ಕಳೆದ ವರ್ಷದ (2020) ಕೋಡಿಶ್ರೀಗಳ 'ಯುಗಾದಿ ಭವಿಷ್ಯ'ದ ಸತ್ಯಾಸತ್ಯತೆ
ಯುಗಾದಿ ಭವಿಷ್ಯ, ದಸರಾ ಭವಿಷ್ಯ ಎಂದಾಗ ಆಸ್ತಿಕ ಜನರು ಕುತೂಹಲದಿಂದ ಕಾಯುವುದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ನುಡಿಯುವ ಭವಿಷ್ಯದ ಕಡೆಗೆ.
ಕೋಡಿಶ್ರೀಗಳ ಭವಿಷ್ಯ ಎಷ್ಟು ಜನಪ್ರಿಯ ಎಂದರೆ, ಒಮ್ಮೆ ಚುನಾವಣೆಯ ಸಂದರ್ಭದಲ್ಲಿ ಭವಿಷ್ಯ ನುಡಿದರು ಎನ್ನುವ ಕಾರಣಕ್ಕಾಗಿ ಚುನಾವಣಾ ಆಯೋಗ ಇವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು.
ಕಳೆದ ಯುಗಾದಿಯ ಅಂದರೆ ಶಾರ್ವರಿ ನಾಮ ಸಂವತ್ಸರದ ಭವಿಷ್ಯವನ್ನು ಕೋಡಿಶ್ರೀಗಳು ನುಡಿದಿದ್ದರು. ಶಾರ್ವರಿ ಯಿಂದ ಪ್ಲವನಾಮ ಸಂವತ್ಸರದ ವರೆಗಿನ ಭವಿಷ್ಯ ಅದಾಗಿತ್ತು. ಕೊರೊನಾ ಹಾವಳಿಯ ನಡುವೆ ಕೋಡಿಶ್ರೀಗಳು ನುಡಿದಿದ್ದ ಭವಿಷ್ಯದಲ್ಲಿ ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ಶ್ರೀಗಳು ನುಡಿದಿದ್ದರು.
ಹಾಗಾದರೆ, ಕಳೆದ ಯುಗಾದಿಯ ವೇಳೆ, ಕೊರೊನಾ, ಪಾಕೃತಿಕ ವಿಕೋಪ ಮುಂತಾದ ವಿಚಾರಗಳಲ್ಲಿ ಕೋಡಿಶ್ರೀಗಳು ನುಡಿದಿದ್ದ ಭವಿಷ್ಯವಾದರೂ ಏನು ಎನ್ನುವುದನ್ನು ಸ್ಲೈಡಿನಲ್ಲಿ ಮುಂದುವರಿಸಲಾಗಿದೆ.

ಜಗತ್ತಿನ ಭೂ ಪಟದಲ್ಲಿ ಒಂದು ದೇಶ ಸಂಪೂರ್ಣ ನಾಶವಾಗಲಿದೆ
''ಜಗತ್ತಿನಾದ್ಯಂತ ಕೊರೊನಾ ವ್ಯಾಧಿ ಇನ್ನೂ ಉಲ್ಬಣವಾಗುವ ಲಕ್ಷಣವಿದೆ. ಈ ವ್ಯಾಧಿ ದಿನೇ ದಿನೇ ಹೆಚ್ಚುತ್ತಾ ಮನುಷ್ಯರ ಪ್ರಾಣದ ಜೊತೆ ತಾಂಡವವಾಡುತ್ತೆ. ಗಿಡ, ಮರ, ಪ್ರಾಣಿಗಳಿಗೂ ಈ ವ್ಯಾಧಿ ಘೋರವಾಗಿ ಅಪ್ಪಳಿಸಲಿದೆ. ಜಗತ್ತಿನ ಭೂ ಪಟದಲ್ಲಿ ಒಂದು ದೇಶ ಸಂಪೂರ್ಣ ನಾಶವಾಗಲಿದೆ'' ಎಂದು ಕೋಡಿಶ್ರೀಗಳು ಭವಿಷ್ಯ ನುಡಿದಿದ್ದರು. ಆದರೆ, ಕೊರೊನಾ ತೀವ್ರವಾಗಿ ಹರಿದಾಡುತ್ತಿದ್ದರೂ, ಒಂದು ದೇಶ ನಾಶವಾದ ಬಗ್ಗೆ ಎಲ್ಲೂ ವರದಿಯಾಗಿಲ್ಲ.

ಭಾರತ ಧರ್ಮ ಭೂಮಿಯಾಗಿದ್ದು, ದೇಶಕ್ಕೆ ಅಪಾಯವಿಲ್ಲ
''ಭಾರತ ಧರ್ಮ ಭೂಮಿಯಾಗಿದ್ದು, ಈ ವ್ಯಾಧಿ ಜಗತ್ತಿಗೆ ಮುತ್ತಿಗೆ ಹಾಕಿ ಕೊಲ್ಲುತ್ತಾ ಹೋದರೂ, ಭಾರತ ದೇಶಕ್ಕೆ ಅಪಾಯವಿಲ್ಲ. ಭಾರತೀಯರು ಹೆದರಬೇಕಾಗಿಲ್ಲ. ಅವರವರ ಇಷ್ಟ ದೇವರ ಪ್ರಾರ್ಥನೆ ಸಲ್ಲಿಸಬೇಕು. ಭಾರತದಲ್ಲಿ ಈ ವೈರಾಣು ಎಷ್ಟೇ ಎತ್ತರಕ್ಕೆ ಹೋದರೂ, ಈ ಭೂಮಿಯ ಪುಣ್ಯ ಫಲದಿಂದ ತನ್ನನ್ನು ತಾನೇ ಕಳೆದುಕೊಳ್ಳುತ್ತೆ'' ಅಂತ ಕೋಡಿಶ್ರೀಗಳು ಹೇಳಿದ್ದರು. ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿ ಹರಿದಾಡುತ್ತಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಿನವೊಂದಕ್ಕೆ ವರದಿಯಾಗುತ್ತಿದೆ. ಇದುವರೆಗೆ ಭಾರತದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 1,73,123ಕ್ಕೇರಿದೆ.

ಹೊಸ ಶಾಸನ ಬರುವ ನಿರೀಕ್ಷೆಯಿದೆ, ಶಾಸನಗಳನ್ನು ಅರಸ ಅರಿತು ಮಾಡಿದರೆ ಒಳಿತು
''ಹೊಸ ಶಾಸನ ಬರುವ ನಿರೀಕ್ಷೆಯಿದೆ. ಬರುವ ಶಾಸನಗಳನ್ನು ಅರಸ ಅರಿತು ಮಾಡಿದರೆ ಒಳಿತು. ಅತೃಪ್ತ ಪ್ರಜೆಗಳು ಅರಸನ ವಿರುದ್ಧ ದಂಗೆ ಏಳಬಹುದು. ಅರಸು ಪಟ್ಟಕ್ಕೂ ಭಂಗವಾಗುವ ಲಕ್ಷಣವಿದೆ. ಶಾಸನಗಳು ಮಾರಕ, ಪೂರಕವಾಗಲಿವೆ'' ಎನ್ನುವ ಭವಿಷ್ಯ ಶ್ರೀಗಳಿಂದ ಬಂದಿತ್ತು. ಆದರೆ, ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ.

ಈ ಸಂವತ್ಸರ ಪರ್ಯಂತ ರೋಗ ಇರಲಿದ್ದು, ಜಗತ್ತಿಗೆ ಪೀಡೆಯಾಗಲಿದೆ
''ಈ ಸಂವತ್ಸರ ಪರ್ಯಂತ ರೋಗ ಇರಲಿದ್ದು, ಜಗತ್ತಿಗೆ ಪೀಡೆಯಾಗಲಿದೆ. ಈ ರೋಗದಿಂದ ಅನೇಕ ಅರಸರು ನಿಯಂತ್ರಣ ಮಾಡಲಾಗದೆ, ಪ್ರಜೆಗಳ ನಿಯಂತ್ರಣ ಮಾಡಲಾಗದೆ ಪಟ್ಟ ಕಳೆದುಕೊಳ್ಳುವ ಲಕ್ಷಣವಿದೆ. ಈ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಪ್ರಜೆಗಳು ಅವಶ್ಯಕವಾಗಿ ಹೊಂದಿಕೊಂಡು, ಸರ್ಕಾರದ ಜೊತೆ ಕೈಜೋಡಿಸಬೇಕು. ಇಲ್ಲವಾದರೆ ಸಾವಿಗೆ ತಾವೇ ಆಹ್ವಾನ ಕೊಟ್ಟಂತೆ ಆಗುತ್ತದೆ''ಎನ್ನುವ ಕೋಡಿಶ್ರೀಗಳ ಭವಿಷ್ಯ ನಿಜವಾಗಿದೆ (ಪಟ್ಟ ಕಳೆದುಕೊಳ್ಳುವ ವಿಚಾರ ಹೊರತು ಪಡಿಸಿ).
Recommended Video

ಮಳೆ ವಿಚಾರದಲ್ಲಿ ಭೂಮಿಯೆಲ್ಲ ಒದ್ದೆಯಾದೀತು
''ಮಳೆ ವಿಚಾರದಲ್ಲಿ ಭೂಮಿಯೆಲ್ಲ ಒದ್ದೆಯಾದೀತು. ಕೆಲವೆಡೆ ವೃಷ್ಟಿ ಅನಾವೃಷ್ಟಿ ಆಗಲಿದೆ. ಪಂಚಭೂತಗಳಿಂದಲೂ ಈ ಬಾರಿ ತೊಂದರೆಯಾಗಲಿದೆ. ಭೂಮಿ ಕಂಪನವಾಗಿ ಇಬ್ಭಾಗವಾಗಲಿದೆ. ಮಳೆ ಬೆಳೆ ಬಂದು ಹೆಚ್ಚು ಫಸಲು ಬಂದರೂ, ಅದಕ್ಕೆ ರೋಗ ಕಾಡಲಿದೆ. ಕೆಲವು ನದಿಗಳು ಉಕ್ಕಿ ಹರಿದರೆ ಕೆಲವು ನದಿಗಳು ಬರಡಾಗುತ್ತವೆ. ಬಹುಪಾಲು ಜಲಪ್ರಳಯವಾಗುವ ಲಕ್ಷಣವಿದೆ'' ಎನ್ನುವ ಶ್ರೀಗಳ ಭವಿಷ್ಯವೂ ನಿಜವಾಗಿತ್ತು. ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಾಗಿ ಅಪಾರ ಪ್ರಮಾಣದ ಹಾನಿಯಾಗಿತ್ತು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications