ವೃಷಭ ರಾಶಿ ಯುಗಾದಿ ವರ್ಷ ಭವಿಷ್ಯ; ಆರೋಗ್ಯ ಜೋಪಾನ, ಖರ್ಚಿನ ಮೇಲೆ ಇರಲಿ ಹಿಡಿತ
ವೃಷಭ ರಾಶಿಯವರದ್ದು ಸ್ಥಿರ ಮನಸ್ಥಿತಿ. ಒಂದು ಸಲ ಒಂದು ತೀರ್ಮಾನ ತೆಗೆದುಕೊಂಡರೆ ನಂತರ ಅದನ್ನು ಬದಲಿಸುವುದು ಕಷ್ಟ. ಕೃತಿಕಾ (2, 3, 4ನೇ ಪಾದ), ರೋಹಿಣಿ (4 ಪಾದ) ಮತ್ತು ಮೃಗಶಿರ (1 ಮತ್ತು 2ನೇ ಪಾದ) ನಕ್ಷತ್ರಗಳಲ್ಲಿ ಜನಿಸಿದರು ವೃಷಭ ರಾಶಿಗೆ ಸೇರುತ್ತಾರೆ. ಅದೃಷ್ಟ ಸಂಖ್ಯೆ 6, ಇವರಿಗೆ ಬಿಳಿ ಶುಭ ಬಣ್ಣ, ದಕ್ಷಿಣ ಶುಭ ದಿಕ್ಕು. ಲಕ್ಷ್ಮೀದೇವಿಯ ಆರಾಧನೆ ವೃಷಭ ರಾಶಿಯವರಿಗೆ ಶ್ರೇಯಸ್ಕರ.
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ವೃಷಭ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾಮಗಳನ್ನು ಕಾಣಬಹುದು. ಈ ಸಂವತ್ಸರದಲ್ಲಿ ಮೀನ ರಾಶಿಯವರ ಜೀವನದಲ್ಲಿ ಏನೆಲ್ಲ ಬದಲಾವಣೆಗಳು ಆಗಬಹುದು? ಯಾವ ವಿಷಯಗಳಲ್ಲಿ ಲಾಭ ಹಾಗೂ ಯಾವ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ ಎಂಬುದನ್ನು ಈ ಬರಹದಲ್ಲಿ ವಿವರಿಸಿದ್ದಾರೆ ಪಂಡಿತ್ ವಿಠ್ಠಲ್ ಭಟ್.
ವೃಷಭ ರಾಶಿ - ಪರಾಭವ ನಾಮ ಸಂವತ್ಸರ (19.03.2026 - 06.04.2027)
ಆದಾಯ: 12
ವ್ಯಯ: 13
ರಾಜಮರ್ಯಾದೆ: 5
ಅವಮಾನ: 4
ಪರಾಭವ ನಾಮ ಸಂವತ್ಸರವು ವೃಷಭ ರಾಶಿಯವರಿಗೆ ಮಿಶ್ರ ಫಲಗಳನ್ನು ನೀಡುವ ವರ್ಷವಾಗಿರುತ್ತದೆ. ಆದಾಯ ಸ್ಥಿರವಾಗಿದ್ದರೂ ಖರ್ಚುಗಳು ಹೆಚ್ಚಾಗುವ ಸೂಚನೆ ಕಂಡುಬರುತ್ತದೆ. ಮನೆ, ವಾಹನ, ಕುಟುಂಬದ ಅಗತ್ಯಗಳು ಅಥವಾ ವೈದ್ಯಕೀಯ ಕಾರಣಗಳಿಂದ ಅನಿವಾರ್ಯ ವೆಚ್ಚಗಳು ಸಂಭವಿಸಬಹುದು. ಆದ್ದರಿಂದ ಹಣಕಾಸು ಯೋಜನೆಗೆ ಹೆಚ್ಚು ಗಮನ ಹರಿಸುವುದು ಒಳಿತು.

ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸಿಗಬಹುದು. ವರ್ಗಾವಣೆ ಅಥವಾ ಹುದ್ದೆಯ ಬದಲಾವಣೆ ಸಾಧ್ಯತೆ ಇದೆ. ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಉತ್ತಮವಾಗಿದ್ದರೆ ಪ್ರಗತಿ ಸಾಧ್ಯ. ವ್ಯಾಪಾರಸ್ಥರಿಗೆ ಧೈರ್ಯ ಮತ್ತು ಸಮಚಿತ್ತತೆ ಇದ್ದರೆ ನಿಧಾನವಾದರೂ ಸ್ಥಿರ ಲಾಭ ದೊರೆಯುತ್ತದೆ. ಹಳೆಯ ಸ್ನೇಹಿತರು ಅಥವಾ ಪರಿಚಿತರ ಸಹಾಯದಿಂದ ಒಂದು ಪ್ರಮುಖ ಕಾರ್ಯ ಯಶಸ್ವಿಯಾಗಬಹುದು.
ಆಸ್ತಿ ವ್ಯವಹಾರಗಳಲ್ಲಿ ಜಾಗ್ರತೆ ಅಗತ್ಯ. ದಾಖಲೆ ಪರಿಶೀಲನೆ ಮಾಡಿ ನಿರ್ಧಾರ ಕೈಗೊಳ್ಳುವುದು ಉತ್ತಮ. ಆರೋಗ್ಯದ ವಿಷಯದಲ್ಲಿ ಜೀರ್ಣಕ್ರಿಯೆ, ಕಂಠ ಅಥವಾ ಕಫ ಸಂಬಂಧಿತ ತೊಂದರೆಗಳು ಕಾಣಬಹುದು; ನಿಯಮಿತ ವ್ಯಾಯಾಮ ಮತ್ತು ಸರಿಯಾದ ಆಹಾರ ಮುಖ್ಯ. ಕುಟುಂಬದಲ್ಲಿ ಸಹಕಾರ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಪರಸ್ಪರ ಅರ್ಥೈಸಿಕೊಳ್ಳುವಿಕೆ ಅಗತ್ಯ. ಧಾರ್ಮಿಕ ಯಾತ್ರೆ, ಪುಣ್ಯ ಕಾರ್ಯಗಳು ಅಥವಾ ದೇವಾಲಯ ದರ್ಶನದಿಂದ ಮನಶಾಂತಿ ಲಭಿಸುತ್ತದೆ. ಶಾಂತಿ, ಸಹನೆ ಮತ್ತು ನಿಯಂತ್ರಿತ ವ್ಯವಹಾರದಿಂದ ಈ ವರ್ಷವನ್ನು ಯಶಸ್ವಿಯಾಗಿ ಮುನ್ನಡೆಸಬಹುದು. ಒಟ್ಟಾರೆ ಸವಾಲುಗಳಿದ್ದರೂ ಸಮತೋಲನದಿಂದ ನಡೆದುಕೊಂಡರೆ ಉತ್ತಮ ಫಲ ಸಿಗುವ ಸಂವತ್ಸರ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications