Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು
ಮನೆ ಕಟ್ಟುವ ಮೊದಲು ಭೂಮಿಯ ಸ್ಥಿತಿಯನ್ನು ಪರಿಶೀಲಿಸುವುದು ಅತ್ಯಂತ ಮುಖ್ಯವಾಗಿದೆ. ಆದರೆ ಕೆಲವೊಮ್ಮೆ ಹಳೆಯ ಬಾವಿ ಅಥವಾ ಹೊಂಡಗಳನ್ನು ಸರಿಯಾಗಿ ತುಂಬಿಸದೇ ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿರುವ ಘಟನೆಗಳು ನಂತರ ಬೆಳಕಿಗೆ ಬರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು? ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮೇಲೆ ಆಗುವ ಪರಿಣಾಮಗಳೇನು? ಇದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಬಾವಿ ಇರುವ ಸ್ಥಳ ಮುಖ್ಯ
ವಾಸ್ತು ಶಾಸ್ತ್ರದ ಪ್ರಕಾರ ಮನೆಯೊಳಗೆ ಅಥವಾ ಮನೆಯ ಅವರಣದಲ್ಲಿ ಬಾವಿ ಇರುವುದು ತಪ್ಪಲ್ಲ ಆದರೆ ವಾಸ್ತು ಪ್ರಕಾರ ಯಾವ ದಿಕ್ಕಿನಲ್ಲಿ ಇದೆ ಎಂಬುದು ಅತ್ಯಂತ ಮುಖ್ಯವಾಗಿದೆ.
ಈಶಾನ್ಯ ದಿಕ್ಕಿನಲ್ಲಿ ಬಾವಿ ಇದ್ದರೆ ಅದನ್ನು ಶುಭ ಎಂದು ಪರಿಗಣಿಸಲಾಗುತ್ತದೆ. ಆದರೆ ಅದು ಮನೆಯ ಅಡಿಯಲ್ಲಿ ಇರದೆ ಪ್ರತ್ಯೇಕವಾಗಿ ಇದ್ದರೆ ಉತ್ತಮ ಫಲ ನೀಡುತ್ತದೆ ಎಂದು ತಜ್ಞರ ಅಭಿಪ್ರಾಯ.

ಇನ್ನೊಂದೆಡೆ ನೈಋತ್ಯ (ದಕ್ಷಿಣ-ಪಶ್ಚಿಮ) ಅಥವಾ ಆಗ್ನೇಯ (ದಕ್ಷಿಣ-ಪೂರ್ವ) ದಿಕ್ಕಿನಲ್ಲಿ ಬಾವಿ ಇದ್ದರೆ ಅದು ಅಶುಭ ಎಂದು ಮತ್ತು ಇದರಿಂದ ಕೆಟ್ಟ ಪರಿಣಾಮಗಳು ಉಂಟುಮಾಡುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.
ವಿಶೇಷವಾಗಿ ನೈಋತ್ಯದಲ್ಲಿ ಹಳೆಯ ಬಾವಿ ಇದ್ದು ಅದನ್ನು ತುಂಬಿಸಿ ಮನೆ ಕಟ್ಟಿಸಿದರೆ ಇದರಿಂದ ಆರ್ಥಿಕ ಸಮಸ್ಯೆಗಳು ಹಾಗೂ ಆರೋಗ್ಯದ ತೊಂದರೆಗಳು ಎದುರಾಗುವ ಸಾಧ್ಯತೆ ಇದೆ.
ಹಳೆಯ ಬಾವಿಯನ್ನು ಹೇಗೆ ತುಂಬಿಸಬೇಕು?
ಹಳೆಯ ಬಾವಿಗಳನ್ನು ಸರಿಯಾಗಿ ಮುಚ್ಚುವುದು ಅತ್ಯಂತ ಮುಖ್ಯವಾಗಿದೆ, ಕೇವಲ ಮಣ್ಣಿನಿಂದ ಮುಚ್ಚುವುದು ವಾಸ್ತು ಪ್ರಕಾರ ಸರಿಯಾದ ವಿಧಾನವಲ್ಲ.
ಸರಿಯಾದ ವಿಧಾನ
ಮೊದಲು ಬಾವಿಯಲ್ಲಿರುವ ನೀರನ್ನು ಸಂಪೂರ್ಣವಾಗಿ ತೆಗೆಯಬೇಕು.
ಒಳಗಿರುವ ಕಸ ಮತ್ತು ಮಣ್ಣನ್ನು ತೆಗೆದು ಸ್ವಚ್ಚಗೊಳಿಸಬೇಕು.
ನಂತರ ಹಂತ ಹಂತವಾಗಿ ಕಲ್ಲು, ಮರಳು ಮತ್ತು ಮಣ್ಣಿನಿಂದ ತುಂಬಬೇಕು
ಕೊನೆಯಲ್ಲಿ ಶಾಂತಿ ಪೂಜೆ ಮತ್ತು ವಾಸ್ತು ಶಾಂತಿಯನ್ನು ಮಾಡುವುದರಿಂದ ಉತ್ತಮ ಫಲ ಸಿಗುತ್ತದೆ ಎಂದು ತಜ್ಞರು ಹೇಳುತ್ತಾರೆ.
ಮನೆಯ ಕೆಳಗೆ ಬಾವಿ ಇದೆ ಎಂದು ಸಂದೇಹ ಬಂದರೆ
ನೀವು ವಾಸಿಸುತ್ತಿರುವ ಮನೆಯ ಕೆಳಗೆ ಬಾವಿ ಅಥವಾ ಹೊಂಡ ಇದೆ ಎಂದು ಅನುಮಾನ ಬಂದರೆ ಇದಕ್ಕೆ ಭಯಪಡುವ ಅಗತ್ಯವಿಲ್ಲ ಇದಕ್ಕೆ ವಾಸ್ತು ಶಾಸ್ತ್ರದಲ್ಲಿ ಕೆಲವು ಪರಿಹಾರಗಳಿವೆ. ನೈಋತ್ಯ ಭಾಗದಲ್ಲಿ ಇದ್ದರೆ ಆ ಭಾಗದಲ್ಲಿ ಭಾರವಾದ ವಸ್ತುಗಳನ್ನು ಇಡುವುದು ಉತ್ತಮ. ತಾಮ್ರದ ತಂತಿ (Copper wire) ಹಾಗೂ ವಾಸ್ತು ಶಾಸ್ತ್ರದ ಪಿರಮಿಡ್ಗಳನ್ನು ನೆಲದಲ್ಲಿ ಹೂಳುವುದರಿಂದ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತದೆ ಎಂದು ನಂಬಲಾಗಿದೆ.
ಮನೆ ಖರೀದಿಸುವ ಮೊದಲು ಗಮನಿಸಬೇಕಾದ ವಿಷಯಗಳು
ಭೂಮಿ ಅಥವಾ ಮನೆಯನ್ನು ಖರೀದಿಸುವ ಮೊದಲು ಕೆಳಗಿನ ವಿಚಾರಗಳನ್ನು ಪರಿಶೀಲಿಸುವುದು ಪ್ರಮುಖ ವಿಷಯವಾಗಿದೆ. ಹಿಂದೆ ಆ ಸ್ಥಳದಲ್ಲಿ ಬಾವಿ ಅಥವಾ ಹೊಂಡ ಇತ್ತ ಅಥವಾ ಇಲ್ಲವೆಂದು ಪರಿಶೀಲಿಸಬೇಕು.
ಬಾವಿ ಇದ್ದರೆ ಅದನ್ನು ಹೇಗೆ ಮುಚ್ಚಲಾಗಿದೆ?
ಸ್ಥಳೀಯರಿಂದ ಅಥವಾ ಹಳೆಯ ದಾಖಲೆಗಳಿಂದ ಮಾಹಿತಿ ಪಡೆಯುವುದು ಉತ್ತಮ.
ತಜ್ಙರ ಸಲಹೆ ಇದಕ್ಕೆ ಅಗತ್ಯ
ನೀವು ವಾಸಿಸುವ ಮನೆಯಲ್ಲಿ ಪದೇ ಪದೇ ಸಮಸ್ಯೆಗಳು ಎದುರಾಗುತ್ತಿದ್ದರೆ ಉದಾಹರಣೆಗೆ
ಆರ್ಥಿಕ ಸಮಸ್ಯೆಗಳು
ಆರೋಗ್ಯದ ಮೇಲೆ ಆಗುವ ಪರಿಣಾಮ
ಅನಗತ್ಯ ಭಯ ಉಂಟಾಗುವುದು
ಮನೆಯ ಸಮೃದ್ದಿ ಕುಂಟಿತ ಆಗುತ್ತದೆ.
ಇಂತಹ ಸಂದರ್ಭಗಳಲ್ಲಿ ನಾವು ವಾಸ್ತು ತಜ್ಞರನ್ನು ಸಂಪರ್ಕಿಸುವುದು ಉತ್ತಮ. ಭೂಮಿಯೊಳಗಿನ ದೋಷಗಳನ್ನು ಗುರುತಿಸಿ ಅದಕ್ಕೆ ಸರಿಯಾದ ಪರಿಹಾರಗಳನ್ನು ಪಡೆಯಬಹುದು.
-
ವಾಸ್ತು ಸರಿಯಿದ್ದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ, ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಈ ಸರಳ ವಾಸ್ತು ಟಿಪ್ಸ್ ಪಾಲಿಸಿ -
ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಬಾಳೆಹಣ್ಣು ತಿನ್ನುವ ಸರಿಯಾದ ಕ್ರಮ ಯಾವುದು? ಈ ಸಣ್ಣ ತಪ್ಪು ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ














Click it and Unblock the Notifications