ಕುಂಭ ರಾಶಿ ಯುಗಾದಿ ವರ್ಷ ಭವಿಷ್ಯ; ಆದಾಯ ಹೆಚ್ಚಳ, ವ್ಯವಹಾರದಲ್ಲಿ ಲಾಭ
ಕುಂಭ ರಾಶಿಯವರು ತಾವಾಯಿತು, ತಮ್ಮ ಪಾಡಾಯಿತು ಎಂದು ಇರುವ ಪೈಕಿಯವರಲ್ಲ. ಮೇಲ್ನೋಟಕ್ಕೆ ತಣ್ಣಗಿದ್ದರೂ ಅವರ ಆಂತರ್ಯದಲ್ಲಿ ಭಾವನೆಗಳ ಪ್ರವಾಹವೇ ಭೋರ್ಗರೆಯುತ್ತಿರುತ್ತದೆ. ಸದಾ ಬದಲಾವಣೆಗೆ ತುಡಿಯುತ್ತಿರುತ್ತಾರೆ. ಧನಿಷ್ಠ (3, 4ನೇ ಪಾದ), ಶತಭಿಷ (4 ಪಾದ) ಮತ್ತು ಪೂರ್ವಾಭಾದ್ರ (1, 2, 3ನೇ ಪಾದ) ನಕ್ಷತ್ರಗಳಲ್ಲಿ ಜನಿಸಿದವರು ಕುಂಭ ರಾಶಿಗೆ ಸೇರುತ್ತಾರೆ. ಅದೃಷ್ಟ ಸಂಖ್ಯೆ 7,.ಇವರಿಗೆ ನೀಲಿ ಶುಭ ಬಣ್ಣ, ಉತ್ತರ ಶುಭ ದಿಕ್ಕು. ಮಹಾಶಿವನ ಆರಾಧನೆ ಕುಂಭ ರಾಶಿಯವರಿಗೆ ಶ್ರೇಯಸ್ಕರ.
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ ಕುಂಭ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾಮಗಳನ್ನು ಕಾಣಬಹುದು. ಈ ಸಂವತ್ಸರದಲ್ಲಿ ಮೀನ ರಾಶಿಯವರ ಜೀವನದಲ್ಲಿ ಏನೆಲ್ಲ ಬದಲಾವಣೆಗಳು ಆಗಬಹುದು? ಯಾವ ವಿಷಯಗಳಲ್ಲಿ ಲಾಭ ಹಾಗೂ ಯಾವ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ ಎಂಬುದನ್ನು ಈ ಬರಹದಲ್ಲಿ ವಿವರಿಸಿದ್ದಾರೆ ಪಂಡಿತ್ ವಿಠ್ಠಲ್ ಭಟ್.
ಕುಂಭ ರಾಶಿ - ಪರಾಭವ ನಾಮ ಸಂವತ್ಸರ (19.03.2026 - 06.04.2027)
ಆದಾಯ: 13
ವ್ಯಯ: 11
ರಾಜಮರ್ಯಾದೆ: 7
ಅವಮಾನ: 2
ಪರಾಭವ ನಾಮ ಸಂವತ್ಸರವು ಕುಂಭ ರಾಶಿಯವರಿಗೆ ಪ್ರಗತಿ, ಹೊಸ ಆಲೋಚನೆಗಳು ಮತ್ತು ಸಾಧನೆಯ ವರ್ಷವಾಗಿರುತ್ತದೆ. ಆದಾಯದಲ್ಲಿ ಏರಿಕೆ ಕಂಡುಬರುತ್ತದೆ. ಹೊಸ ವ್ಯವಹಾರ, ತಂತ್ರಜ್ಞಾನ ಅಥವಾ ಸೃಜನಾತ್ಮಕ ಕಾರ್ಯಗಳಿಂದ ಲಾಭ ಸಾಧ್ಯ. ಖರ್ಚು ನಿಯಂತ್ರಣದಲ್ಲಿರುವುದರಿಂದ ಉಳಿತಾಯ ಹೆಚ್ಚಾಗುತ್ತದೆ. ದೀರ್ಘಕಾಲಿಕ ಹೂಡಿಕೆಗಳು ಉತ್ತಮ ಫಲ ನೀಡುವ ಸೂಚನೆ ಇದೆ.

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಅಥವಾ ಪ್ರಮುಖ ಜವಾಬ್ದಾರಿಗಳು ದೊರೆಯಬಹುದು. ನಿಮ್ಮ ಹೊಸ ಆಲೋಚನೆಗಳು ಮತ್ತು ವಿಭಿನ್ನ ದೃಷ್ಟಿಕೋನ ಮೇಲಧಿಕಾರಿಗಳ ಗಮನ ಸೆಳೆಯುತ್ತವೆ. ವಿದೇಶ ಸಂಬಂಧಿತ ಕೆಲಸಗಳು ಅಥವಾ ಆನ್ಲೈನ್ ವ್ಯವಹಾರಗಳಲ್ಲಿ ಯಶಸ್ಸು ಸಾಧ್ಯ. ವ್ಯಾಪಾರಸ್ಥರಿಗೆ ಹೊಸ ಪಾಲುದಾರಿಕೆ ಮತ್ತು ವಿಸ್ತರಣೆ ಅವಕಾಶಗಳು ದೊರೆಯುತ್ತವೆ.
ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಹೊಂದಾಣಿಕೆ ಹೆಚ್ಚಾಗುತ್ತದೆ. ಮನೆದಲ್ಲಿ ಶುಭಕಾರ್ಯಗಳು ನಡೆಯುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಪರಸ್ಪರ ಗೌರವ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಉತ್ತಮ ಫಲ ಹಾಗೂ ಉನ್ನತ ಶಿಕ್ಷಣದ ಅವಕಾಶ ಸಿಗುತ್ತದೆ.
ಆರೋಗ್ಯ ಸಾಮಾನ್ಯವಾಗಿ ಉತ್ತಮವಾಗಿರುತ್ತದೆ. ಆದರೂ ನಿದ್ರಾಭಂಗ ಅಥವಾ ಮಾನಸಿಕ ಒತ್ತಡ ತಪ್ಪಿಸಲು ಯೋಗ, ಪ್ರಾಣಾಯಾಮ ಉಪಕಾರಿ.
ಧಾರ್ಮಿಕ ಯಾತ್ರೆ, ಗುರು ಪೂಜೆ ಅಥವಾ ದಾನ ಧರ್ಮಗಳು ಹೆಚ್ಚು ಶುಭಫಲ ನೀಡುತ್ತವೆ. ಶತ್ರುಗಳ ಮೇಲೆ ಜಯ ಸಾಧಿಸಿ ನಿಮ್ಮ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸಬಹುದು. ಒಟ್ಟಾರೆ ಈ ವರ್ಷ ಕುಂಭ ರಾಶಿಯವರಿಗೆ ಗೌರವ, ಆರ್ಥಿಕ ಬೆಳವಣಿಗೆ ಮತ್ತು ಸಮಗ್ರ ಯಶಸ್ಸನ್ನು ತರುವ ಶ್ರೇಷ್ಠ ಸಂವತ್ಸರವಾಗಿರುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications