ಸಿಂಹ ರಾಶಿ ಯುಗಾದಿ ವರ್ಷ ಭವಿಷ್ಯ; ಅತ್ಯಂತ ಶುಭಕರ, ಸಾಧನೆಗೆ ಸಾಕ್ಷಿಯಾಗುವ ವರ್ಷ
ಸಿಂಹ ರಾಶಿಯವರದ್ದು ಹಟಮಾರಿ ಮನಸ್ಥಿತಿ. ನಾಯಕತ್ವದ ಸ್ವಭಾವ, ಸವಾಲುಗಳು ಬೇಕೆನ್ನುವ ಜೀವ. ಮಖ (4 ಪಾದ), ಪುಬ್ಬಾ - ಪೂರ್ವಾಫಲ್ಗುಣಿ (4 ಪಾದ) ಮತ್ತು ಉತ್ತರಾ ಫಲ್ಗುಣಿ (1ನೇ ಪಾದ) ನಕ್ಷತ್ರಗಳಲ್ಲಿ ಜನಿಸಿದವರು ಸಿಂಹ ರಾಶಿಗೆ ಸೇರುತ್ತಾರೆ. ಅದೃಷ್ಟ ಸಂಖ್ಯೆ 1, ಇವರಿಗೆ ಕಿತ್ತಳೆ ಶುಭ ಬಣ್ಣ, ಪೂರ್ವ ಶುಭ ದಿಕ್ಕು. ಸೂರ್ಯನ ಆರಾಧನೆ ಸಿಂಹ ರಾಶಿಯವರಿಗೆ ಶ್ರೇಯಸ್ಕರ.
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಸಿಂಹ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾಮಗಳನ್ನು ಕಾಣಬಹುದು. ಈ ಸಂವತ್ಸರದಲ್ಲಿ ಮೀನ ರಾಶಿಯವರ ಜೀವನದಲ್ಲಿ ಏನೆಲ್ಲ ಬದಲಾವಣೆಗಳು ಆಗಬಹುದು? ಯಾವ ವಿಷಯಗಳಲ್ಲಿ ಲಾಭ ಹಾಗೂ ಯಾವ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ ಎಂಬುದನ್ನು ಈ ಬರಹದಲ್ಲಿ ವಿವರಿಸಿದ್ದಾರೆ ಪಂಡಿತ್ ವಿಠ್ಠಲ್ ಭಟ್.
ಸಿಂಹ ರಾಶಿ - ಪರಾಭವ ನಾಮ ಸಂವತ್ಸರ (19.03.2026 - 06.04.2027)
ಆದಾಯ: 15
ವ್ಯಯ: 9
ರಾಜಮರ್ಯಾದೆ: 8
ಅವಮಾನ: 2
ಪರಾಭವ ನಾಮ ಸಂವತ್ಸರವು ಸಿಂಹ ರಾಶಿಯವರಿಗೆ ಅತ್ಯಂತ ಶುಭಕರ ಮತ್ತು ಸಾಧನೆಯ ವರ್ಷವಾಗಿರುತ್ತದೆ. ಆದಾಯದ ಮಟ್ಟದಲ್ಲಿ ಸ್ಪಷ್ಟವಾದ ಏರಿಕೆ ಕಂಡುಬರುತ್ತದೆ. ಹಳೆಯ ಹೂಡಿಕೆಗಳು ಉತ್ತಮ ಲಾಭ ತರುತ್ತವೆ ಮತ್ತು ಹೊಸ ಅವಕಾಶಗಳು ಆರ್ಥಿಕ ಸ್ಥಿರತೆಯನ್ನು ಹೆಚ್ಚಿಸುತ್ತವೆ. ಖರ್ಚು ನಿಯಂತ್ರಣದಲ್ಲಿರುವುದರಿಂದ ಉಳಿತಾಯ ಹೆಚ್ಚಾಗುವ ಸಾಧ್ಯತೆ ಇದೆ.

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ, ಗೌರವ ಮತ್ತು ಹೆಚ್ಚುವರಿ ಜವಾಬ್ದಾರಿಗಳು ದೊರೆಯುತ್ತವೆ. ಮೇಲಧಿಕಾರಿಗಳ ಮೆಚ್ಚುಗೆ ಹಾಗೂ ಸಹೋದ್ಯೋಗಿಗಳ ಗೌರವ ಹೆಚ್ಚಾಗುತ್ತದೆ. ರಾಜಮರ್ಯಾದೆ ಉತ್ತಮವಾಗಿರುವುದರಿಂದ ಸಮಾಜದಲ್ಲಿ ಸ್ಥಾನಮಾನ ವೃದ್ಧಿಯಾಗುತ್ತದೆ. ನಾಯಕತ್ವ ಗುಣಗಳು ಹೊರಹೊಮ್ಮುತ್ತವೆ. ವ್ಯಾಪಾರಸ್ಥರಿಗೆ ಹೊಸ ಒಪ್ಪಂದಗಳು ಹಾಗೂ ದೊಡ್ಡ ಲಾಭದ ಅವಕಾಶಗಳು ದೊರೆಯುತ್ತವೆ.
ಕುಟುಂಬ ಜೀವನದಲ್ಲಿ ಸಂತೋಷಕರ ವಾತಾವರಣ ಇರುತ್ತದೆ. ಮನೆದಲ್ಲಿ ಶುಭಕಾರ್ಯಗಳು ನಡೆಯುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಪರಸ್ಪರ ಗೌರವ ಮತ್ತು ಪ್ರೀತಿ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲ ಸಿಗುತ್ತದೆ.
ಆರೋಗ್ಯ ಉತ್ತಮವಾಗಿದ್ದರೂ ಅತಿಯಾದ ಶ್ರಮದಿಂದ ದೂರವಿರುವುದು ಒಳಿತು. ನಿಯಮಿತ ವ್ಯಾಯಾಮ ಮತ್ತು ಸಮತೋಲನ ಆಹಾರ ಸಹಕಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು, ಸೂರ್ಯನಾರಾಯಣ ಆರಾಧನೆ ಅಥವಾ ದಾನ ಧರ್ಮಗಳು ಹೆಚ್ಚು ಶುಭಫಲ ನೀಡುತ್ತವೆ.
ಒಟ್ಟಾರೆ ಈ ವರ್ಷ ಸಿಂಹ ರಾಶಿಯವರಿಗೆ ಯಶಸ್ಸು, ಗೌರವ, ಆರ್ಥಿಕ ಅಭಿವೃದ್ಧಿ ಮತ್ತು ಸಮಾಜದಲ್ಲಿ ಪ್ರಭಾವ ಹೆಚ್ಚಿಸುವ ಶಕ್ತಿಶಾಲಿ ಸಂವತ್ಸರವಾಗಿರುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications