ಅಮಿತ್ ಶಾ ಇರುವಾಗ ಹೋಟೆಲ್ ನಲ್ಲಿ ಹಾವು ಕಂಡರೆ ಹೀಗೆ ಕಥೆ ಕಟ್ಟೋದಾ?
Recommended Video

ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದಿದ್ದ ಬೆಂಗಳೂರಿನ ಹೋಟೆಲ್ ನಲ್ಲಿ ಹಾವು ಕಾಣಿಸಿಕೊಂಡ ಸುದ್ದಿಗೆ ವಿಪರೀತ ಪ್ರಾಶಸ್ತ್ಯ ಸಿಕ್ಕಿಹೋಗಿದೆ. ಮಾಧ್ಯಮದಲ್ಲೆಲ್ಲ ಅದೇ ಸುದ್ದಿ. ಅಸಲಿಗೆ ಹಾವು ಕಾಣಿಸಿಕೊಂಡಿದ್ದು ಯಾರಿಗೆ? ಅಮಿತ್ ಶಾ ಅವರಿಗಾ ಅಥವಾ ಬೇರೆ ಯಾರಿಗೆ?
ಅಮಿತ್ ಶಾ ಅವರಿಗೆ ಕಂಡಿದ್ದೇ ಆದರೆ ಅದು ಯಾವ ದಿಕ್ಕಿನಿಂದ ಯಾವ ಕಡೆಗೆ ಸಾಗಿತು? ಹೆಡೆ ಎತ್ತಿ ನಿಂತು ಕಾಣಿಸಿಕೊಂಡಿತಾ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರವಿಲ್ಲ. ಅಸಲಿಗೆ ಈ ವಿಚಾರವನ್ನು ನಾನಾ ಬಗೆಯಲ್ಲಿ ಯೋಚಿಸಬಹುದು. ಹಾವು ಕಾಣಿಸಿಕೊಂಡ ವ್ಯಕ್ತಿಗೆ ಆತನ ಜೀವನದಲ್ಲಿ ಆಗಬಹುದಾದ ಯಾವುದಾದರೂ ಘಟನೆಯ ಮುನ್ಸೂಚನೆ ಅದಾಗಿರಬಹುದು.
ಅಥವಾ ಹೋಟೆಲ್ ಮಾಲೀಕರಿಗೆ ಸಂಬಂಧಪಟ್ಟ ಘಟನೆಯೊಂದರ ಮುನ್ಸೂಚನೆ ಆಗಿರಬಹುದು. ಏಕೆಂದರೆ ಅಮಿತ್ ಶಾ ಕಣ್ಣಿಗೆ ಅಥವಾ ಅವರ ಎದುರಿಗೆ ಹಾವು ಕಾಣಿಸಿಕೊಂಡೇ ಇಲ್ಲ. ಪ್ರಾಣಿಗಳನ್ನು ಆಧರಿಸಿ ಶಕುನ ಹೇಳುವ ಪದ್ಧತಿ ಜ್ಯೋತಿಷ್ಯದಲ್ಲಿದೆ. ಆ ವಿಚಾರದಲ್ಲಿ ಎರಡು ಮಾತಿಲ್ಲ. ಆದರೆ ಅದಕ್ಕೆ ಸಂಬಂಧಿಸಿದ ಕೆಲ ವಿಚಾರಗಳನ್ನು ಸಹ ತಿಳಿಸಲಾಗಿದೆ.

ಇನ್ನೂ ವೈಜ್ಞಾನಿಕವಾಗಿ ಹೇಳಬೇಕು ಅಂದರೆ, ಒಂದು ಕಾಲದಲ್ಲಿ ಸರ್ಪಗಳ ಆವಾಸ ಸ್ಥಾನವಾಗಿದ್ದ ಕಡೆಯಲ್ಲೆಲ್ಲ ಈಗ ಮನೆ-ಮಠ, ಹೋಟೆಲ್ ಗಳನ್ನು ನಿರ್ಮಿಸಲಾಗಿದೆ. ಅವುಗಳು ಸಂಚರಿಸುವ ಸ್ಥಳದಲ್ಲಿ ಅವುಗಳೇ ಬರಬಾರದು ಎಂದು ಬಯಸುವುದು ಎಷ್ಟರ ಮಟ್ಟಿಗೆ ತರ್ಕಕ್ಕೆ ನಿಲುಕುವ ವಿಚಾರ?
ಇನ್ನು ಹಾವು ಕಾಣಿಸಿಕೊಂಡರೆ ಶುಭ ಅಥವಾ ಅಶುಭ ಎರಡೂ ಬಗೆಯ ಚಿಂತನೆ ಮಾಡುವುದಿದೆ. ಏಕಾಏಕಿ ಇದು ಅಶುಭ ಸೂಚನೆಯೇ ಎಂದು ಷರಾ ಬರೆಯುವುದಂತೂ ಬಿಲ್ ಕುಲ್ ಸರಿಯಲ್ಲ. ಈ ಹಿಂದೆ ಕುಮಾರಸ್ವಾಮಿ ಅವರ ಮನೆ ಬಳಿ ಸರ್ಪ ಕಾಣಿಸಿಕೊಂಡಿತ್ತು. ಅದಕ್ಕೆ ತಕ್ಕ ಪರಿಹಾರ- ಶಾಂತಿಯನ್ನು ಮಾಡಿಸಿಕೊಂಡಿದ್ದರು. ಅದೂ ಜ್ಯೋತಿಷ್ಯ ರೀತ್ಯಾ ಪರಿಹಾರದ ಮೂಲಕ.
ಇನ್ನು ಪ್ರಸ್ತುತ ಸನ್ನಿವೇಶದಲ್ಲಿ, ಲಘು ಧಾಟಿಯಲ್ಲಿ ಹೇಳಬೇಕೆಂದರೆ, ಹಾವು ಕಾಣಿಸಿಕೊಂಡಿದೆ ಅಂತ ತಲೆಯ ಮೇಲೆ ಗೂಬೆ ಕೂಡಿಸಲು ಹೊರಟಂತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications