Narendra Modi: ಇಂದೇ ನರೇಂದ್ರ ಮೋದಿ ಪ್ರಮಾಣ ವಚನ ಯಾಕೆ: ಜೋತಿಷ್ಯ ವಿಶ್ಲೇಷಣೆ ಹೇಗಿದೆ..?
ಬೆಂಗಳೂರು, ಜೂನ್ 09: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ಜೂನ್ 09 ಭಾನುವಾರ ಸಂಜೆ 7.15ಕ್ಕೆ ಮೋದಿ ಪದಗ್ರಹಣ ನಡೆಯಲಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಿರುವ ಇಂದಿನ ದಿನ ಹೇಗಿದೆ. ಜೋತಿಷ್ಯದ ಪ್ರಕಾರ ಇಂದಿನ ದಿನ ವಿಶೇಷ ಹೇಗಿದೆ ಎನ್ನುವುದರ ಬಗ್ಗೆ ವಿವರಣೆ ಇಲ್ಲಿದೆ ಓದಿ.
ದೇಶದ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಇಂದಿನ ದಿನದ ವಿಶೇಷದ ಬಗ್ಗೆ ವೀಣಾರಾವ್ ವಿಶ್ಲೇಷಿಸಿದ್ದಾರೆ. ಈ ದಿನ ಜ್ಯೇಷ್ಠ ಮಾಸದ ಶುದ್ಧ ತದಿಗೆ ಪುನರ್ವಸು ನಕ್ಷತ್ರ. ಈ ದಿನ ಸಂಜೆ 7.15 ಕ್ಕೆ ವೃಶ್ಚಿಕ ಲಗ್ನದಲ್ಲಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭ ನಡೆಯುತ್ತಿದೆ.

ಈ ದಿನ ಭಾನುವಾರ ರಾಜರಿಗೆ ಒಳ್ಳೆಯದು. ಭಾನುವಾರದ ಅಧಿಪತಿ ಸೂರ್ಯ ಗ್ರಹಗಳ ರಾಜ. ಆದ್ದರಿಂದ ಈ ಮಹೂರ್ತಕ್ಕೆ ರಾಜಬಲ. ಮೋದಿಯವರದು ವೃಶ್ಚಿಕ ರಾಶಿ. ಈ ದಿನದ ಮುಹೂರ್ತ ವೃಶ್ಚಿಕ ಲಗ್ನ. ಈಗ ವೃಶ್ಚಿಕಕ್ಕೆ ಸಂಪೂರ್ಣ ಗುರುಬಲ ಇದೆ.
ವೃಶ್ಚಿಕ ಲಗ್ನದಿಂದ ಏಳನೇ ಮನೆಯಲ್ಲಿ ಗುರು, ಸೂರ್ಯ, ಬುಧ, ಶುಕ್ರ ಇದ್ದಾರೆ. ಏಳನೇ ಮನೆಯಿಂದ ಲಗ್ನವನ್ನು ನೇರವಾಗಿ ನೋಡುತ್ತಾರೆ. ಇದು ಅತ್ಯಂತ ಶಕ್ತಿಯನ್ನು ಕೊಡುತ್ತದೆ. ಭೀಮಬಲ ಕೊಡುತ್ತದೆ. ನಾಲ್ಕನೇ ಮನೆಯಲ್ಲಿ ಶನಿ ಮೂಲ ತ್ರಿಕೋಣ ಸ್ಥಾನದಲ್ಲಿ- ಸ್ವಂತ ಮನೆಯಲ್ಲಿ ಇದ್ದಾನೆ ಇದೂಕೂಡ ಬಲಯುತವಾಗಿದೆ. ಆರನೇ ಮನೆ ಶತ್ರುಸ್ಥಾನ ದಲ್ಲಿ ಕುಜ ಸ್ವಂತ ಮನೆ ಹಾಗೂ ಮೂಲತ್ರಿಕೋಣ ಸ್ಥಾನದಲ್ಲಿ ಇದ್ದಾನೆ.

ಶತ್ರು ಸ್ಥಾನದಲ್ಲಿ ಕುಜ ಇರುವುದು ಬಹಳ ಶಕ್ತಿ. ವೈರಿಗಳನ್ನು ಸದೆ ಬಡಿಯುತ್ತದೆ. ಅರ್ಥಾತ್ ಮೋದಿಯವರ ವೈರಿಗಳನ್ನು ದೂರವಿರಿಸುತ್ತದೆ ಅಥವಾ ಇವರ ತಂಟೆಗೆ ಬರದಂತೆ ಕಾಪಾಡುತ್ತದೆ. ಐದು ವರ್ಷಕಾಲ ಸರ್ಕಾರ ನಿರ್ವಿಘ್ನವಾಗಿ ನಡೆಯುತ್ತದೆ. ಎಂಬ ನಂಬಿಕೆ. ದೇಶಕ್ಕೂ ಶತ್ರುಕಾಟ ಇರುವುದಿಲ್ಲ.
ಪುನರ್ವಸು ನಕ್ಷತ್ರ ಗುರುವಿನ ನಕ್ಷತ್ರ. ಈ ನಕ್ಷತ್ರದಲ್ಲಿ ಏನೇ ಶುಭಕಾರ್ಯ ಮಾಡಿದರೂ ಪುನಃ ಪುನಃ ಮಾಡುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ ಈ ನಕ್ಷತ್ರ ಬಲದಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೂಬಹುದು. ಅದು ದೇವರಿಚ್ಛೆ. ಹೀಗಾಗಿ ಪ್ರಮಾಣವಚನದ ಸಮಯದ ಮಹೂರ್ತ ಬಹಳ ಪ್ರಶಸ್ತವಾಗಿದೆ. ದಿನ ತಿಥಿ ವಾರ ನಕ್ಷತ್ರ ಲಗ್ನ ಎಲ್ಲವೂ ಮಹೋನ್ನತವಾಗಿದೆ. ಮೋದಿಯವರ ರಾಶಿಗೆ ಗುಣಾತ್ಮಕವಾಗಿದೆ ಎಂದು ವೀಣಾರಾವ್ ವಿಶ್ಲೇಷಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications