ನಾಗರ ಪಂಚಮಿ ವಿಶೇಷ: ನಾಗಾರಾಧನೆಯಿಂದ ಸಂತತಿ ವೃದ್ಧಿ, ಮನೋ ನಿಯಂತ್ರಣ

ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯನ್ನು ನಾಗರ ಪಂಚಮಿ ಎಂದು ಆಚರಿಸುವುದು ಸನಾತನ ಧರ್ಮದಲ್ಲಿ ಒಂದು ಶಾಸ್ತ್ರೋಕ್ತ ಪದ್ಧತಿ. ಈ ವೈದಿಕ ವಿಜ್ಞಾನದ ಸಂಶೋಧನೆಯು ಮುಂದೆ ಶಾಸ್ತ್ರ ಸಂಪ್ರದಾಯವಾಗುತ್ತದೆ. ನಿರ್ಣಯ ಸಿಂಧು, ಧರ್ಮ ಸಿಂಧು ಗ್ರಂಥಗಳಲ್ಲಿ ಉಲ್ಲೇಖಿಸಿದಂತೆ ಪ್ರತಿ ದಿನಕ್ಕೂ ಅದರದ್ದೇ ಆದಂತಹ ಮಹತ್ವ ಇದೆ. ಇದನ್ನು ದಿನ ಕೃತ್ಯ ಎಂದರು.

ರವಿಯ ಯುತಿಯಿಂದ ಹೊರಟ ಚಂದ್ರನು ಹದಿನೈದನೆಯ ದಿನಕ್ಕೆ ತಲುಪುವುದನ್ನು ಪಾಡ್ಯಾದಿ ತಿಥಿಗಳ ಮೂಲಕ ಎಣಿಸಲಾಗುತ್ತದೆ. ಅಂದರೆ ಪ್ರತೀ ಹನ್ನೆರಡು ಡಿಗ್ರಿ ಅಂತರದಲ್ಲಿ ಒಂದು ತಿಥಿಯಾಗುತ್ತದೆ. 15x12ಡಿಗ್ರಿ= 180ಡಿಗ್ರಿ ಪೌರ್ಣಮಿಯೂ, ಮುಂದಿನ 180 ಡಿಗ್ರಿ ಅಂದರೆ 360 ಡಿಗ್ರಿಗೆ ಅಮಾವಾಸ್ಯೆಯೂ ಆಗುತ್ತದೆ.

ಹೀಗೆಯೇ ಪ್ರತೀ ತಿಂಗಳಿಗೆ ಒಂದೇ ತಿಥಿಯು ಶುಕ್ಲ ಮತ್ತು ಕೃಷ್ಣ ಪಕ್ಷಗಳ ತಿಥಿಯಾಗಿ ಎರಡು ಸಲ ಬರುತ್ತದೆ. ರವಿ- ಚಂದ್ರರ ಅಂತರದಲ್ಲಿ ವಾತಾವರಣದಲ್ಲಿ ಬದಲಾವಣೆಗಳೂ ಆಗುತ್ತಿರುತ್ತವೆ. ಇದರಲ್ಲಿ ಕೆಲವೊಂದು ಬದಲಾವಣೆಗಳು ಮಾತ್ರ ನಮ್ಮ ಅನುಭವಕ್ಕೆ ಬರಬಹುದಷ್ಟೆ. ಉಳಿದವುಗಳು ಅನುಭವಕ್ಕೆ ಬಾರದೆ ಇದ್ದರೂ ಪರಿಣಾಮಗಳು ಆಗಿಯೇ ಆಗುತ್ತವೆ.

Nagara Panchami special article by astrologer Prakash Ammannaya

ಇದರ ಸಂಶೋಧನೆ ಮಾಡಿದ ನಮ್ಮ ಋಷಿ-ಮುನಿಗಳು ಇಂತಹ ವಾತಾವರಣಕ್ಕೆ ಹೊಂದಿಕೊಳ್ಳಲು ವೃತ ನಿಯಮಗಳನ್ನು ಮಾಡಿ, ಆಯಾಯ ದೇವ- ದೇವತೆಗಳ ಆರಾಧನೆಗಳನ್ನು ಮಾಡತೊಡಗಿದರು. ಮತ್ತು ಮುಂದಿನ ಪೀಳಿಗೆಗಳಿಗೆ ನಿರ್ದೇಶನವನ್ನೂ ಕೊಟ್ಟರು.

ಈ ಪಂಚಮಿಯ ವಿಶೇಷ ಏನು?

ಶುಕ್ಲ ಪಂಚಮಿಯ ಬಳಿಕ ಚಂದ್ರ ಬಲಿಷ್ಠ, ಬಹುಳ ಪಂಚಮಿಯ ಬಳಿಕ ದುರ್ಬಲ ಆಗುತ್ತದೆ. ರವಿ- ಚಂದ್ರರ ಯುತಿಯು ಸನ್ನಿಕರ್ಷವೂ (ಅಮಾವಾಸ್ಯೆ); ಸಮ ಸಪ್ತಕವು ವಿಪ್ರಕರ್ಷವೂ (ಹುಣ್ಣಿಮೆ) ಆಗುತ್ತದೆ. ಕೃಷ್ಣ ಪಕ್ಷದಲ್ಲಿ ದೇವತೆಗಳು ಚಂದ್ರನ ಬಲವನ್ನು ಪಾನ (ಗ್ರಹಣ absorb) ಮಾಡುವುದರಿಂದ ಚಂದ್ರನು ಕ್ಷೀಣತ್ವಕ್ಕೂ, ಶುಕ್ಲ ಪಕ್ಷದಲ್ಲಿ ಚಂದ್ರನ ರಶ್ಮಿಗಳನ್ನು ಹೊರ ಹಾಕಿ, ಚಂದ್ರನ ವೃದ್ಧಿಯನ್ನು ಮಾಡುವ ಈ ಕ್ರಿಯೆಯನ್ನು ವೃದ್ಧಿ- ಕ್ಷೀಣ ಎಂದರು.

Nagara Panchami special article by astrologer Prakash Ammannaya

ಈ ಶುಕ್ಲ ಮತ್ತು ಕೃಷ್ಣ ಪಕ್ಷದ ತಿಥಿಗಳಿಗೆ ಅಭಿಮಾನಿ ದೇವತೆಗಳಿದ್ದಾರೆ. ಇದು ಕ್ರಮವಾಗಿ ಪಾಡ್ಯದಿಂದ ಹುಣ್ಣಿಮೆ, ಹುಣ್ಣಿಮೆಯಿಂದ ಅಮಾವಾಸ್ಯೆಯ ವರೆಗೆ ಅಗ್ನಿ, ಬ್ರಹ್ಮ, ಗೌರಿ, ಗಣಪತಿ, ಸರ್ಪ, ಗುಹ, ರವಿ, ಶಿವ, ದುರ್ಗಾ, ಯಮ, ವಿಶ್ವೇದೇವತೆಗಳು, ವಿಷ್ಣು, ಕಾಮ, ಈಶ್ವರ, ಚಂದ್ರ ಎಂಬ ಹದಿನೈದು ದೇವತೆಗಳ ಸಾನ್ನಿಧ್ಯ ಸೂಚಕ. ಇವರೇ ಕೃಷ್ಣ ಪಕ್ಷದ ತಿಥಿಗಳಿಗೂ ಅಧಿಪತಿಗಳಾಗಿರುತ್ತಾರೆ.

ಚಂದ್ರನು ಶೀತ ಕಾರಕ. ಮನಸ್ಸಿನ ಮೇಲೆ ಪರಿಣಾಮವನ್ನು ಬೀರುವ ಗ್ರಹ. ಅಲ್ಲದೆ ಸಾಗರದಲ್ಲಿ ಉಬ್ಬರ- ಇಳಿತಗಳಿಗೂ ಇವನೇ ಕಾರಣ. ಅಂತಹ ಚಂದ್ರ ಸ್ಥಿತಿಯ ಪಂಚಮಿ ಮತ್ತು ಷಷ್ಠಿ ತಿಥಿಗಳು ಸರ್ಪ ಮತ್ತು ಗುಹರಿಗೆ ಇಷ್ಟ ತಿಥಿಗಳು. ಎರಡೂ ನಾಗ ಸಂಬಂಧವೇ ಆಗುತ್ತದೆ.

Nagara Panchami special article by astrologer Prakash Ammannaya

ನಾಗಾರಾಧನೆ ಯಾಕೆ?

ನಾಗನು ಮನುಷ್ಯನೊಳಗಿರುವ ಕಾಮಾದಿ ಷಡ್ಗುಣಗಳನ್ನು ನಿಯಂತ್ರಿಸುವವನು. ಶುಕ್ಲದಲ್ಲಿ ಇದೇ ಗುಣಗಳು ಉದ್ದೀಪನಗೊಂಡರೆ, ಕೃಷ್ಣ ಪಕ್ಷದಲ್ಲಿ ಇದೇ ಗುಣಗಳಿಗೆ ಮಂಕು ಕವಿಯುತ್ತದೆ. ಇದರ ಸಮತೋಲನ ಕಾಪಾಡಲೆಂದೇ ಪಂಚಮಿ ಮತ್ತು ಷಷ್ಠಿ ತಿಥಿಗಳ ವ್ರತ- ನಿಯಮ ಇರುವುದಾಗಿದೆ.

ಮುಂದೆ ಪ್ರಜಾ ವೃದ್ಧಿಯಾದಂತೆ ಸಂಪತ್ತು ಹೆಚ್ಚುತ್ತದೆ. ಹಾಗೆಯೇ ಕಳ್ಳಕಾಕರ ಭಯವೂ ಹೆಚ್ಚಿತು. ಆಗ ಸಂಪತ್ತುಗಳನ್ನು ಭೂಮಿಯಲ್ಲಿ ಹುಗಿದಿಟ್ಟು ಬನಗಳ ನಿರ್ಮಾಣವೂ ಶುರುವಾಯಿತು. ಎಲ್ಲಿ ಭೂಮಿಯಲ್ಲಿ ನಿಧಿಗಳಿರುತ್ತದೋ ಅಲ್ಲಿ ಸರ್ಪ ಸಾನ್ನಿಧ್ಯ ಇರುವುದು ಒಂದು ಪ್ರಕೃತಿ ಸಹಜ. ಆಗ ಪ್ರಜೆಗಳು ಈ ಬನದೊಳಗೆ ನಾಗ ಶಿಲೆಯನ್ನಿಟ್ಟು ಪೂಜಿಸತೊಡಗಿದರು. ನಾಗದೇವರಿಗೆ ನಿಧಿರಕ್ಷಕ ಎಂಬ ಹೆಸರೂ ಇದೆ. ಮುಂದೆ ನಾಗಾಲಯಗಳಾದುವು.

Nagara Panchami special article by astrologer Prakash Ammannaya

ಇತ್ತೀಚೆಗಿನ ಸಂಶೋಧನೆಗಳ ಪ್ರಕಾರ ಸರ್ಪವು ಭೂಮಿಗೆ ಮಿತ್ರ. ನಿಧಿ ರಕ್ಷಕನಾಗಿ, ಹೆಚ್ಚು ಪ್ರಾಣವಾಯುವನ್ನು ವಾತಾವರಣಕ್ಕೆ ನೀಡುವವನೂ ಆಗಿರುತ್ತಾನೆ. ಈ ಕಾರಣಕ್ಕಾಗಿ ಸರ್ಪ ಸಂರಕ್ಷಣೆಗಾಗಿ ನಾಗಾರಾಧನೆ ಪ್ರಾರಂಭ ಆಯಿತು. ಪಂಚಮಿಯ ವ್ರತದ ನಾಗಾರಾಧನೆಯು ಮನೋಬಲ ನಿಯಂತ್ರಣಕ್ಕೂ, ಸಂತತಿ ವೃದ್ಧಿಗೂ, ರೋಗ ನಿರೋಧಕ ಶಕ್ತಿಗೂ ಆಗಿರುತ್ತದೆ.

ನಾಗಾರಾಧನೆ ಆ ದಿನ ಕೃತ್ಯದ ಅಭಿಮಾನಿ ದೇವರಾದ ನಾಗದೇವರ ಪ್ರೀತ್ಯರ್ಥವಾಗಿ ಮಾಡುವಂಥದ್ದಾಗಿದೆ. ಪ್ರತಿಯೊಬ್ಬರೂ ಈ ದಿನದ ಆಚರಣೆ ಮಾಡುವ ಮುನ್ನ ದಿನದ ಮಹತ್ವ ಅರಿತರೆ ಪೂರ್ಣ ಫಲ ಸಿಗುತ್ತದೆ ಮತ್ತು ಸರ್ಪಗಳ ಮೇಲಿನ ಪ್ರೀತಿ, ಪರಿಸರ ಪ್ರೇಮ, ಭಕ್ತಿ ಉಂಟಾಗುವುದರಲ್ಲಿ ಸಂಶಯವಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+