Get Updates
Get notified of breaking news, exclusive insights, and must-see stories!

ಅಕ್ಷಯ ತೃತೀಯದ ಬಗ್ಗೆ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯರಿಂದ ವಿವರಣೆ

ಇದೇ ಮೇ 7ನೇ ತಾರೀಕು, ಮಂಗಳವಾರ ಅಕ್ಷಯ ತೃತೀಯ. ವೈಶಾಖ ಶುಕ್ಲ ತೃತೀಯವು ರೋಹಿಣಿ ನಕ್ಷತ್ರಯುಕ್ತವಾಗಿ, ಬುಧವಾರವೂ ಆಗಿಬಂದರೆ ಇದಕ್ಕಿಂತ ಪುಣ್ಯ ಕಾಲ ಬೇರಾವುದೂ ಇಲ್ಲ ಎಂದು ಧರ್ಮಶಾಸ್ತ್ರದ ವಚನ‌. ಇದರ ಮಹತ್ವವೇ ಸಪಾತ್ರರಿಗೆ ದಾನ ಮಾಡುವುದು, ಪಿತೃಗಳಿಗೆ ಪಿತೃ ಕಾರ್ಯ ಮಾಡುವಂತದ್ದಾಗಿರುತ್ತದೆ.

ನಿರ್ಣಯ ಸಿಂಧು ಮುಂತಾದ ಧರ್ಮಗ್ರಂಥಗಳಲ್ಲಿ ತಿಳಿಸಿದ ಪ್ರಕಾರ ವ್ರತಾಚರಣೆ ಮಾಡಲು ಈ ಕಲಿಯುಗದಲ್ಲಿ ಅಸಾಧ್ಯವಾದರೂ,ಈ ಅಕ್ಷಯ ತೃತೀಯದ ಮಹತ್ವವನ್ನಾದರೂ ತಿಳಿದುಕೊಂಡಾಗಲೂ ಧರ್ಮ ಕಾರ್ಯ ಮಾಡಿದ ತೃಪ್ತಿ ಸಿಗಬಹುದು.

ಅಕ್ಷಯ ಎಂಬುದೇ ಒಂದು ಮಹಾ ತಿಳಿವಳಿಕೆ ಕೊಡುತ್ತದೆ. ಕ್ಷಯ ಇಲ್ಲದ್ದೇ ಅಕ್ಷಯವಲ್ಲವೇ? ವೈಶಾಖ ಶುದ್ಧ ತೃತೀಯವು ಸೋಮವಾರ ರೋಹಿಣಿ ಸಹಿತ, ಬುಧವಾರ ರೋಹಿಣಿ ಸಹಿತ ಬಂದದ್ದೇ ಆದರೆ ಅಂತಹ ದಿವಸದಲ್ಲಿ ಪಿತೃಗಳಿಗೆ ಪಿಂಡ ಪ್ರಧಾನ ಮಾಡಿದರೆ ಅಥವಾ ಪಿಂಡ ರಹಿತ ಶ್ರಾದ್ಧವಾದರೂ ಮಾಡಿದರೆ ಅಥವಾ ಪಿತೃಗಳಿಗೆ ತಿಲ ತರ್ಪಣವನ್ನಾದರೂ ಕೊಟ್ಟರೆ ಒಳ್ಳೆಯದು.

ಅದೂ ಅಸಾಧ್ಯವಾದರೆ ಪಿತೃಗಳಿಗೆ ಜಲ ತರ್ಪಣ ನೀಡಿದರೂ ಅವರಿಗೆ ಅಕ್ಷಯ ಪುಣ್ಯಲೋಕ ಪ್ರಾಪ್ತಿಯಾಗುತ್ತದೆ ಮತ್ತು ಈ ಕಾರ್ಯ ಮಾಡಿದವರ ಮಡಿಲಿಗೆ ಮತ್ತೆ ಆ ಪಿತೃಗಳು ಉತ್ತಮ ಸಂತತಿಯನ್ನೂ ನೀಡುತ್ತಾರೆ. ದೇವರಿಗೆ, ಪಿತೃ ದೇವತೆಗಳಿಗೆ, ಫಲ ಬರುವ ವೃಕ್ಷಗಳಿಗೆ ಸೇವೆ ನೀಡಿದರೆ ಅವರೆಂದೂ ಋಣ ಇಟ್ಟುಕೊಳ್ಳುವವರಲ್ಲ.ಅದರ ಫಲವನ್ನು ಕೊಟ್ಟೇ ಕೊಡುತ್ತಾರೆ.

ದೇವತಾ ಕಾರ್ಯ, ಪಿತೃ ಕಾರ್ಯ ಮಾಡಿದರೆ ಶ್ರೇಷ್ಠ

ದೇವತಾ ಕಾರ್ಯ, ಪಿತೃ ಕಾರ್ಯ ಮಾಡಿದರೆ ಶ್ರೇಷ್ಠ

ಯಾರಲ್ಲಿ ನಿಸ್ವಾರ್ಥತೆ ಇರುವುದೋ ಅವರು ಯಾವ ಪೂಜನೆಯನ್ನೂ ಬಯಸುವುದಿಲ್ಲ ಮತ್ತು ಪೂಜಿಸಿದವರಿಗೆ ಫಲ ಕೊಡದೆ ಇರುವುದೂ ಇಲ್ಲ. ಉದಾಹರಣೆಗೆ ಭೂಮಿಯನ್ನು ಸ್ವಚ್ಛ ಮಾಡಿದರೆ ಅದರ ಫಲ, ಅದು ನೀಡುವ ಶುದ್ಧ ವಾತಾವರಣ ನಮಗಲ್ಲದೆ ಇನ್ಯಾರಿಗೆ? ಒಬ್ಬ ಮಾಡಿದರೂ ಹಲವರಿಗೆ ಇದರ ಫಲ ಸಿಗುವಂತೆ, ಈ ಅಕ್ಷಯ ತೃತೀಯ ಪರ್ವ ಕಾಲದಲ್ಲಿ ದೇವತಾ ಕಾರ್ಯ, ಪಿತೃ ಕಾರ್ಯ, ದಾನ- ಧರ್ಮ ಮಾಡಿದರೆ ಅದರ ಸತ್ಫಲವು ಹಲವರಿಗಿರುತ್ತದೆ. ದೇವೀ ಪುರಾಣದಲ್ಲಿ ಈ ಅಕ್ಷಯ ತೃತೀಯದ ಆಚರಣೆಯನ್ನು ಹೇಳಿದೆ.

ಕಲಶ ದಾನ ಮಾಡಬೇಕು

ಕಲಶ ದಾನ ಮಾಡಬೇಕು

ಇದು ತ್ರೇತಾಯುಗಾರಂಭದ ದಿನವಾಗಿದ್ದು ಆ ದಿವಸ, |ತೃತೀಯಾಯಾಂ ತು ರೋಹಿಣ್ಯೃಕ್ಷೇಃ ಪ್ರಪೂಜ್ಯತು || ಉದಕುಂಭ ಪ್ರದಾನೇನ ಶಿವಲೋಕೇ ಮಹೀಯತೇ| ಏಷ ಧರ್ಮ ಘಟೋ ದತ್ತೋ ಬ್ರಹ್ಮ ವಿಷ್ಣು ಶಿವಾತ್ಮಕಃ | ಅಸ್ಯ ಪ್ರಧಾನಾತ್ತೃಪ್ಯಂತು ಪಿತರೋ sಪಿ ಪಿತಾಮಹಾಃ|| ಅಂದರೆ ಪಿತೃ ಕಾರ್ಯವನ್ನೂ ಮಾಡಿ ಉದಕುಂಭ (ಕಲಶ) ದಾನ ಮಾಡಿದರೆ ಆ ಕಡೆ ಪಿತೃಗಳಿಗೂ ಅಕ್ಷಯ ಪುಣ್ಯ ಲೋಕ, ಈ ಕಡೆ ಮಾಡಿದವರಿಗೂ ಅಕ್ಷಯ ಸಂಪತ್ತು ಬರುತ್ತದೆ. ಬ್ರಹ್ಮ ವಿಷ್ಣು ಮಹೇಶ್ವರರನ್ನು ಉದಕಕುಂಭದಲ್ಲಿ ಆವಾಹಿಸಿ, ದಾನ ಮಾಡು. ಇದು ಅತ್ಯಂತ ಪುಣ್ಯ ಪರ್ವಕಾಲ. ಎಂದು ತಿಳಿಸಿದೆ.

ನೀರು ದಾನಕ್ಕಿಂತ ಶ್ರೇಷ್ಠವಾದುದು ಮತ್ತೊಂದಿಲ್ಲ

ನೀರು ದಾನಕ್ಕಿಂತ ಶ್ರೇಷ್ಠವಾದುದು ಮತ್ತೊಂದಿಲ್ಲ

ವ್ಯಾವಹಾರಿಕವಾಗಿ ನೋಡಿದರೆ ಈ ಮೇ ತಿಂಗಳು ಯಾವಾಗಲೂ ಸುಡು ಬೇಸಿಗೆ. ನೀರಿಗೆ ಹಾಹಾಕಾರ. ಈ ಸಮಯದಲ್ಲಿ ಯಾರಿಗಾದರೂ, ಯಾವ ಪ್ರಾಣಿ- ಪಕ್ಷಿಗಳಿಗೆ ನೀರನ್ನು ಕೊಟ್ಟರೆ ಅದಕ್ಕಿಂತ ಪುಣ್ಯ ಬೇರೆ ಇಲ್ಲ. ನಮ್ಮ ಪುರಾತನರು ಪ್ರತೀ ದಿನದ ಮಹತ್ವವನ್ನರಿತೇ ವ್ರತಗಳ ಆಚರಣೆ, ದಾನ- ಧರ್ಮಗಳನ್ನು ಮಾಡಲು ಹೇಳಿದ್ದಾರೆ. ಅಕ್ಷಯ ತೃತೀಯದ ದಿನ ಮನೆಗೆ ಸುವರ್ಣ ತಂದರೆ ಸಂಪತ್ತು ಅಕ್ಷಯ ಆಗುತ್ತದೆ ಎಂದು ಆ ದಿನ ಚಿನ್ನವನ್ನು ವಿಕ್ರಯಿಸಲು ಓಡುತ್ತಾರೆ. ಆ ದಿನ ಚಿನ್ನ ತರಲಿ, ಬೇಡ ಅನ್ನಲ್ಲ. ಆದರೆ ಅದರ ಜತೆ ನೀರು ದಾನ ಮಾಡಿ. ಅಕ್ಷಯವಾದ ಪುಣ್ಯ ಸಿಗುತ್ತದೆ.

ವಿವಾಹಾದಿ ಮಂಗಳ ಕಾರ್ಯಕ್ಕೆ ಶುಭ ದಿನವಲ್ಲ

ವಿವಾಹಾದಿ ಮಂಗಳ ಕಾರ್ಯಕ್ಕೆ ಶುಭ ದಿನವಲ್ಲ

ಅಕ್ಷಯ ತೃತೀಯವು ಬಹಳ ಶುಭ ಮುಹೂರ್ತ, ಆ ದಿನ ಗೃಹ ಪ್ರವೇಶ, ಮದುವೆ- ಮುಂಜಿ ಮಾಡಿದರೆ ಉತ್ತಮ ಎಂಬ ಒಂದು ಚಿಂತನೆ ಜನರಲ್ಲಿದೆ. ಇದು ತಪ್ಪು ಕಲ್ಪನೆ. ಯಾವುದಕ್ಕೆ, ಯಾವ ಕಾಲ ಸೂಕ್ತ ಎಂದು ಮುಹೂರ್ತ ಚಿಂತಾಮಣಿಯಲ್ಲಿ ತಿಳಿಸಿದಂತೆ, ಅಕ್ಷಯ ತೃತೀಯಕ್ಕೆ ಅದರದ್ದೇ ಆದಂತಹ ಫಲಗಳಿದ್ದು, ದಾನ ಧರ್ಮಾದಿಗಳಿಗೇ ಇದು ಅಕ್ಷಯ ಪುಣ್ಯಕಾಲವೇ ಹೊರತು ವಿವಾಹಾದಿ ಮಂಗಳ ಕಾರ್ಯಕ್ಕೆ ಹೇಳಿದ ದಿವಸವಲ್ಲ. ಆದರೆ ಕೆಲವೊಮ್ಮೆ, ಕೆಲ ವರ್ಷಗಳಲ್ಲಿ ಈ ದಿನವೂ ಮುಹೂರ್ತ ಪ್ರಕಾರ ಇತರ ಕಾರ್ಯಗಳಿಗೂ ಉತ್ತಮ ಆಗುವುದಿದೆ. ಅಂತಹದ್ದೇನಾದರೂ ಬಂದರೆ ಅದಕ್ಕಿಂತ ಪುಣ್ಯ ಪರ್ವಕಾಲ ಇನ್ನೊಂದಿಲ್ಲ. ಯಾರಿಗೆ ಅಕ್ಷಯ ಪುಣ್ಯ ಪ್ರಾಪ್ತಿಗೆ ನಮ್ಮ ಉದ್ದೇಶ ಇರುತ್ತದೋ ಆಗ ಅದರ ಫಲದಲ್ಲಿ ನಮಗೂ ಅಕ್ಷಯ ಪುಣ್ಯ ಫಲ ಬಂದೇ ಬರುತ್ತದೆ. ಇದುವೇ ಈ ಮಹಾ ಪರ್ವಕಾಲವಾದ ಅಕ್ಷಯ ತೃತೀಯದ ಫಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+