Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ
ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ಪ್ರಮುಖ ಸ್ಥಾನವಿದೆ. ಮನೆ ಮತ್ತು ಸುತ್ತಮುತ್ತಲಿನ ವಾತಾವರಣ ಸರಿಯಾಗಿದ್ದರೆ, ಜೀವನದಲ್ಲಿ ಶಾಂತಿ, ಸಮೃದ್ದಿ ಮತ್ತು ಆರ್ಥಿಕ ಸ್ಥಿತಿ ಬರುತ್ತದೆ ಎಂದು ನಂಬಿಕೆ ಇದೆ. ಇಂದಿನ ದಿನಗಳಲ್ಲಿ ಹಲವರು ಎಷ್ಟು ಹಣ ಸಂಪಾದಿಸಿದರು ಅದು ಉಳಿಯುವುದಿಲ್ಲ, ಎನ್ನುವ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ವಾಸ್ತು ಶಾಸ್ತ್ರದ ಕೆಲವು ಸರಳ ಉಪಾಯಗಳನ್ನು ನಾವು ಅಳವಡಿಸಿಕೊಳ್ಳುವುದು ಉತ್ತಮ ಎಂದು ವಾಸ್ತು ತಜ್ಞರ ಹೇಳುತ್ತಾರೆ. ಇದಕ್ಕೆ ಪೂರಕವಾಗುವ ಹಾಗೆ ಮಂಗಳವಾರ ಮತ್ತು ಶುಕ್ರವಾರ ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಡುವುದು ಶುಭ ಎಂದು ಹೇಳಲಾಗುತ್ತದೆ. ಈ ದಿನಗಳು ದೇವತೆಗಳಿಗೆ ಸಂಬಂಧಿಸಿದ ಶುಭಕರವಾದ ದಿನ ಎಂದು ಪರಿಗಣಿಸಲಾಗುತ್ತದೆ. ವಿಶೇಷವಾಗಿ ಲಕ್ಷ್ಮಿ ದೇವಿಯ ಅನುಗ್ರಹದಿಂದ ಹಣ ಉಳಿಸಲು ಸಾಧ್ಯಾವಾಗುತ್ತದೆ ಎಂದು ನಂಬಲಾಗಿದೆ.
ಮನೆಯ ಉತ್ತರ ದಿಕ್ಕು
ಇನ್ನು ಮನೆಯ ವಾಸ್ತು ಶಾಸ್ತ್ರ ನೋಡುವುದಾದರೆ ಮನೆಯ ಉತ್ತರ ದಿಕ್ಕು ಸಂಪತ್ತಿನ ದಿಕ್ಕು ಎಂದು ಹೇಳಲಾಗುತ್ತದೆ. ಆದ್ದರಿಂದ ಕುಬೇರನ ಪೋಟೋ ಇಡುವುದು ಒಳ್ಳೆಯದು ಎಂದು ಎಂಬ ನಂಬಿಕೆ. ಕುಬೇರನು ಸಂಪತ್ತಿನ ಅಧಿಪತಿ ಎಂಬ ನಂಬಿಕೆ. ಈ ಕ್ರಮದಿಂದ ನಮ್ಮ ಆರ್ಥಿಕ ಸ್ಥಿತಿಯು ಸುಧಾರಿಸಲು ಸಹಾಯವಾಗುತ್ತದೆ ಎಂದು ತಜ್ಙರ ಅಭಿಪ್ರಾಯ ಆಗಿದೆ.

ಹಣವನ್ನು ಇಡುವ ಲಾಕರ್ ಅಥವಾ ಕಬ್ಬಿಣದ ಕಪಾಟುನ್ನು ನೈಋತ್ಯ ಮೂಲೆಯಲ್ಲಿ ಇಡುವುದು ಉತ್ತಮ. ಅದರ ಬಾಗಿಲು ಉತ್ತರ ದಿಕ್ಕಿಗೆ ತೆರೆಯುವಂತೆ ಇಟ್ಟರೆ ಸಂಪತ್ತು ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ.
ಹಣವನ್ನು ಇಡುವ ಲಾಕರ್ ನೇರವಾಗ ನೇಲಕ್ಕೆ ತಾಕವುಂತೆ ಇಡಬಾರದು, ಅದಕ್ಕೆ ಮರದ ಸ್ಟೂಲ್ ಅಥವಾ ಪಟ್ಟಿಯನ್ನು ಇಡುವುದು ಉತ್ತಮ. ಇದು ನಕಾರತ್ಮಕ ಶಕ್ತಿಯನ್ನು ದೂರ ಮಾಡುತ್ತದೆ ಎಂದು ವಾಸ್ತು ಹೇಳುತ್ತದೆ.
ಮನೆಯ ಈಶಾನ್ಯ ದಿಕ್ಕು
ಮನೆಯ ಈಶಾನ್ಯ ದಿಕ್ಕು ಯಾವಾಗಲೂ ಸ್ವಚ್ಚವಾಗಿ ಮತ್ತು ಖಾಲಿಯಾಗಿ ಇಡಬೇಕು. ಇಲ್ಲಿ ಭಾರವಾಗಿರುವ ವಸ್ತುಗಳನ್ನು ಇಡುವುದನ್ನು ತಪ್ಪಿಸಬೇಕು. ಈ ದಿಕ್ಕಿನಲ್ಲಿ ನೀರಿನ ಪಾತ್ರೆ ಅಥವಾ ಸಣ್ಣ ಕಾರಂಜಿ ಇಡುವುದುದರಿಂದ ಸಕಾರತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದಲ್ಲದೆ ಉತ್ತರ ದಿಕ್ಕನ್ನು ನೀಲಿ ಬಣ್ಣದಲ್ಲಿ ಅಲಂಕರಿಸುವುದು ಅಥವಾ ಹಣದ ಗಿಡ (ಮನಿ ಪ್ಲಾಂಟ್) ಬೆಳೆಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಉತ್ತರ ಗೋಡೆಯ ಮೇಲೆ ಕುಬೇರನ ಯಂತ್ರ ಅಥವಾ ಗಜಲಕ್ಷ್ಮಿ ರೂಪದ ಲಕ್ಷ್ಮಿ ದೇವಿಯ ಪೋಟೋವನ್ನು ಇಡುವುದರಿಂದ ಆದಾಯದ ಮೂಲಗಳು ಹೆಚ್ಚಾಗುತ್ತವೆ ಎಂಬ ನಂಬಿಕೆ ಇದೆ.
ಈ ರೀತಿಯ ಸರಳ ವಾಸ್ತು ಶಾಸ್ತ್ರದ ಉಪಾಯಗಳನ್ನು ಅನುಸರಿಸುವುದರಿಂದ ಹಣಕಾಸಿನ ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.
-
Vastu Tips: ಅಡುಗೆಮನೆಯಲ್ಲಿ ಪೂಜೆ ಮಾಡಬಹುದೇ? ಇಲ್ಲಿದೆ ವಾಸ್ತು ತಜ್ಞರ ಸ್ಪಷ್ಟ ಉತ್ತರ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ














Click it and Unblock the Notifications