ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ
ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.
ವಿಶೇಷವಾಗಿ ಈಶಾನ್ಯ ದಿಕ್ಕಿನಲ್ಲಿ ಭಾರವಾದ ವಸ್ತುಗಳನ್ನು ಇಡುವುದು ಅಶುಭ ಎಂದು ಹೇಳಲಾಗುತ್ತದೆ. ಅದೇ ರೀತಿ ನೈಋತ್ಯ ಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದರೆ ಮನೆಯ ಸದಸ್ಯರಿಗೆ ಅನಾನುಕೂಲಗಳು ಉಂಟಾಗುವ ಸಾಧ್ಯತೆಯು ಇರುತ್ತದೆ.

ದಿಕ್ಕಿನ ಪ್ರಕಾರ ಖಾಲಿ ಜಾಗದ ನಿಯಮಗಳು
ವಾಸ್ತು ಪ್ರಕಾರ ಮನೆಯ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿ ಹೆಚ್ಚು ಖಾಲಿಯಾದ ಜಾಗ ಇರಬೇಕು. ದಕ್ಷಿಣ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಕಡಿಮೆ ಜಾಗ ಇದ್ದರೆ ಒಳ್ಳೆಯದು ಎಂದು ಹೇಳಲಾಗುತ್ತದೆ. ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಜಾಗವು ಖಾಲಿ ಇದ್ದರೆ ಮತ್ತು ಅದು ಮನೆಗಿಂತ ಎತ್ತರದಲ್ಲಿ ಇದ್ದರೆ ಅದು ಉತ್ತಮ ಎಂದು ತಜ್ಞರ ಅಭಿಪ್ರಾಯವಾಗಿದೆ.
ನೈಋತ್ಯ ದಿಕ್ಕಿನಲ್ಲಿ ಭಾರವಾದ ವಸ್ತುಗಳನ್ನು ಇಡುವುದು ಸೂಕ್ತ. ಆದರೆ ಈಶಾನ್ಯ ಭಾಗದಲ್ಲಿ ಶೆಡ್ ಅಥವಾ ಕೊಠಡಿಗಳನ್ನು ನಿರ್ಮಿಸುವುದು ತಪ್ಪು ಎಂದು ತಜ್ಞರು ಸೂಚಿಸುತ್ತಾರೆ.
ತೋಟ ಮತ್ತು ಸಸ್ಯಗಳ ವ್ಯವಸ್ಥೆ
ಖಾಲಿ ಜಾಗದಲ್ಲಿ ತೋಟ ಬೆಳೆಸುವವರು ದಿಕ್ಕಿನ ಆಯ್ಕೆಯಲ್ಲಿ ಜಾಗರೂಕರಾಗಿರಬೇಕು. ಪೂರ್ವ ಮತ್ತು ಉತ್ತರ ಭಾಗಗಳಲ್ಲಿ ಸಣ್ಣ ಗಿಡಗಳನ್ನು ನೆಡುವುದು ಉತ್ತಮ. ತುಳಸಿ ಮುಂತಾದ ಸಸ್ಯಗಳು ಶುಭಕರವೆಂದು ಪರಿಗಣಿಸಲಾಗುತ್ತದೆ.
ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ದೊಡ್ಡ ಮರಗಳನ್ನು ನೆಡಬಹುದು. ಆದರೆ ಮರಗಳನ್ನು ಗೋಡೆಯ ಹತ್ತಿರ ನೆಡುವುದನ್ನು ಒಳ್ಳೆಯದಲ್ಲಾ ಇದರಿಂದ ಮನೆಯ ಗೋಡೆಗೆ ತೊಂದರೆ ಅಗುತ್ತದೆ ಆದ್ದರಿಂದ ಸ್ವಲ್ಪ ದೂರದಲ್ಲಿ ನೆಡುವುದು ಸೂಕ್ತ.
ನೀರಿನ ವ್ಯವಸ್ಥೆ ಹೇಗಿರಬೇಕು?
ಕೊಳವೆಬಾವಿ, ಬಾವಿ ಅಥವಾ ಭೂಮಿಯೊಳಗೆ ಮಾಡಿರುವ ನೀರಿನ ಟ್ಯಾಂಕ್ಗಳನ್ನು ಈಶಾನ್ಯ ದಿಕ್ಕಿನಲ್ಲಿ ಮಾತ್ರ ಇಡಬೇಕು. ಆಗ್ನೇಯ ಅಥವಾ ನೈಋತ್ಯ ಭಾಗದಲ್ಲಿ ನೀರಿನ ಟ್ಯಾಂಕ್ ಅಥವಾ ಹೊಂಡಗಳಿದ್ದರೆ ಹಣಕಾಸಿನ ತೊಂದರೆ ಆಗಬಹುದು ಎಂದು ನಂಬಲಾಗಿದೆ. ಕೊಳಚೆ ನೀರು ಪೂರ್ವ ಅಥವಾ ಉತ್ತರ ದಿಕ್ಕಿಗೆ ಹರಿಯುವಂತೆ ವ್ಯವಸ್ಥೆ ಮಾಡುವುದು ಉತ್ತಮ.
ಪಾರ್ಕಿಂಗ್ ವ್ಯವಸ್ಥೆಯಲ್ಲೂ ವಾಸ್ತು ಮುಖ್ಯ
ಖಾಲಿ ಜಾಗದಲ್ಲಿ ಕಾರು ನಿಲುಗಡೆಗೆ ಶೆಡ್ ನಿರ್ಮಿಸುವಾಗ ಮನೆಯ ಗೋಡೆಯನ್ನು ಮುಟ್ಟದಂತೆ ನೋಡಿಕೊಳ್ಳಬೇಕು. ವಾಯುವ್ಯ ಮತ್ತು ಆಗ್ನೇಯ ದಿಕ್ಕುಗಳು ಪಾರ್ಕಿಂಗ್ಗೆ ಸೂಕ್ತವೆಂದು ಹೇಳಲಾಗುತ್ತದೆ. ನೈಋತ್ಯದಲ್ಲಿ ಪಾರ್ಕಿಂಗ್ ಮಾಡಿದರೆ ವಾಹನಗಳ ನಿರಂತರ ರಿಪೇರಿ ಸಮಸ್ಯೆ ಎದುರಾಗಬಹುದು.
ಒಟ್ಟಿನಲ್ಲಿ ಸರಿಯಾದ ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಮನೆಗೆ ಶಾಂತಿ, ಸಮೃದ್ದಿ ಮತ್ತು ಅಭಿವೃದ್ದಿ ಹೊಂದಲು ಸಹಕಾರಿಯಾಗುತ್ತದೆ ಎಂದು ವಾಸ್ತು ತಜ್ಞರು ಅಭಿಪ್ರಾಯ ಪಡುತ್ತಾರೆ.
-
ವಾಸ್ತು ಸರಿಯಿದ್ದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ, ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಈ ಸರಳ ವಾಸ್ತು ಟಿಪ್ಸ್ ಪಾಲಿಸಿ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ಮನೆ ನಿರ್ಮಾಣಕ್ಕೂ ಮೊದಲು ತಿಳಿಯಲೇಬೇಕಾದ ವಾಸ್ತು ರಹಸ್ಯ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ














Click it and Unblock the Notifications