ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ
ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.
ವಿಶೇಷವಾಗಿ ಈಶಾನ್ಯ ದಿಕ್ಕಿನಲ್ಲಿ ಭಾರವಾದ ವಸ್ತುಗಳನ್ನು ಇಡುವುದು ಅಶುಭ ಎಂದು ಹೇಳಲಾಗುತ್ತದೆ. ಅದೇ ರೀತಿ ನೈಋತ್ಯ ಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದರೆ ಮನೆಯ ಸದಸ್ಯರಿಗೆ ಅನಾನುಕೂಲಗಳು ಉಂಟಾಗುವ ಸಾಧ್ಯತೆಯು ಇರುತ್ತದೆ.

ದಿಕ್ಕಿನ ಪ್ರಕಾರ ಖಾಲಿ ಜಾಗದ ನಿಯಮಗಳು
ವಾಸ್ತು ಪ್ರಕಾರ ಮನೆಯ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿ ಹೆಚ್ಚು ಖಾಲಿಯಾದ ಜಾಗ ಇರಬೇಕು. ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಕಡಿಮೆ ಜಾಗ ಇದ್ದರೆ ಒಳ್ಳೆಯದು ಎಂದು ಹೇಳಲಾಗುತ್ತದೆ. ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಜಾಗವು ಖಾಲಿ ಇದ್ದರೆ ಮತ್ತು ಅದು ಮನೆಗಿಂತ ಎತ್ತರದಲ್ಲಿ ಇದ್ದರೆ ಅದು ಉತ್ತಮ ಎಂದು ತಜ್ಞರ ಅಭಿಪ್ರಾಯವಾಗಿದೆ.
ನೈಋತ್ಯ ದಿಕ್ಕಿನಲ್ಲಿ ಭಾರವಾದ ವಸ್ತುಗಳನ್ನು ಇಡುವುದು ಸೂಕ್ತ. ಆದರೆ ಈಶಾನ್ಯ ಭಾಗದಲ್ಲಿ ಶೆಡ್ ಅಥವಾ ಕೊಠಡಿಗಳನ್ನು ನಿರ್ಮಿಸುವುದು ತಪ್ಪು ಎಂದು ತಜ್ಞರು ಸೂಚಿಸುತ್ತಾರೆ.
ತೋಟ ಮತ್ತು ಸಸ್ಯಗಳ ವ್ಯವಸ್ಥೆ
ಖಾಲಿ ಜಾಗದಲ್ಲಿ ತೋಟ ಬೆಳೆಸುವವರು ದಿಕ್ಕಿನ ಆಯ್ಕೆಯಲ್ಲಿ ಜಾಗರೂಕರಾಗಿರಬೇಕು. ಪೂರ್ವ ಮತ್ತು ಉತ್ತರ ಭಾಗಗಳಲ್ಲಿ ಸಣ್ಣ ಗಿಡಗಳನ್ನು ನೆಡುವುದು ಉತ್ತಮ. ತುಳಸಿ ಮುಂತಾದ ಸಸ್ಯಗಳು ಶುಭಕರವೆಂದು ಪರಿಗಣಿಸಲಾಗುತ್ತದೆ.
ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ದೊಡ್ಡ ಮರಗಳನ್ನು ನೆಡಬಹುದು. ಆದರೆ ಮರಗಳನ್ನು ಗೋಡೆಯ ಹತ್ತಿರ ನೆಡುವುದನ್ನು ಒಳ್ಳೆಯದಲ್ಲಾ ಇದರಿಂದ ಮನೆಯ ಗೋಡೆಗೆ ತೊಂದರೆ ಅಗುತ್ತದೆ ಆದ್ದರಿಂದ ಸ್ವಲ್ಪ ದೂರದಲ್ಲಿ ನೆಡುವುದು ಸೂಕ್ತ.
ನೀರಿನ ವ್ಯವಸ್ಥೆ ಹೇಗಿರಬೇಕು?
ಕೊಳವೆಬಾವಿ, ಬಾವಿ ಅಥವಾ ಭೂಮಿಯೊಳಗೆ ಮಾಡಿರುವ ನೀರಿನ ಟ್ಯಾಂಕ್ಗಳನ್ನು ಈಶಾನ್ಯ ದಿಕ್ಕಿನಲ್ಲಿ ಮಾತ್ರ ಇಡಬೇಕು. ಆಗ್ನೇಯ ಅಥವಾ ನೈಋತ್ಯ ಭಾಗದಲ್ಲಿ ನೀರಿನ ಟ್ಯಾಂಕ್ ಅಥವಾ ಹೊಂಡಗಳಿದ್ದರೆ ಹಣಕಾಸಿನ ತೊಂದರೆ ಆಗಬಹುದು ಎಂದು ನಂಬಲಾಗಿದೆ. ಕೊಳಚೆ ನೀರು ಪೂರ್ವ ಅಥವಾ ಉತ್ತರ ದಿಕ್ಕಿಗೆ ಹರಿಯುವಂತೆ ವ್ಯವಸ್ಥೆ ಮಾಡುವುದು ಉತ್ತಮ.
ಪಾರ್ಕಿಂಗ್ ವ್ಯವಸ್ಥೆಯಲ್ಲೂ ವಾಸ್ತು ಮುಖ್ಯ
ಖಾಲಿ ಜಾಗದಲ್ಲಿ ಕಾರು ನಿಲುಗಡೆಗೆ ಶೆಡ್ ನಿರ್ಮಿಸುವಾಗ ಮನೆಯ ಗೋಡೆಯನ್ನು ಮುಟ್ಟದಂತೆ ನೋಡಿಕೊಳ್ಳಬೇಕು. ವಾಯುವ್ಯ ಮತ್ತು ಆಗ್ನೇಯ ದಿಕ್ಕುಗಳು ಪಾರ್ಕಿಂಗ್ಗೆ ಸೂಕ್ತವೆಂದು ಹೇಳಲಾಗುತ್ತದೆ. ನೈಋತ್ಯದಲ್ಲಿ ಪಾರ್ಕಿಂಗ್ ಮಾಡಿದರೆ ವಾಹನಗಳ ನಿರಂತರ ರಿಪೇರಿ ಸಮಸ್ಯೆ ಎದುರಾಗಬಹುದು.
ಒಟ್ಟಿನಲ್ಲಿ ಸರಿಯಾದ ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಮನೆಗೆ ಶಾಂತಿ, ಸಮೃದ್ದಿ ಮತ್ತು ಅಭಿವೃದ್ದಿ ಹೊಂದಲು ಸಹಕಾರಿಯಾಗುತ್ತದೆ ಎಂದು ವಾಸ್ತು ತಜ್ಞರು ಅಭಿಪ್ರಾಯ ಪಡುತ್ತಾರೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications