Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ
ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕೂಡ ವಾಸ್ತು ಪ್ರಕಾರ ಇಡಬೇಕು ಎಂದು ಹೇಳಲಾಗುತ್ತದೆ.ನೀರಿನ ಟ್ಯಾಂಕ್ ತುಂಬಾ ಭಾರವಾಗಿರುವುದರಿಂದ ಅದರ ದಿಕ್ಕು ಮತ್ತು ಸ್ಥಳದ ಬಗ್ಗೆ ವಿಶೇಷ ಗಮನ ನೀಡಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.
ಸಾಮಾನ್ಯವಾಗಿ ನೀರಿನ ಟ್ಯಾಂಕ್ ನಿರ್ಮಾಣದಲ್ಲಿ ಸಮಸ್ಯೆಯಿಲ್ಲ, ಆದರೆ ಕೆಲವರು ಟ್ಯಾಂಕ್ ಭಾರವಾಗಿರಲಿ ಎಂಬ ಕಾರಣಕ್ಕೆ ದಕ್ಷಿಣ-ಪಶ್ಚಿಮ ದಿಕ್ಕಿನಲ್ಲಿ ನಿರ್ಮಿಸುತ್ತಾರೆ. ಈ ದಿಕ್ಕಿನಲ್ಲಿ ಭಾರ ಇರಬೇಕು ಎಂಬುದು ಸರಿ. ಆದರೆ ಆ ಭಾರವು ನೀರಿನ ರೂಪದಲ್ಲಿ ಇರಬಾರದು ಎಂದು ವಾಸ್ತು ಹೇಳುತ್ತದೆ. ನೀರಿನ ಟ್ಯಾಂಕ್ ಅನ್ನು ಉತ್ತರ ಅಥವಾ ಪಶ್ಚಿಮ ದಿಕ್ಕಿನಲ್ಲಿ ನಿರ್ಮಿಸುವುದು ಉತ್ತಮ.

ಇನ್ನೂ ನೀರು ದ್ರವ ರೂಪ ಹೊಂದಿರುವುದರಿಂದ ಸರಿಯಾದ ವಾಸ್ತು ದಿಕ್ಕಿನಲ್ಲಿ ಇರದಿದ್ದರೆ ಹಣಕಾಸಿನ ತೊಂದರೆ ಹಾಗೂ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎನ್ನಲಾಗುತ್ತದೆ. ಈ ಕಾರಣದಿಂದ ಈಶಾನ್ಯ ದಿಕ್ಕಿನಲ್ಲಿ ನೀರಿನ ಟ್ಯಾಂಕ್ ನಿರ್ಮಿಸುವುದು ತಪ್ಪು ಎಂದು ತಜ್ಞರ ಹೇಳುತ್ತಾರೆ. ಈ ಭಾಗ ಸದಾ ಹಗುರವಾಗಿರಬೇಕು. ಇಲ್ಲಿ ಟ್ಯಾಂಕ್ ನಿರ್ಮಿಸುವುದಾಗಲಿ, ಇಡುವುದಾಗಲಿ ಮಾಡಿದರೆ ಆರ್ಥಿಕ ನಷ್ಟಗಳು ಹಾಗೂ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇರುತ್ತದೆ.
ಅದೇ ರೀತಿ ಆಗ್ನೇಯ ದಿಕ್ಕಿನಲ್ಲಿ ಕೂಡ ಟ್ಯಾಂಕ್ ನಿರ್ಮಿಸುವುದು ಸೂಕ್ತವಲ್ಲ. ಇದು ಅಗ್ನಿ ತತ್ತ್ವದ ಸ್ಥಳವಾಗಿರುವುದರಿಂದ ನೀರು ಮತ್ತು ಅಗ್ನಿಯ ಸಂಘರ್ಷದಿಂದ ಅಪಘಾತಗಳ ಸಾಧ್ಯತೆ ಇರುತ್ತದೆ. ಮನೆಯ ಮಧ್ಯಭಾಗದಲ್ಲಿ ಯಾವುದೇ ಭಾರ ಇರಬಾರದು ಆದ್ದರಿಂದ ಟ್ಯಾಂಕ್ನ್ನು ಅಲ್ಲಿ ಇಡುವುದನ್ನು ತಪ್ಪಿಸಬೇಕು.
ನೀರಿನ ಟ್ಯಾಂಕ್ನ್ನು ನೇರವಾಗಿ ಸ್ಲ್ಯಾಬ್ ಮೇಲೆ ಇಡುವ ಬದಲು ಕನಿಷ್ಠ 1 ಅಥವಾ 2 ಅಡಿ ಎತ್ತರದ ಕಟ್ಟೆಯನ್ನು ನಿರ್ಮಿಸಿ ಅದರ ಮೇಲೆ ಇಡುವುದು ಉತ್ತಮ. ಇದರಿಂದ ಸ್ಲ್ಯಾಬ್ ಮೇಲೆ ಒತ್ತಡ ಕಡಿಮೆ ಆಗುತ್ತದೆ ಮತ್ತು ತೇವಾಂಶ ಸಮಸ್ಯೆ ಕೂಡ ಕಡಿಮೆಯಾಗುತ್ತದೆ. ಟ್ಯಾಂಕ್ನಲ್ಲಿ ನೀರು ಸೋರಿಕೆಯಾಗದಂತೆ ನೋಡಿಕೊಳ್ಳಬೇಕು. ಸೋರಿಕೆ ಇದ್ದರೆ ತಕ್ಷಣ ದುರಸ್ತಿ ಮಾಡಬೇಕು. ವಾಸ್ತು ಪ್ರಕಾರ ನೀರು ಸೋರಿಕೆ ಹಣದ ನಷ್ಟಕ್ಕೆ ಕಾರಣವಾಗುತ್ತದೆ ಎಂದು ತಜ್ಞರ ಹೇಳುತ್ತಾರೆ.
ವಾಸ್ತು ತಜ್ಞರ ಅಭಿಪ್ರಾಯದಂತೆ ದಕ್ಷಿಣ-ಪಶ್ಚಿಮ ಮೂಲೆಯಲ್ಲಿ ಸ್ವಲ್ಪ ಎತ್ತರದಲ್ಲಿ ಕಂಬಗಳನ್ನು ನಿರ್ಮಿಸಿ ಅದರ ಮೇಲೆ ನೀರಿನ ಟ್ಯಾಂಕ್ ಇಡುವುದು ಉತ್ತಮ ಪರಿಹಾರವಾಗಿದೆ. ಇದರ ಜೊತೆಗೆ ಟ್ಯಾಂಕ್ನ ಸ್ವಚ್ಛತೆಯೂ ಬಹಳ ಮುಖ್ಯವಾಗಿದೆ. ನಿಯಮಿತವಾಗಿ ಟ್ಯಾಂಕ್ ಸ್ವಚ್ಛಗೊಳಿಸದೇ ಇದ್ದರೆ ನೀರಿನ ಗುಣಮಟ್ಟ ಹಾಳಾಗಬಹುದು ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ತಿಂಗಳಿಗೆ ಕನಿಷ್ಠ ಒಂದು ಬಾರಿ ಟ್ಯಾಂಕ್ ಕ್ಲೀನ್ ಮಾಡುವುದು ಒಳ್ಳೆಯದು.
ಹಾಗೆಯೇ ಟ್ಯಾಂಕ್ ಮೇಲೆ ಮುಚ್ಚಳ ಹಾಕುವುದು ಅತ್ಯಂತ ಅಗತ್ಯ. ಇದರಿಂದ ಧೂಳು, ಕೀಟಗಳು ಮತ್ತು ಕಸದ ಪದಾರ್ಥಗಳು ಒಳಗೆ ಹೋಗುವುದನ್ನು ತಡೆಯಬಹುದು. ಸ್ವಚ್ಛ ಮತ್ತು ಸುರಕ್ಷಿತ ನೀರಿನ ಬಳಕೆಗಾಗಿ ಈ ಸಣ್ಣ ಕ್ರಮಗಳನ್ನೂ ಪಾಲಿಸುವುದು ಮುಖ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!













Click it and Unblock the Notifications