯಾಗಲಿದೆ. ಸೆಪ್ಟಂಬರ್ ಹದಿನಾಲ್ಕರ ನಂತರ ಈ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಬದಲಾವಣೆಯನ್ನು ರಾಜಕೀಯ ಭೂಕಂಪ ಎಂದು ಕರೆಯಬಹುದು ಎಂದು ಕೆ.ಎಂ.ಸಿನ್ಹಾ, ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಹೇಳಿದ್ದಾರೆ.

 ಕೇಜ್ರಿವಾಲ್ ಅವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಲಿದೆ

ಕೇಜ್ರಿವಾಲ್ ಅವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಲಿದೆ

ಮಿಥುನ ರಾಶಿಗೆ ರಾಹು ಪ್ರವೇಶಿಸಿಯಾಗಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲಿ ಚುನಾವಣೆಯನ್ನು ಗೆಲ್ಲಲಿದೆ. ಕೇಜ್ರಿವಾಲ್ ಅವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಲಿದೆ. ಸೆಪ್ಟಂಬರ್ ಹದಿನಾಲ್ಕರಿಂದ ಡಿಸೆಂಬರ್ ಅಂತ್ಯದವರೆಗೆ ಅತಿಕೆಟ್ಟ ರಾಜಕೀಯಕ್ಕೆ ಭಾರತೀಯರು ಸಾಕ್ಷಿಯಾಗಬೇಕಿದೆ ಎಂದು ಸಿನ್ಹಾ ತಮ್ಮ ಭವಿಷ್ಯದಲ್ಲಿ ನುಡಿದಿದ್ದಾರೆ.

 ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ

ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ

ಅಕ್ಟೋಬರ್ ಹನ್ನೊಂದರಂದು ರಾಷ್ಟ್ರ ನಾಯಕರೊಬ್ಬರ ಹತ್ಯೆಯಾಗಲಿದೆ, ಇವರು ರಾಜಕೀಯದಲ್ಲಿ ಅತ್ಯಂತ ಚಿರಪರಿಚಿತ ಮುಖಂಡರಾಗಿರುತ್ತಾರೆ. ಇದರಿಂದ ಇಡೀ ದೇಶದಲ್ಲಿ ಭಯದ ವಾತಾವರಣವಿರಲಿದೆ, ದಂಗೆಯೂ ನಡೆಯಲಿದೆ. ಆದರೆ ಈ ನಾಯಕ ಪ್ರಧಾನಿ ಮೋದಿಯಲ್ಲ ಎಂದು ಸಿನ್ಹಾ ಭವಿಷ್ಯ ನುಡಿದಿದ್ದಾರೆ.

Recommended Video

    ಇಂಗ್ಲೆಂಡಿನ ಕೋಟ್ಯಧಿಪತಿ ಉದ್ಯಮಿ ರಿಚರ್ಡ್ ಬ್ರಾನ್ಸನ್ ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದು ಹೀಗೆ! | Oneindia
     ಅಕ್ಟೋಬರ್ ಹನ್ನೊಂದರಂದು ರಾಷ್ಟ್ರ ನಾಯಕರೊಬ್ಬರ ಹತ್ಯೆಯಾಗಲಿದೆ

    ಅಕ್ಟೋಬರ್ ಹನ್ನೊಂದರಂದು ರಾಷ್ಟ್ರ ನಾಯಕರೊಬ್ಬರ ಹತ್ಯೆಯಾಗಲಿದೆ

    ಮೇದಿನಿ ಭವಿಷ್ಯದ ಪ್ರಕಾರ, ಷಡ್ಯಂತ್ರದ ಮೂಲಕ ಜನಪ್ರಿಯ ನಾಯಕನ ಹತ್ಯೆಯಾಗಲಿದೆ. ಆರ್ ಅಥವಾ ಎಸ್ ನಿಂದ ಆರಂಭವಾಗುವ ಮುಖಂಡರಿಗೆ ತೊಂದರೆಯಾಗಲಿದೆ. ಕೆಟ್ಟ ರಾಜಕೀಯದ ಪರಮಾವಧಿಯನ್ನು ಇದಾದ ನಂತರ ನೋಡಬಹುದಾಗಿದೆ ಎಂದು ಸಿನ್ಹಾ ಹೇಳಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+