ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿಯುತ್ತದೆ. ಆದರೆ ಕೆಲವೊಮ್ಮೆ ಮನೆಗಳಲ್ಲಿ ಜಗಳಗಳು, ಮನಶಾಂತಿಯ ಕೊರತೆ ಮತ್ತು ಆರ್ಥಿಕ ಹಿನ್ನಡೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ವಾಸ್ತು ದೋಷವೂ ಒಂದು ಪ್ರಮುಖ ಕಾರಣವಾಗಿರಬಹುದು ಎಂದು ಹೇಳಲಾಗುತ್ತದೆ.
ಈ ಸಮಸ್ಯೆಗಳನ್ನು ನಿವಾರಿಸಲು ಬಾತ್ರೂಮ್ ಮತ್ತು ಟಾಯ್ಲೆಟ್ನಲ್ಲಿ ಉಪ್ಪನ್ನು ಇಡುವುದು ಉಪಯುಕ್ತವಾಗಿದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ಸ್ಥಳಗಳಲ್ಲಿ ನೆಗೆಟಿವ್ ಎನರ್ಜಿ ಹೆಚ್ಚಿರುತ್ತದೆ ಎನ್ನುವ ನಂಬಿಕೆ ಇದೆ. ಆದ್ದರಿಂದ ಉಪ್ಪುನ್ನು ಬಾತ್ರೂಮ್ ಇಟ್ಟರೆ ಆ ನೆಗೆಟಿವ್ ಶಕ್ತಿಯನ್ನು ಹೀರಿಕೊಳ್ಳುವ ಗುಣ ಹೊಂದಿದೆ ಎಂದು ಹೇಳಲಾಗುತ್ತದೆ.

ಹೇಗೆ ಬಳಸಬೇಕು?
ಸಮುದ್ರ ಉಪ್ಪನ್ನು ಒಂದು ಗಾಜಿನ ಪಾತ್ರೆಯಲ್ಲಿ ಹಾಕಿ ನೀರು ಬೀಳದ ಜಾಗ ಅಥವಾ ಬಾತ್ರೂಮ್ನ ಮೂಲೆಯಲ್ಲಿ ಇಡಬೇಕು. ಇತರ ಪಾತ್ರೆಗಳ ಬದಲು ಗಾಜಿನ ಪಾತ್ರೆಯನ್ನು ಬಳಸುವುದು ಒಳ್ಳೆಯದು. ಪ್ರತೀ ವಾರ ಉಪ್ಪನ್ನು ಬದಲಾಯಿಸಬೇಕು. ಹಳೆಯ ಉಪ್ಪನ್ನು ತೆಗೆದು ಅಥವಾ ನೀರಿನಲ್ಲಿ ಕರಗಿಸಿ ಆ ನೀರನ್ನು ಚೆಲ್ಲಬೇಕು.
ಲಾಭಗಳೇನು?
ಈ ವಿಧಾನದಿಂದ ಮನೆಯ ವಾತಾವರಣ ಸುಧಾರಿಸುತ್ತದೆ ಎಂದು ನಂಬಲಾಗಿದೆ. ಮನಶಾಂತಿ ಕೂಡ ಹೆಚ್ಚುತ್ತದೆ, ಕುಟುಂಬದ ಸದಸ್ಯರ ನಡುವಿನ ಸಂಬಂಧಗಳು ಬಲವಾಗುತ್ತವೆ ಎಂದು ವಾಸ್ತು ತಜ್ಙರ ಅಭಿಪ್ರಾಯ ಆಗಿದೆ. ಉಪ್ಪು ತೇವವಾಗಿದ್ರೆ ಅದು ನೆಗೆಟಿವ್ ಎನರ್ಜಿ ಹೀರಿಕೊಂಡಿದೆ ಎಂಬ ಸೂಚನೆ ಸೂಚಿಸುತ್ತದೆ.
ಅದೇ ರೀತಿ, ಸ್ನಾನವನ್ನು ಮಾಡುವ ನೀರಿಗೆ ಸ್ವಲ್ಪ ಉಪ್ಪು ಸೇರಿಸುವುದರಿಂದ ನಮ್ಮ ದೇಹದಲ್ಲಿನ ನೆಗೆಟಿವ್ ಎನರ್ಜಿ ಕಡಿಮೆಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ ದೊರೆಯುತ್ತದೆ ಎಂಬ ನಂಬಿಕೆ ಇದೆ.
ವಾಸ್ತು ಪ್ರಕಾರ ಉಪ್ಪಿನ ಈ ಸರಳ ಉಪಾಯಗಳು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ವಾಸ್ತು ಶಾಸ್ತ್ರ ತಜ್ಞರು ಅಭಿಪ್ರಾಯಪಡುತ್ತಾರೆ.
-
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ














Click it and Unblock the Notifications